ಕಮಲ್ -ರಮೇಶ್ ಜೋಡಿ ಉತ್ತಮ ವಿಲನ್ ನಿಷೇಧಕ್ಕೆ ಕರೆ
ಚೆನ್ನೈ, ಏ.7: ರಮೇಶ್ ಅರವಿಂದ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಉತ್ತಮ ವಿಲನ್ ನಿಷೇಧಕ್ಕೆ ಹಿಂದೂ ಪರ ಸಂಘಟನೆ ಕರೆ ನೀಡಿದೆ. ವಿಶ್ವ ಹಿಂದೂ ಪರಿಷತ್ ನ ತಮಿಳುನಾಡಿನ ಘಟಕ ಕಮಲ್ ಹಾಸನ್ ಅಭಿನಯದ ಸಿನಿಮಾ ನಿಷೇಧಕ್ಕೆ ಆಗ್ರಹಿಸಿದೆ.
ಉತ್ತಮ ವಿಲನ್ ಚಿತ್ರದಲ್ಲಿರುವ ಒಂದು ಹಾಡಿನ ಸಾಹಿತ್ಯ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ. ಮಹಾ ಭಾಗವತ ಪ್ರಹ್ಲಾದ ಹಾಗೂ ಹಿರಣ್ಯಕಶಿಪು ನಡುವಿನ ಸಂಭಾಷಣೆಯನ್ನು ತಿರುಚಿ ಬರೆಯಲಾದ ಈ ಸಾಹಿತ್ಯ ತೆಗೆದು ಹಾಕಬೇಕು ಇಲ್ಲವೇ ಚಿತ್ರ ಪ್ರದರ್ಶಿಸಲು ಬಿಡುವುದಿಲ್ಲ ಎಂದು ಸಂಘಟನೆ ಹೇಳಿದೆ.
ಈಗಾಗಲೇ ಚೆನ್ನೈ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ವಿಎಚ್ ಪಿ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ. ಕೆಎಲ್ ಸತ್ಯಮೂರ್ತಿ ನೇತೃತ್ವದಲ್ಲಿ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರು ಸ್ವೀಕರಿಸಿದ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಉತ್ತಮ ವಿಲನ್ ಚಿತ್ರದ ಹಾಡುಗಳು ಆನ್ ಲೈನ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಒಂದು ಹಾಡಿನಲ್ಲಿ ವಿಷ್ಣುವಿನ ಪರಮಭಕ್ತ ಪ್ರಹ್ಲಾದ ಹಾಗೂ ಆತನ ತಂದೆ ಹರಿ ವೈರಿ ಹಿರಣ್ಯಕಶಿಪು ನಡುವಿನ ಸಂಭಾಷಣೆ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.
ನಟ ರಮೇಶ್ ಅರವಿಂದ್ ಅವರ ನಿರ್ದೇಶನದ ಉತ್ತಮ ವಿಲನ್ ಚಿತ್ರವನ್ನು ಎನ್ ಲಿಂಗುಸ್ವಾಮಿ ಹಾಗೂ ಕಮಲ್ ನಿರ್ಮಿಸಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಅಸುನೀಗಿದ ನಿರ್ದೇಶಕ ಕೆ ಬಾಲಚಂದರ್ ಅವರು ಈ ಚಿತ್ರದಲ್ಲಿ ಪುಟ್ಟ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅವರಿಗೆ ಅರ್ಪಿಸಲಾಗುವುದು ಎಂದು ಕಮಲ್ ಹಾಗೂ ರಮೇಶ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications