ಹಿಜಾಬ್ ವಿವಾದ: ಮದ್ರಾಸ್ ಹೈಕೋರ್ಟ್‌ನಿಂದ ಮಹತ್ವದ ಅವಲೋಕನ

ಚೆನ್ನೈ, ಫೆ.10: ದೇಶದಲ್ಲಿ ಧಾರ್ಮಿಕ ಅಸಂಗತತೆಯನ್ನು ಹುಟ್ಟುಹಾಕುವ ಕೆಲವು ಶಕ್ತಿಗಳ ಬೆಳವಣಿಗೆಯ ಪ್ರವೃತ್ತಿಯ ಬಗ್ಗೆ ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಷ್ಟ್ರ ಅಥವಾ ಧರ್ಮ ಯಾವುದು ಮುಖ್ಯ ಎಂದು ಆಶ್ಚರ್ಯ ವ್ಯಕ್ತಪಡಿಸಿದೆ.

ತಮಿಳುನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶ ನೀಡದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕೆಲ ತೀಕ್ಷ್ಣ ಅವಲೋಕನಗಳನ್ನು ಮಾಡಿದೆ.

ರಂಗರಾಜನ್ ನರಸಿಂಹನ್ ಮತ್ತು ತಮಿಳು ನಾಡು ಸರ್ಕಾರ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಡುವಣ ಪ್ರಕರಣದಲ್ಲಿ ಕೆಲ ಮಹತ್ವ ಅಂಶಗಳ ಬಗ್ಗೆ ಕೋರ್ಟ್ ಗಮನ ಹರಿಸಿದೆ.

What Is Paramount - Nation or Religion?: Madras HC on Hijab Row

ಕರ್ನಾಟಕದ ಹಿಜಾಬ್ ವಿವಾದ ನಡುವೆ, ಈ ಪ್ರಕರಣದ ವಿಚಾರಣೆ ನಡೆದಿದ್ದು, ಧರ್ಮದ ಆಧಾರದಲ್ಲಿ ದೇಶ ಒಡೆಯುವ ಯತ್ನಗಳು ನಡೆಯುತ್ತಿವೆ ಎಂಬುದನ್ನು ಇತ್ತೀಚಿನ ಘಟನೆಗಳು ತೋರಿಸುತ್ತಿವೆ ಎಂದು ಮುಖ್ಯ ನ್ಯಾಯಮೂರ್ತಿ ಎಂ ಎನ್ ಭಂಡಾರಿ ಮತ್ತು ನ್ಯಾ. ಪಿ ಡಿ ಆದಿಕೇಶವಲು ಅವರಿದ್ದ ಪೀಠ ಟೀಕಿಸಿ, ಪ್ರಕರಣವನ್ನು ಹತ್ತು ದಿನಗಳ ಕಾಲ ಮುಂದೂಡಿದೆ.

"ನಾವು ಒಂದೇ ದೇಶವೇ ಅಥವಾ ಧರ್ಮದಿಂದ ವಿಭಜನೆಗೊಂಡಿದ್ದೇವೆಯೇ? ನಾವು ಯಾವ ಸಂದೇಶ ರವಾನಿಸುತ್ತಿದ್ದೇವೆ?... ವಸ್ತ್ರ ಸಂಹಿತೆ ಇತ್ಯಾದಿಗಳನ್ನು ಕುರಿತ ದೇವಾಲಯಗಳ ಹೊರಗಿನ ಫಲಕಗಳಿಗೆ ಹೇಗೆ ಸಾಮಾನ್ಯ ನಿರ್ದೇಶನ ನೀಡಬಹುದು? ದೇಶವನ್ನು ಧರ್ಮದಿಂದ ವಿಭಜಿಸುವ ಯತ್ನವನ್ನು ಇತ್ತೀಚಿನ ಪ್ರಚಲಿತ ವಿದ್ಯಮಾನಗಳು ತೋರಿಸುತ್ತವೆ" ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

"ಇದು ನಿಜವಾಗಿಯೂ ಆಘಾತಕಾರಿಯಾಗಿದೆ, ಯಾರಾದರೂ 'ಹಿಜಾಬ್' ಬೆಂಬಲಿಸಿ ಹೋಗುತ್ತಿದ್ದಾರೆ, ಕೆಲವರು 'ಟೋಪಿ' (ಕ್ಯಾಪ್) ಮತ್ತು ಇನ್ನೂ ಕೆಲವರು ಇತರ ವಿಷಯಗಳಿಗೆ ಹೋಗುತ್ತಿದ್ದಾರೆ. ಇದು ಒಂದು ದೇಶವೇ ಅಥವಾ ಅದು ಧರ್ಮದಿಂದ ವಿಭಜನೆಯಾಗಿದೆಯೇ ಅಥವಾ ಅಂತಹದ್ದೇನಾದರೂ. ಇದು ಸಾಕಷ್ಟು ಆಶ್ಚರ್ಯಕರವಾಗಿದೆ, "ಎಂದು ಪೀಠವು ಹೇಳಿದೆ. ಭಾರತ ಜಾತ್ಯತೀತ ರಾಷ್ಟ್ರ ಎಂಬ ಅಂಶವನ್ನು ಎತ್ತಿ ಹಿಡಿದ ಎಸಿಜೆ, ''ಪ್ರಚಲಿತ ವಿದ್ಯಮಾನಗಳಿಂದ ಕಂಡು ಬರುತ್ತಿರುವುದು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ತಿರುಚಿರಾಪಳ್ಳಿ ಜಿಲ್ಲೆಯ ಶ್ರೀರಂಗಂನ ರಂಗರಾಜನ್ ನರಸಿಂಹನ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಎಸಿಜೆ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರ ಪಟ್ಟುಬಿಡದ ನಿಲುವಿನ ಬಗ್ಗೆ ಸಿಟ್ಟಿಗೆದ್ದ ಪೀಠವು, ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವುದನ್ನು ತಡೆಯುವ ಎಚ್ಚರಿಕೆಯನ್ನು ನೀಡಿತು ಮತ್ತು ಸೂಕ್ತ ಪದಗಳನ್ನು ಬಳಸಿ ಮತ್ತು ಜಗಳವಾಡುವುದನ್ನು ನಿಲ್ಲಿಸುವಂತೆ ಸೂಚಿಸಿತು. ಪ್ರತಿಯೊಂದು ದೇವಾಲಯವೂ ತನ್ನದೇ ಆದ ಸಂಪ್ರದಾಯವನ್ನು ಅನುಸರಿಸುತ್ತಿದೆ ಮತ್ತು ಇತರ ಧರ್ಮದ ಸಂದರ್ಶಕರನ್ನು 'ಕೋಡಿ ಮರಮ್' (ಧ್ವಜಸ್ತಂಭ) ವರೆಗೆ ಮಾತ್ರ ಅನುಮತಿಸಲಾಗಿದೆ ಎಂದು ತಮಿಳುನಾಡು ಅಡ್ವೊಕೇಟ್ ಜನರಲ್ ಆರ್ ಷಣ್ಮುಗಸುಂದರಂ ನ್ಯಾಯಾಲಯಕ್ಕೆ ತಿಳಿಸಿದರು.

ರಿಟ್ ಅರ್ಜಿಯ ವ್ಯಾಪ್ತಿಯನ್ನು ಮೀರಿದ ಕಾರಣ ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ಈಗಾಗಲೇ ಡ್ರೆಸ್ ಕೋಡ್ ಅನ್ನು ಸೂಚಿಸುವ ಏಕ ನ್ಯಾಯಾಧೀಶರ ಆದೇಶವನ್ನು ರದ್ದುಗೊಳಿಸಿದೆ ಎಂದು ಅವರು ನೆನಪಿಸಿಕೊಂಡರು. ಇದು ವ್ಯಾಪಕ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಗಿತ್ತು ಎಂದು ಅವರು ಗಮನಸೆಳೆದರು. ಅಂತಿಮವಾಗಿ, ಪೀಠವು ಅರ್ಜಿದಾರರಿಗೆ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿವರಣೆಗಳೊಂದಿಗೆ ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿತು.

ಕರ್ನಾಟಕದ ಪ್ರಕರಣ:
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿ ಕಾಪಾಡುವಂತೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠ ಮಂಗಳವಾರ ಮನವಿ ಮಾಡಿತ್ತು. ನಂತರ ಮುಖ್ಯ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿತ್ತು.

ಇಷ್ಟವಿರುವ ಬಟ್ಟೆ ಧರಿಸುವುದು ಸಂವಿಧಾನದ 19(ಎ) ವಿಧಿಯಡಿರುವ ಹಕ್ಕಾಗಿದ್ದು, 19(6) ಅಡಿ ಮಾತ್ರವೇ ಅದನ್ನು ನಿರ್ಬಂಧಿಸಬಹುದು ಎಂದ ಅರ್ಜಿದಾರರ ಪರ ಹಿರಿಯ ವಕೀಲ ದೇವದತ್‌ ಕಾಮತ್‌ ವಾದಿಸಿದ್ದರು.

"ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ವಿನಂತಿ ಮಾಡುತ್ತೇವೆ. ಜನರ ಬುದ್ಧಿವಂತಿಕೆ ಮತ್ತು ಸದ್ಗುಣದಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದ್ದೇವೆ. ಜನರು ಅದನ್ನು ಆಚರಣೆಗೆ ತರುತ್ತಾರೆ ಎಂದು ಭಾವಿಸಿದ್ದೇವೆ" ಎಂದು ನ್ಯಾಯಾಲಯ ಹೇಳಿದೆ.

ಹಿಜಾಬ್ ಕೇಸ್ ವಿಚಾರಣೆಯನ್ನು ಫೆ.14ರಂದು ಮುಂದಿನ ವಿಚಾರಣೆ ನಡೆಸಲು ಹೈಕೋರ್ಟ್ ತ್ರಿಸದಸ್ಯ ಪೀಠ ಮುಂದಾಗಿದೆ. ಮುಂದಿನ ಆದೇಶದ ತನಕ ಹಿಜಾಬ್, ಕೇಸರಿ ಶಲ್ಯ ಸೇರಿದಂತೆ ಯಾವುದೇ ಧಾರ್ಮಿಕ ಗುರುತು ಧರಿಸುವಂತಿಲ್ಲ, ಶಾಲೆ, ಕಾಲೇಜುಗಳನ್ನು ಶೀಘ್ರವೇ ಆರಂಭಿಸುವಂತೆ ತ್ರಿಸದಸ್ಯ ಪೀಠ ಮೌಖಿಕವಾಗಿ ಆದೇಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+