ಕಿರುಕುಳ ತಾಳಲಾರದೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಆತ್ಮಹತ್ಯೆ
ವಿಲ್ಲುಪುರಂ(ತಮಿಳುನಾಡು), ಜ.24: ವಿಲ್ಲುಪುರಂನ ಖಾಸಗಿ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶನಿವಾರ ತಡರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾಲೇಜಿನ ಆಡಳಿತ ಮಂಡಳಿಯೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪೋಷಕರು ಹಾಗೂ ಸಾರ್ವಜನಿಕರ ತೀವ್ರ ಪ್ರತಿಭಟನೆ ನಂತರ ಕಾಲೇಜಿಗೆ ಬೀಗ ಹಾಕಲಾಗಿದೆ.
ವಿಲ್ಲುಪುರಂನ ಪ್ರತಿಷ್ಠಿತ ಎಸ್ ವಿಎಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗವಿಜ್ಞಾನ ವೈದ್ಯಕೀಯ ಕಾಲೇಜಿನಲ್ಲಿ ನ್ಯಾಚುರೋಪತಿ ಕೋರ್ಸ್ ಓದುತ್ತಿದ್ದ ಈ ಮೂವರು ವಿದ್ಯಾರ್ಥಿನಿಯರು ತಾವು ಈ ನಿರ್ಧಾರಕ್ಕೆ ಬರಲು ಕಾಲೇಜಿನ ಆಡಳಿತ ಮಂಡಳಿಯೇ ಕಾರಣ ಎಂದು ಆತ್ಮಹತ್ಯೆ ಪತ್ರದಲ್ಲಿ ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ, ಇದುವರೆವಿಗೂ ಯಾರನ್ನು ಬಂಧಿಸಿಲ್ಲ.[ತಾಯಿ ಮಗನನ್ನು ಕಳೆದುಕೊಂಡಿದ್ದಾಳೆ: ನರೇಂದ್ರ ಮೋದಿ]
ಮೃತ ವಿದ್ಯಾರ್ಥಿನಿಯರನ್ನು ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿ ಪ್ರಿಯಾಂಕಾ, ಟಿ ಮೋನಿಶಾ ಹಾಗೂ ಇ ಶರಣ್ಯ ಎಂದು ಗುರುತಿಸಲಾಗಿದೆ. ಮೂರು ದುಪ್ಪಟ್ಟಾ ಬಳಸಿಕೊಂಡು ಉಸಿರುಗಟ್ಟಿಸಿಕೊಂಡು ಕಾಲೇಜು ಸಮೀಪದ ಬಾವಿಗೆ ಹಾರಿದ್ದಾರೆ.
ಕಾಲೇಜು ಆಡಳಿತ ಮಂಡಳಿ ನಮ್ಮಿಂದ ಅಧಿಕ ಹಣವನ್ನು ನಿರೀಕ್ಷೆ ಮಾಡುತ್ತಿದ್ದರು. ಕಾಲೇಜಿನ ಚೇರ್ಮನ್ ವಾಸುಕಿ ಸುಬ್ರಮಣಿಯನ್ ಅವರಿಗೆ ದೂರು ನೀಡಿದರು ಪ್ರಯೋಜನವಾಗಲಿಲ್ಲ. ನಮ್ಮ ಸಾವಿನಿಂದ ಬದಲಾವಣೆ ಬರಲಿ ಎಂದು ಬಯಸಿದ್ದೇವೆ ಎಂದು ಎರಡು ಪುಟಗಳ ಆತ್ಮಹತ್ಯಾ ಪತ್ರದಲ್ಲಿ ಹೇಳಲಾಗಿದೆ.

ಈ ಹಿಂದೆ ದೂರುಗಳು ಕೇಳಿ ಬಂದಿದ್ದರೂ...
ಚೆನ್ನೈ -ಸೇಲಂ ಮುಖ್ಯರಸ್ತೆಗೆ ಹೊಂದಿಕೊಂಡಿರುವ ತಮಿಳುನಾಡಿನ ಡಾ ಎಂಜಿಆರ್ ಮೆಡಿಕಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ಈ ಕಾಲೇಜಿನ ಬಗ್ಗೆ ಈ ಹಿಂದೆ ದೂರುಗಳು ಕೇಳಿ ಬಂದಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮೃತ ವಿದ್ಯಾರ್ಥಿನಿಯರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
ಘಟನಾ ಸ್ಥಳದಿಂದ ದೊರೆತ ಮೊದಲ ಚಿತ್ರಗಳು
ಘಟನಾ ಸ್ಥಳದಿಂದ ದೊರೆತ ಮೊದಲ ಚಿತ್ರಗಳು ಹೀಗಿವೆ
|
ವಿದ್ಯಾರ್ಥಿನಿಯರ ಪೋಷಕರ ಆಕ್ರಂದನ
ವಿದ್ಯಾರ್ಥಿನಿಯರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಓದಿಗೆ ಖರ್ಚಾದ ವೆಚ್ಚ ಎಷ್ಟು?
ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರರು ಸುಮಾರು 6 ಲಕ್ಷ ರು ಖರ್ಚು ಮಾಡಿದ್ದರು ಆದರೆ, ಯಾವುದೇ ಮೂಲ ಸೌಕರ್ಯಗಳು ಅವರಿಗೆ ಸಿಕ್ಕಿರಲಿಲ್ಲ. ಕಾಲೇಜಿನ ದುಃಸ್ಥಿತಿ ಹಾಗೂ ಹೆಚ್ಚು ಫೀ ಬಗ್ಗೆ 20ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications