ಸಂಗೀತ ದಿಗ್ಗಜ ಎಸ್ಪಿ ಬಾಲಸುಬ್ರಹ್ಮಣ್ಯಂ ವಿಧಿವಶ
ಚೆನ್ನೈ, ಸೆ. 25: ಕಳೆದ ಒಂದೂವರೆ ತಿಂಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದ ಸಂಗೀತ ದಿಗ್ಗಜ ಶ್ರೀಪತಿ ಪಂಡಿತರಾಧ್ಯಲು ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಮಧ್ಯಾಹ್ನ 1.04ರಂದು ಕೊನೆಯುಸಿರೆಳೆದಿದ್ದಾರೆ.
ಕೊರೊನಾ ವೈರಸ್ಗೆ ತುತ್ತಾಗಿದ್ದ ಎಸ್ಪಿಬಿ ಕಳೆದ ಕೆಲವು ದಿನಗಳ ಹಿಂದೆ ಕೊರೊನಾದಿಂದ ಗುಣಮುಖರಾಗಿದ್ದರು. ಆದ್ರೆ, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರಲಿಲ್ಲ. ಕಳೆದ ಎರಡು ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ವೆಂಟಿಲೇಟರ್ ಮೂಲಕ ಉಸಿರಾಟ ನಡೆಸಿದ್ದರು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು ಅಮೆರಿಕದ ತಜ್ಞರ ನೆರವು ಕೂಡಾ ಪಡೆದುಕೊಂಡಿದ್ದರು. ಆದರೆ, ವೈದ್ಯರು ಹಾಗೂ ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.

ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನ ಕುರಿತು ಚೆನ್ನೈ ಹೆಲ್ತ್ ಕೇರ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಿದೆ. ಮಧ್ಯಾಹ್ನ 1.04ರಂದು ಕೊನೆಯುಸಿರೆಳೆದಿದ್ದಾರೆ ಎಂದು ಪುತ್ರ ಎಸ್ ಪಿ ಚರಣ್ ಎಂಜಿಎಂ ಆಸ್ಪತ್ರೆ ಹೊರಗೆ ಬಂದು ಪ್ರಕಟಿಸಿದ್ದಾರೆ.
ಸಂಗೀತ ದಿಗ್ಗಜ ಎಸ್ಪಿ ಬಾಲಸುಬ್ರಹ್ಮಣ್ಯಂ ಅಪರೂಪದ ಚಿತ್ರಗಳು
ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆ ಸೇರಿದಂತೆ ಸುಮಾರು 16 ಭಾಷೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಎಸ್ಪಿಬಿ ಹಾಡಿದ್ದರು. ಅತಿ ಹೆಚ್ಚು ಹಾಡಿಗೆ ಧ್ವನಿಯಾಗಿದ್ದ ಎಸ್ಪಿಬಿ ಅವರು ಗಿನ್ನಿಸ್ ದಾಖಲೆಗೆ ಸಹ ಪಾತ್ರರಾಗಿದ್ದಾರೆ.
Recommended Video
ತಮ್ಮ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 25 ಬಾರಿ ಆಂಧ್ರ ಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ರಾಜ್ಯ ಪ್ರಶಸ್ತಿಗಳು ಸಹ ಪಡೆದಿದ್ದಾರೆ. ಚಿತ್ರರಂಗದಲ್ಲಿ ಎಸ್ಪಿಬಿ ಅವರ ಕೊಡುಗೆಗೆ ಗೌರವಿಸಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಸಹ ಲಭಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications