ಕಿರುಕುಳ ತಾಳಲಾರದೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಆತ್ಮಹತ್ಯೆ
ವಿಲ್ಲುಪುರಂ(ತಮಿಳುನಾಡು), ಜ.24: ವಿಲ್ಲುಪುರಂನ ಖಾಸಗಿ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶನಿವಾರ ತಡರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾಲೇಜಿನ ಆಡಳಿತ ಮಂಡಳಿಯೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪೋಷಕರು ಹಾಗೂ ಸಾರ್ವಜನಿಕರ ತೀವ್ರ ಪ್ರತಿಭಟನೆ ನಂತರ ಕಾಲೇಜಿಗೆ ಬೀಗ ಹಾಕಲಾಗಿದೆ.
ವಿಲ್ಲುಪುರಂನ ಪ್ರತಿಷ್ಠಿತ ಎಸ್ ವಿಎಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗವಿಜ್ಞಾನ ವೈದ್ಯಕೀಯ ಕಾಲೇಜಿನಲ್ಲಿ ನ್ಯಾಚುರೋಪತಿ ಕೋರ್ಸ್ ಓದುತ್ತಿದ್ದ ಈ ಮೂವರು ವಿದ್ಯಾರ್ಥಿನಿಯರು ತಾವು ಈ ನಿರ್ಧಾರಕ್ಕೆ ಬರಲು ಕಾಲೇಜಿನ ಆಡಳಿತ ಮಂಡಳಿಯೇ ಕಾರಣ ಎಂದು ಆತ್ಮಹತ್ಯೆ ಪತ್ರದಲ್ಲಿ ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ, ಇದುವರೆವಿಗೂ ಯಾರನ್ನು ಬಂಧಿಸಿಲ್ಲ.[ತಾಯಿ ಮಗನನ್ನು ಕಳೆದುಕೊಂಡಿದ್ದಾಳೆ: ನರೇಂದ್ರ ಮೋದಿ]
ಮೃತ ವಿದ್ಯಾರ್ಥಿನಿಯರನ್ನು ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿ ಪ್ರಿಯಾಂಕಾ, ಟಿ ಮೋನಿಶಾ ಹಾಗೂ ಇ ಶರಣ್ಯ ಎಂದು ಗುರುತಿಸಲಾಗಿದೆ. ಮೂರು ದುಪ್ಪಟ್ಟಾ ಬಳಸಿಕೊಂಡು ಉಸಿರುಗಟ್ಟಿಸಿಕೊಂಡು ಕಾಲೇಜು ಸಮೀಪದ ಬಾವಿಗೆ ಹಾರಿದ್ದಾರೆ.
ಕಾಲೇಜು ಆಡಳಿತ ಮಂಡಳಿ ನಮ್ಮಿಂದ ಅಧಿಕ ಹಣವನ್ನು ನಿರೀಕ್ಷೆ ಮಾಡುತ್ತಿದ್ದರು. ಕಾಲೇಜಿನ ಚೇರ್ಮನ್ ವಾಸುಕಿ ಸುಬ್ರಮಣಿಯನ್ ಅವರಿಗೆ ದೂರು ನೀಡಿದರು ಪ್ರಯೋಜನವಾಗಲಿಲ್ಲ. ನಮ್ಮ ಸಾವಿನಿಂದ ಬದಲಾವಣೆ ಬರಲಿ ಎಂದು ಬಯಸಿದ್ದೇವೆ ಎಂದು ಎರಡು ಪುಟಗಳ ಆತ್ಮಹತ್ಯಾ ಪತ್ರದಲ್ಲಿ ಹೇಳಲಾಗಿದೆ.

ಈ ಹಿಂದೆ ದೂರುಗಳು ಕೇಳಿ ಬಂದಿದ್ದರೂ...
ಚೆನ್ನೈ -ಸೇಲಂ ಮುಖ್ಯರಸ್ತೆಗೆ ಹೊಂದಿಕೊಂಡಿರುವ ತಮಿಳುನಾಡಿನ ಡಾ ಎಂಜಿಆರ್ ಮೆಡಿಕಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ಈ ಕಾಲೇಜಿನ ಬಗ್ಗೆ ಈ ಹಿಂದೆ ದೂರುಗಳು ಕೇಳಿ ಬಂದಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮೃತ ವಿದ್ಯಾರ್ಥಿನಿಯರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
ಘಟನಾ ಸ್ಥಳದಿಂದ ದೊರೆತ ಮೊದಲ ಚಿತ್ರಗಳು
ಘಟನಾ ಸ್ಥಳದಿಂದ ದೊರೆತ ಮೊದಲ ಚಿತ್ರಗಳು ಹೀಗಿವೆ
|
ವಿದ್ಯಾರ್ಥಿನಿಯರ ಪೋಷಕರ ಆಕ್ರಂದನ
ವಿದ್ಯಾರ್ಥಿನಿಯರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಓದಿಗೆ ಖರ್ಚಾದ ವೆಚ್ಚ ಎಷ್ಟು?
ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರರು ಸುಮಾರು 6 ಲಕ್ಷ ರು ಖರ್ಚು ಮಾಡಿದ್ದರು ಆದರೆ, ಯಾವುದೇ ಮೂಲ ಸೌಕರ್ಯಗಳು ಅವರಿಗೆ ಸಿಕ್ಕಿರಲಿಲ್ಲ. ಕಾಲೇಜಿನ ದುಃಸ್ಥಿತಿ ಹಾಗೂ ಹೆಚ್ಚು ಫೀ ಬಗ್ಗೆ 20ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications