ತಮಿಳುನಾಡಿನ ಶಾಲೆ, ಕಾಲೇಜುಗಳಲ್ಲಿ 'ವಂದೇ ಮಾತರಂ' ಕಡ್ಡಾಯ
ಚೆನ್ನೈ, ಜುಲೈ 25: ತಮಿಳುನಾಡಿನ ಎಲ್ಲ ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಾರದಲ್ಲಿ ಒಮ್ಮೆಯಾದ್ರೂ ಕಡ್ಡಾಯವಾಗಿ ವಂದೇ ಮಾತರಂ ಮೊಳಗಬೇಕು ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರಿ ಹಾಗೂ ಖಾಸಗಿ ಕಚೇರಿ, ಕಾರ್ಖಾನೆಗಳಲ್ಲಿ ತಿಂಗಳಲ್ಲಿ ಒಮ್ಮೆಯಾದ್ರೂ ರಾಷ್ಟ್ರೀಯ ಗೀತೆ ಹಾಡಬೇಕು ಎಂದು ಕೋರ್ಟ್ ಆದೇಶಿಸಿದೆ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ ರಾಷ್ಟ್ರೀಯ ಗೀತೆಯನ್ನು ಹಾಡಲು ಅಥವಾ ನುಡಿಸಲು ಕಷ್ಟವಾದರೆ ಅವರಿಗೆ ಹಾಡುವಂತೆ ಒತ್ತಾಯಿಸಬಾರದು. ಹಾಡದೇ ಇರುವುದಕ್ಕೆ ಸರಿಯಾದ ಕಾರಣವನ್ನು ನೀಡಬೇಕು ಎಂದು ಕೋರ್ಟ್ ಆದೇಶದಲ್ಲಿ ಹೇಳಲಾಗಿದೆ.

ದೇಶದ ಎಲ್ಲ ಚಿತ್ರಮಂದಿರಗಳಲ್ಲಿ ಸಿನೆಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗಿಸುವಂತೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಮಹತ್ವದ ಆದೇಶ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ತಮಿಳು ಹಾಗೂ ಇಂಗ್ಲೀಷ್ ವರ್ಶನ್ನಲ್ಲಿರುವ ವಂದೇ ಮಾತರಂ ಗೀತೆಯನ್ನು ಸರ್ಕಾರದ ವೆಬ್ಸೈಟ್ನಲ್ಲಿ ಅಪ್ ಲೋಡ್ ಮಾಡಲಾಗಿದೆ.
ಕೆ.ವೀರಮಣಿ ಎಂಬುವವರು ಶಿಕ್ಷಕರ ನೇಮಕಾತಿ ಮಂಡಳಿ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ವಂದೇ ಮಾತರಂ ಹಾಡನ್ನು ಬಂಗಾಳಿಯಲ್ಲಿ ಬರೆದಿರುವುದಕ್ಕೆ 89 ಮಾರ್ಕ್ ನೀಡಲಾಗಿತ್ತು. ವೀರಮಣಿ ಕೇವಲ ಒಂದು ಅಂಕದಿಂದ ಶಿಕ್ಷಕನಾಗುವ ಅವಕಾಶ ವಂಚಿತರಾಗಿದ್ದರು. ವೀರಮಣಿ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ವೀರಮಣಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ಸರಕಾರ ವೀರಮಣಿಯನ್ನು ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಸರಕಾರಕ್ಕೆ ಆದೇಶಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications