ಪಳನಿ ಸರ್ಕಾರ ಉರುಳಿಸದೆ ಬಿಡೆವು: ಪನ್ನೀರ್ ಸೆಲ್ವಂ ಗುಡುಗು
ಜಯಲಲಿತಾ ಸ್ಮಾರಕಕ್ಕೆ ತೆರಳಿ ಸರ್ಕಾರ ಕಿತ್ತೊಗೆಯುವ ಮಾತನಾಡಿರುವುದು ಅವರ ಮುಂದಿನ ನಡೆ ಬಗ್ಗೆ ಕುತೂಹಲ ಕೆರಳಿಸಿದೆ.
ಚೆನ್ನೈ, ಫೆಬ್ರವರಿ 16: ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಶಿರಬಾಗಿ ರಚನೆಗೊಂಡಿರುವ ಪಳನಿ ಸ್ವಾಮಿ ಅವರ ನೂತನ ಸರ್ಕಾರವನ್ನು ಶೀಘ್ರವೇ ಉರುಳಿಸುವುದಾಗಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆಯ ಉಚ್ಛಾಟಿತ ನಾಯಕ ಪನ್ನೀರ್ ಸೆಲ್ವಂ ಗುಡುಗಿದ್ದಾರೆ.
ಅಕ್ರಮ ಆಸ್ತಿ ಹಿನ್ನೆಲೆಯಲ್ಲಿ ಶಶಿಕಲಾ ಜೈಲು ಸೇರಿ ತಮ್ಮ ಹಾದಿ ಸುಗಮವಾಯಿತೆನ್ನುವಷ್ಟರಲ್ಲಿ ಶಶಿಕಲಾ ಅವರಿಂದ ಪಕ್ಷದಿಂದ ಉಚ್ಛಾಟನೆಗೊಂಡಿರುವ ಪನ್ನೀರ್ ಸೆಲ್ವಂ ಗಾಯಗೊಂಡ ಹುಲಿಯಾದಂತಾಗಿದ್ದಾರೆ.
ತಮ್ಮ ಮುಖ್ಯಮಂತ್ರಿ ಪದವಿಯನ್ನು ತನ್ನ ಚಾಣಾಕ್ಷ ನಡೆಯಿಂದ ತಪ್ಪಿಸಿದ ಶಶಿಕಲಾ ವಿರುದ್ಧ ಸಡ್ಡು ಹೊಡಿದಿರುವ ಅವರು, ಶಶಿಕಲಾ ಅವರ ವಿಧೇಯ ಪಳನಿಸ್ವಾಮಿಯವರ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವ ಸಂಕಲ್ಪ ತೊಟ್ಟಿದ್ದಾರೆ.[ಪಳನಿಸ್ವಾಮಿ ಬಹುಮತ ಸಾಬೀತುಪಡಿಸಲು ಮುಹೂರ್ತ ನಿಗದಿ!]

ಇತ್ತ, ರಾಜಭವನದಲ್ಲಿ ಪಳನಿಸ್ವಾಮಿ ಸರ್ಕಾರವು ಗುರುವಾರ ಸಂಜೆ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಅತ್ತ, ತನ್ನ ಬೆಂಬಲಿತ ಎಐಎಡಿಎಂಕೆ ಶಾಸಕರು ಹಾಗೂ ಸಂಸದರೊಂದಿಗೆ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಅವರ ಸ್ಮಾರಕ್ಕೆ ಸಾಗಿದ ಪನ್ನೀರ್ ಸೆಲ್ವಂ, ಪುಷ್ಪ ನಮನ ಸಲ್ಲಿಸಿದರು.[ತಮಿಳುನಾಡಿನ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ವ್ಯಕ್ತಿಚಿತ್ರ]
ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಶಿಕಲಾ ವಿರುದ್ಧ ಹರಿಹಾಯ್ದರು. ಭ್ರಷ್ಟಾಚಾರದ ಆರೋಪಗಳ ಸರಮಾಲೆಯನ್ನೇ ಹೊತ್ತಿರುವ ಶಶಿಕಲಾ ಹಾಗೂ ಅವರ ಕುಟುಂಬ ತಮಿಳುನಾಡಿನಲ್ಲಿ ನಕಲಿ ಸರ್ಕಾರವೊಂದನ್ನು ಅಧಿಕಾರಕ್ಕೆ ತಂದಿದ್ದಾರೆಂದು ಕಿಡಿಕಾರಿದರು.
''ಹೊಸ ಸರ್ಕಾರ, ಶಶಿಕಲಾ ಅವರಿಗೆ ವಿಧೇಯವಾಗಿರುವ ಸರ್ಕಾರವಾಗಿದ್ದು, ಇದನ್ನು ಆದಷ್ಟು ಬೇಗನೇ ಕಿತ್ತೊಗೆಯುತ್ತೇವೆ'' ಎಂದು ಅವರು ಗುಡುಗಿದರು.[ತಮಿಳುನಾಡು ಮುಖ್ಯಮಂತ್ರಿಯಾಗಿ ಕೆ ಪಳನಿಸ್ವಾಮಿ]
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications