ವಿಡಿಯೋ : ಚೆನ್ನೈನಲ್ಲಿ ಮಳೆ ಅವಾಂತರ, ಟ್ರಾಫಿಕ್ ಜಾಮ್
ಬೆಂಗಳೂರು, ನ.25: ಮಳೆ ಕಾಣದ ಊರಲ್ಲಿ ಈಗ ನಿತ್ಯ ಮಳೆಯ ಆರ್ಭಟ. ಕಚೇರಿ ಹೋಗಲು ದೋಣಿ ಬಳಸುವಂಥ ಪರಿಸ್ಥಿತಿ. ಅತ್ಯಂತ ಜನಸಾಂದ್ರತೆಯುಳ್ಳ ಪ್ರದೇಶಗಳಲ್ಲಿ ಒಂದೆನಿಸಿರುವ ಚೆನ್ನೈನಲ್ಲಿ ಟ್ರಾಫಿಕ್ ಜಾಮ್ ಆಗಲು ಮಳೆ ಬಿಟ್ಟರೆ ಬೇರೆ ಕಾರಣವಿಲ್ಲ. ಟ್ರಾಫಿಕ್ ಜಾಮ್ ಬಗ್ಗೆ ವಿಡಿಯೋ ಇಲ್ಲಿದೆ.
ಇನ್ನೂ ನಾಲ್ಕು ದಿನಗಳ ಕಾಲ ಮಳೆ ತಮಿಳುನಾಡು ಸೇರಿದಂತೆ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡುತ್ತಿದೆ. ಅದರೆ, ಚೆನ್ನೈಗೆ ಈಗ ಬೇಕಾಗಿರುವುದು ಇಂಗು ಗುಂಡಿಗಳು, ಮಳೆ ಕೊಯ್ಲು ತಜ್ಞರು, ಜಲ ಸಂಗ್ರಹ ಯೋಜನೆಗಳು. [ತಮಿಳುನಾಡಲ್ಲಿ ಕುಂಭದ್ರೋಣ ಮಳೆ, ಜನಜೀವನ ಚಿತ್ರಾನ್ನ]
ಪಕ್ಕದಲ್ಲೇ ಸಮುದ್ರ ಇಟ್ಟುಕೊಂಡು ಸರಿಯಾದ ಯೋಜನೆ ಇಲ್ಲದೆ ಇಕ್ಕಟ್ಟಾದ ಪ್ರದೇಶದಲ್ಲೇ ಎತ್ತರೆತ್ತರಕ್ಕೆ ಕಟ್ಟಡಗಳನ್ನು ಏರಿಸುತ್ತಾ ಹೋದರೆ ಮುಂದೊಂದು ದಿನ ಸುನಾಮಿ ಹಾಗಿರಲಿ, ಸಾಧಾರಣ ಮಳೆಗೆ ಚೆನ್ನೈ ಮುಳುಗಿಬಿಡುವ ಆತಂಕ ಎದುರಾಗಿದೆ. ಇದು ಪಕ್ಕದ ಬೆಂಗಳೂರಿಗೂ ಪಾಠವಾಗಲಿದೆ. ಭಾರಿ ಮಳೆ ಬಿದ್ದರೂ ಬಚಾವಾಗುವ ಮುಂಬೈನಿಂದ ಒಂದಿಷ್ಟು ವಿಷಯ ಕಲಿಯಬೇಕಿದೆ.

ಮಳೆ ನೀರು ಸರಿಯಾಗಿ ಸಾಗಲು ಹಾದಿ ಸಿಗದೆ ಮನೆ ಮಠವಲ್ಲದೆ ಸರ್ಕಾರಿ ಆಸ್ಪತ್ರೆ, ರಾಜಭವನಕ್ಕೂ ನೀರು ನುಗ್ಗಿದೆ. ಮಳೆ ನಿಂತ ಮೇಲೆ ರೋಗ ರುಜಿನಗಳು ಹಬ್ಬಿದರೆ ಏನು ಗತಿ ಎಂಬ ಪ್ರಶ್ನೆ ಕಾಡುತ್ತಿದೆ. [ಮಳೆ ಆರ್ಭಟಕ್ಕೆ 15ಕ್ಕೂ ಅಧಿಕ ರೈಲು ಸಂಚಾರ ರದ್ದು]
ಅಭಿವೃದ್ಧಿಯ ಹೆಸರಿನಲ್ಲಿ ಶ್ರೀಪೆರಂಬದೂರಿನ ತನಕ ಚೆನ್ನೈ ನಗರವನ್ನು ವಿಸ್ತರಿಸಿರುವ ತಮಿಳುನಾಡು ಸರ್ಕಾರಕ್ಕೆ ಮಳೆ ಸರಿಯಾದ ಪಾಠ ಕಲಿಸುತ್ತಿದೆ. ಸದ್ಯಕ್ಕೆ ಬೆಂಗಳೂರಿನ ಟ್ರಾಫಿಕ್ ಜಾಮ್ ಮೀರಿಸುವಂತೆ ಚೆನ್ನೈನಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ನೋಡಿ...
-
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications