ಜಯಲಲಿತಾರ 'ವೇದ ನಿಲಯಂ' ಬಂಗಲೆ ಸ್ಮಾರಕ ಮಾಡುವ ಆದೇಶ ವಜಾ
ಚೆನ್ನೈ, ನವೆಂಬರ್ 24; ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾರ ಚೆನ್ನೈನ ಪೋಯಸ್ ಗಾರ್ಡನ್ನ 'ವೇದ ನಿಲಯಂ' ಬಂಗಲೆಯನ್ನು ಸ್ಮಾರಕ ಮಾಡುವ ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ರಾಜ್ಯದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಎಐಎಡಿಎಂಕೆ ಸರ್ಕಾರ ವೇದ ನಿಲಯಂ ಬಂಗಲೆಯನ್ನು ಸರ್ಕಾರದ ವಶಕ್ಕೆ ಪಡೆದುಕೊಂಡು ಸ್ಮಾರಕವಾಗಿ ಪರಿವರ್ತಿಸುವುದಾಗಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಸದ್ಯ ಡಿಎಂಕೆ ಸರ್ಕಾರ ಆಡಳಿತ ನಡೆಸುತ್ತಿದೆ.
ಬಂಗಲೆಯನ್ನು ವಶಕ್ಕೆ ಪಡೆದುಕೊಂಡಿದ್ದನ್ನು ಜಯಲಲಿತಾ ಸಹೋದರ ಜಯಕುಮಾರ್ ಮಕ್ಕಳಾದ ದೀಪಾ ಮತ್ತು ದೀಪಕ್ ಮದ್ರಾಸ್ ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು. ಈ ಕುರಿತು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಬಂಗೆಲೆಯನ್ನು ದೀಪಾ ಮತ್ತು ದೀಪಕ್ಗೆ ಹಸ್ತಾಂತರ ಮಾಡುವಂತೆ ಆದೇಶ ನೀಡಿದೆ.

ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜೆ. ಜಯಲಲಿತಾ ಸುಮಾರು 50 ವರ್ಷಗಳ ಕಾಲ ವೇದ ನಿಲಯಂ ಬಂಗಲೆಯಲ್ಲಿ ವಾಸವಾಗಿದ್ದರು. ಆದರೆ ಅವರ ಮರಣಾನಂತರ ಯಾವುದೇ ವಿಲ್ ಬರೆದಿಡದ ಕಾರಣ 2020ರಲ್ಲಿ ದೀಪಾ ಮತ್ತು ದೀಪಕ್ರನ್ನು ಜಯಲಲಿತಾ ಅವರ ಅಧಿಕೃತ ಉತ್ತರಾಧಿಕಾರಿಗಳು ಎಂದು ಮದ್ರಾಸ್ ಹೈಕೋರ್ಟ್ ಘೋಷಣೆ ಮಾಡಿತ್ತು.
ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಎಐಎಡಿಎಂಕೆ ಪಕ್ಷ ದೀಪಾ ಮತ್ತು ದೀಪಕ್ ಇಚ್ಛೆಗೆ ವಿರುದ್ಧವಾಗಿ ಬಂಗಲೆಯನ್ನು ಸರ್ಕಾರದ ವಶಕ್ಕೆ ಪಡೆದಿತ್ತು. ಮುಖ್ಯಮಂತ್ರಿಯಾಗಿದ್ದ ಎಡಪ್ಪಾಡಿ ಕೆ. ಪಳನಿಸ್ವಾಮಿ ಬಂಗಲೆಯನ್ನು ಸ್ಮಾರಕವನ್ನಾಗಿ ಮಾಡುವುದಾಗಿ ಆದೇಶ ಹೊರಡಿಸಿದ್ದರು. ಮದ್ರಾಸ್ ಹೈಕೋರ್ಟ್ ಈ ಆದೇಶವನ್ನು ವಜಾಗೊಳಿಸಿದೆ.
ಬಂಗಲೆ ಕುರಿತು; ದಿ. ಜೆ. ಜಯಲಲಿತಾ ಸುಮಾರು 50 ವರ್ಷಗಳ ಕಾಲ ಚೆನ್ನೈನ ಪೋಯಸ್ ಗಾರ್ಡನ್ನ 'ವೇದ ನಿಲಯಂ' ಬಂಗಲೆಯಲ್ಲಿ ವಾಸವಾಗಿದ್ದರು. ಪ್ರಸ್ತುತ ಈ ಬಂಗಲೆ ಮೌಲ್ಯ ಸುಮಾರು ನೂರು ಕೋಟಿಯಾಗಿದೆ.
ಜಯಲಲಿತಾ ತಾಯಿ ಸಂಧ್ಯಾ 1967ರಲ್ಲಿ 1.32 ಲಕ್ಷ ರೂ.ಗಳಿಗೆ ಬಂಗಲೆಯನ್ನು ಖರೀದಿ ಮಾಡಿದ್ದರು. ಮೊದಲು ಚಿಕ್ಕ ಜಾಗದಲ್ಲಿ ಬಂಗಲೆ ಇತ್ತು. ಜಯಲಲಿತಾ ಅಕ್ಕ-ಪಕ್ಕದ ಜಾಗಗಳನ್ನು ಖರೀದಿ ಮಾಡಿ ಬಂಗಲೆಯನ್ನು ವಿಸ್ತರಣೆ ಮಾಡಿದ್ದರು.
ಎಐಎಡಿಎಂಕೆ ಪಕ್ಷದ ಕಾರ್ಯಕರ್ತರ ಪಾಲಿಗೆ ಈ ಬಂಗಲೆ ದೇವಾಲಯದಂತೆ. ಅದೇ ಕಾರಣಕ್ಕೆ 2016ರಲ್ಲಿ ಜಯಲಲಿತಾ ನಿಧನದ ಬಳಿಕ ಎಐಎಡಿಎಂಕೆ ಸರ್ಕಾರ ಬಂಗಲೆಯನ್ನು ವಶಕ್ಕೆ ಪಡೆದುಕೊಂಡು ಸ್ಮಾರಕ ಮಾಡುವುದಾಗಿ ಘೋಷಣೆ ಮಾಡಿತು. ಇದು ಪಕ್ಷದ ಕಾರ್ಯಕರ್ತರ ಇಚ್ಛೆ ಎಂದು ಸಹ ಹೇಳಿತ್ತು.
ಜಯಲಲಿತಾ ಸಹ ಬಂಗಲೆ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಮನೆಯಲ್ಲಿ ಸುಮಾರು 8 ಸಾವಿರ ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯವನ್ನು ಸಹ ನಿರ್ಮಿಸಿದ್ದರು. ಈಗ ಮದ್ರಾಸ್ ಹೈಕೋರ್ಟ್ ಆದೇಶದಂತೆ ಬಂಗಲೆ ದೀಪಾ ಮತ್ತು ದೀಪಕ್ಗೆ ಹಸ್ತಾಂತರವಾಗಲಿದೆ.
1968 ಮೇ 15ರಂದು ವೇದ ನಿಲಯಂ ಗೃಹ ಪ್ರವೇಶ ನಡೆದಿತ್ತು. ಜಯಲಲಿತಾ ತಮ್ಮ ಆಪ್ತೆಯಾದ ಶಶಿಕಲಾ ಜೊತೆ ಇದೇ ಬಂಗಲೆಯಲ್ಲಿ ವಾಸವಾಗಿದ್ದರು. ಮುಖ್ಯಮಂತ್ರಿಯಾದ ಬಳಿಕವೂ ಇದೇ ಬಂಗಲೆಯಲ್ಲಿ ವಾಸವಾಗಿದ್ದರು.
ಒಟ್ಟು ಮೂರು ಅಂತಸ್ತುಗಳನ್ನು ಹೊಂದಿರುವ ವೇದ ನಿಲಯಂ ಅನ್ನು ಸ್ಮಾರಕ ಮಾಡಲು ಉದ್ದೇಶಿಸಿದ್ದ ತಮಿಳುನಾಡು ಸರ್ಕಾರ ಬಂಗಲೆಯನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿತ್ತು. ಈ ನಿವಾಸದ ಉತ್ತರಾಧಿಕಾರಿ ಯಾರು ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಿತ್ತು.
ಜೆ. ಜಯಲಲಿತಾ ಸಮಾಧಿ ಸ್ಥಳ ಇರುವ ಮರಿನಾ ಬೀಚ್ನಲ್ಲಿ 50 ಕೋಟಿ ವೆಚ್ಚದಲ್ಲಿ ಸರ್ಕಾರ ಸ್ಮಾರಕ ನಿರ್ಮಾಣ ಮಾಡಿತ್ತು. ವೇದ ನಿಲಯಂ ಬಂಗಲೆಯನ್ನು ವಶಕ್ಕೆ ಪಡೆದುಕೊಂಡು ಅದನ್ನು ಸಹ ಸ್ಮಾರಕಗೊಳಿಸಲು ಎಐಎಡಿಎಂಕೆ ಸರ್ಕಾರ ತೀರ್ಮಾನಿಸಿತ್ತು.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಸೋಲು ಕಂಡಿತು. ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದು ಎಂ. ಕೆ. ಸ್ಟಾಲಿನ್ ಮುಖ್ಯಮಂತ್ರಿಯಾದರು. ಈಗ ಬಂಗಲೆಯನ್ನು ಸ್ಮಾರಕಗೊಳಿಸುವ ರಾಜ್ಯದ ಹಿಂದಿನ ಸರ್ಕಾರದ ಆದೇಶವನ್ನು ಸಹ ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications