ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆಗೆ ತಮಿಳುನಾಡಿನ ವಿರೋಧವೇಕೆ?

|
Google Oneindia Kannada News

ಚೆನ್ನೈ, ನವೆಂಬರ್ 29 : ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕೈಗೆತ್ತಿಕೊಂಡಿರುವ ಯೋಜನೆಯನ್ನು ವಿರೋಧಿಸಬಾರದು ಎಂದು ಕರ್ನಾಟಕ ಹೇಳಿದೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮೊದಲ ಹಂತದ ಜಯ ಸಿಕ್ಕಿದೆ. ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿದ್ದು, ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಮೇಕೆದಾಟು ಯೋಜನೆಗೆ ಕ್ಯಾತೆ, ಮೋದಿಗೆ ತಮಿಳುನಾಡು ಪತ್ರಮೇಕೆದಾಟು ಯೋಜನೆಗೆ ಕ್ಯಾತೆ, ಮೋದಿಗೆ ತಮಿಳುನಾಡು ಪತ್ರ

ತಮಿಳುನಾಡು ಸರ್ಕಾರ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು, ಯೋಜನೆಗೆ ಅನುಮತಿ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದೆ. ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.

ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದ ವಾದವೇನು?ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದ ವಾದವೇನು?

ಕಾವೇರಿ ನ್ಯಾಯಮಂಡಳಿ ಹಂಚಿಕೆ ಮಾಡಿದ ಕರ್ನಾಟಕದ ಪಾಲನ್ನು ಮಾತ್ರ ಬಳಕೆ ಮಾಡುತ್ತಿದ್ದೇವೆ. ಆದ್ದರಿಂದ ತಮಿಳುನಾಡು ಆಕ್ಷೇಪಕ್ಕೆ ಅರ್ಥವೇ ಇಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಯೋಜನೆ ಬಗ್ಗೆ ತಮಿಳುನಾಡಿನ ವಾದವೇನು? ಚಿತ್ರಗಳಲ್ಲಿ ನೋಡಿ....

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರದ ಒಪ್ಪಿಗೆಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರದ ಒಪ್ಪಿಗೆ

ಯೋಜನೆಗೆ ವಿರೋಧ

ಯೋಜನೆಗೆ ವಿರೋಧ

ನ್ಯಾಯಮಂಡಳಿಯಲ್ಲಿ ಕಾವೇರಿ ನೀರಿನ ಹಂಚಿಕೆ ವಾದ-ವಿವಾದ ನಡೆಯುವಾಗ ಈ ಯೋಜನೆ ಬಗ್ಗೆ ಕರ್ನಾಟಕ ಪ್ರಸ್ತಾಪಿಸಿರಲಿಲ್ಲ. ಅಂತಿಮ ತೀರ್ಪು ನೀಡಿದ ಬಳಿಕ ಹೊಸ ಯೋಜನೆ ಸೇರ್ಪಡೆ ಮಾಡಲು ಬರುವುದಿಲ್ಲ.

ತಮಿಳುನಾಡು ವಾದ - 2

ತಮಿಳುನಾಡು ವಾದ - 2

ಕರ್ನಾಟಕದ ಪಾಲಿಗೆ ಅಂತಿಮ ಆದೇಶದಲ್ಲಿ 270 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ಹೆಚ್ಚುವರಿ ನೀರು ಬಳಸುವ ಕುರಿತು ತೀರ್ಪಿನಲ್ಲಿ ಪ್ರಸ್ತಾಪವಿಲ್ಲ.

ತಮಿಳುನಾಡು ವಾದ - 3

ತಮಿಳುನಾಡು ವಾದ - 3

ಕಾವೇರಿ ನದಿ ನೀರು ಹಂಚಿಕೆ, ಪ್ರಾಧಿಕಾರ ರಚನೆ ಕುರಿತ ವಿವಾದ ಇನ್ನೂ ಸುಪ್ರೀಂಕೋರ್ಟ್‌ನಲ್ಲಿದೆ. ಇದು ಇತ್ಯರ್ಥವಾಗುವ ಮುನ್ನ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡಕೂಡದು.

2013ರಲ್ಲೂ ವಿರೋಧ

2013ರಲ್ಲೂ ವಿರೋಧ

2013ರಲ್ಲಿ ಕರ್ನಾಟಕ ಸರ್ಕಾರ ಯೋಜನೆ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಯೋಜನೆಗೆ ಒಪ್ಪಿಗೆ ನೀಡುವಂತೆ ಮನವಿ ಮಾಡಿತ್ತು. ಆಗ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಒತ್ತಡ ಹಾಕಿದ್ದರು.

English summary
Central Water Commission approved for Mekedatu drinking water project in Karnataka. Tamil Nadu Chief Minister Edappadi K.Palaniswamy opposed for project. Why Tamil Nadu opposed for project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X