ಅಪ್ಪ ಮಾಡಿದ್ದಂತೆಯೇ 100 ದಿನದಲ್ಲಿ ಎಲ್ಲ ಭರವಸೆ ಈಡೇರಿಸುತ್ತೇನೆ: ಸ್ಟಾಲಿನ್
ತಿರುವಣ್ಣಾಮಲೈ, ಜನವರಿ 29: ತಮ್ಮ ತಂದೆ ಅಧಿಕಾರದಲ್ಲಿದ್ದಾಗ ನಡೆದುಕೊಂಡಂತೆಯೇ ತಾವು ಅಧಿಕಾರಕ್ಕೆ ಬಂದಾಗ ಎಲ್ಲ ಆಶ್ವಾಸನೆಗಳನ್ನೂ ಈಡೇರಿಸುವುದಾಗಿ ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಶುಕ್ರವಾರ ಭರವಸೆ ನೀಡಿದರು.
ತಮಿಳುನಾಡಿನ ತಿರುವಣ್ಣಾಮಲೈನಲ್ಲಿ 'ಉಂಗಳ್ ತೊಗುದಿಯಿಳ್ ಸ್ಟಾಲಿನ್' ಎಂಬ ಜನರನ್ನು ಸಂಪರ್ಕಿಸುವ ಗುರಿ ಹೊಂದಿರುವ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಮ್ಮ ತಂದೆ ಕರುಣಾನಿಧಿ ಅವರು ರೈತರಿಗೆ ಉಚಿತ ವಿದ್ಯುತ್, 7000 ಕೋಟಿ ರೂ ಮೊತ್ತದ ಕೃಷಿ ಸಾಲಗಳ ಮನ್ನಾ ಮತ್ತು ಕಲರ್ ಟಿವಿಗಳ ಹಂಚಿಕೆ ಸೇರಿದಂತೆ ಚುನಾವಣೆಯ ಪ್ರಚಾರದಲ್ಲಿ ನೀಡಿದ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದರು ಎಂದು ಜನರಿಗೆ ನೆನಪಿಸಿದರು.

'ನನ್ನ ತಂದೆ ಮಾಡಿದ್ದಂತೆ, ನಾನು ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿ ಬಂದ 100 ದಿನಗಳ ಒಳಗಾಗಿ ನಾನು ನೀಡುವ ಎಲ್ಲ ಭರವಸೆಗಳನ್ನೂ ಈಡೇರಿಸುತ್ತೇನೆ' ಎಂದು ಹೇಳಿದರು.
ಸ್ವಸಹಾಯ ಸಂಘಗಳ ಸ್ಥಾಪನೆ, ಹೊಗೇನಕಲ್-ರಾಮನಾಥಪುರಂ ಸಂಯೋಜಿತ ನೀರು ಪೂರೈಕೆ ವ್ಯವಸ್ಥೆ, ನಮಕ್ಕು ನಾಮಕರಣ ಯೋಜನೆ, ಅಣ್ಣಾ ಮರುಮಲರ್ಚಿ ಯೋಜನೆ ಸೇರಿದಂತೆ ತಮ್ಮ ಅನೇಕ ಸಾಧನೆಗಳ ಬಗ್ಗೆ ಹೇಳಿಕೊಂಡರು. ಜತೆಗೆ ಸ್ಥಳೀಯ ಆಡಳಿತ ಸಚಿವರಾಗಿದ್ದ ಸಂದರ್ಭದಲ್ಲಿ ಅನೇಕ ಕೈಗಾರಿಕಾ ಯೋಜನೆಗಳನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾಗಿ ತಿಳಿಸಿದರು.
'ರಾಜ್ಯದಲ್ಲಿ ಈ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ಗರ್ವಯುತ ಹೆಮ್ಮೆ ಪಡುತ್ತೇನೆ. ತಮಿಳುನಾಡನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಪರಿವರ್ತಿಸಲು ನಾನು ಯೋಜನೆಯೊಂದನ್ನು ಹೊಂದಿದ್ದೇನೆ' ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications