Get Updates
Get notified of breaking news, exclusive insights, and must-see stories!

ವೀರಪ್ಪನ್ ಪುತ್ರಿ,ಎಂಜಿಆರ್ ದತ್ತುಪುತ್ರಿಗೆ ಮಣೆ ಹಾಕಿದ ಬಿಜೆಪಿ

ಚೆನ್ನೈ, ಜುಲೈ 16: ತಮಿಳುನಾಡು ಭಾರತೀಯ ಜನತಾ ಪಕ್ಷ(ಬಿಜೆಪಿ) ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿ ಪ್ರಕಟಣೆ ಹೊರಡಿಸಿದೆ. ಸಿನಿಮಾರಂಗ, ಸೆಲೆಬ್ರಿಟಿಗಳಿಗೆ ಮಣೆ ಹಾಕಿದೆ. ಮುಂದಿನ ವರ್ಷದ ಚುನಾವಣೆಗೂ ಮುನ್ನ ಪಕ್ಷದ ಸದಸ್ಯ ಬಲ ಹೆಚ್ಚಿಸಲು ರಾಜ್ಯಾಧ್ಯಕ್ಷ ಎಲ್ ಮುರುಗನ್ ಮುಂದಾಗಿದ್ದಾರೆ.

Recommended Video

      Drone Prathap ಆಯ್ತು ಈಗ ಕೆರೆ ಕಾಮೇಗೌಡರ ಸರದಿ | Oneindia Kannada

      ದಂತಚೋರ, ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರು ಭಾರತ ಜನತಾ ಪಕ್ಷ ಸೇರ್ಪಡೆಯಾಗಿ ತಿಂಗಳುಗಳು ಕಳೆದಿಲ್ಲ ಆಗಲೇ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

      ಬಿಜೆಪಿ ಸೇರ್ಪಡೆಗೊಂಡ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ವೃತ್ತಿಯಿಂದ ವಕೀಲೆಯಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಅವರ ಬೀಗರಾದ ನಟ ಧನುಷ್ ತಂದೆ ಕಸ್ತೂರಿ ರಾಜಾ ಅವರು ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

       Veerappans Daughter, AIADMK Founder MGRs Family Get Posts In Tamil Nadu BJP

      ಎಐಎಡಿಎಂಕೆ ಸ್ಥಾಪಕ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಎಂ.ಜಿ. ರಾಮಚಂದ್ರನ್ ಅವರ ದತ್ತುಪುತ್ರಿ ಗೀತಾ ಎಂಬುವರಿಗೂ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸ್ಥಾನ ಸಿಕ್ಕಿದೆ. ಎಂಜಿಆರ್ ಸೋದರ ಎಂಸಿ ಚಕ್ರಪಾಣಿ ಅವರ ಮೊಮ್ಮಗ ಆರ್ ಪ್ರವೀಣ್, ನಟ ರಾಧಾರವಿ ಜೊತೆಗೆ ನಟ ವಿಜಯಕುಮಾರ್, ನಿರ್ದೇಶಕ ಗಂಗೈ ಅಮರನ್ ಅವರನ್ನು ವಿಶೇಷ ಸಂಘಟಕರಾಗಿ ನೇಮಕ ಮಾಡಲಾಗಿದೆ.

      ಸಂಗೀತ ನಿರ್ದೇಶಕ ದೀನಾ, ನಿರ್ದೇಶಕ ಪೆರಾರಸು ಅವರು ಕಲೆ ಮತ್ತು ಸಂಸ್ಕೃತಿ ವಿಭಾಗದ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ನಟ ಆರ್ ಕೆ ಸುರೇಶ್ ಅವರಿಗೆ ಒಬಿಸಿ ಸೆಲ್ ನ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

      ಒಟ್ಟಾರೆ, 38ಕ್ಕೂ ಅಧಿಕ ಕಚೇರಿ ನಿರ್ವಾಹಕರನ್ನು ನೇಮಿಸಿರುವ ಮುರಗನ್, ಯುವ ಮೋರ್ಚಾ, ಮಹಿಳಾ ಮೋರ್ಚಾ, ಮೀನುಗಾರರು, ನೇಕಾರರು ಹಾಗೂ ಅಲ್ಪಸಂಖ್ಯಾತ ಘಟಕಗಳಿಗೂ ಪದಾಧಿಕಾರಿಗಳನ್ನು ನೇಮಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+