'ಅಮ್ಮ' ಹೆಸರಿನಲ್ಲಿ ರಾಜ್ಯಭಾರ ಮಾಡುತ್ತಿರುವವರು ಯಾರು?
ಚೆನ್ನೈ, ಅಕ್ಟೋಬರ್ 05: ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ತಮಿಳುನಾಡಿನಲ್ಲಿ ಆಡಳಿತ ಯಂತ್ರ ಕುಸಿಯದಂತೆ ನಿವೃತ್ತ ಐಎಎಸ್ ಅಧಿಕಾರಿ ಶೀಲಾ ನೋಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿದೆ. ಆದರೆ, ಎಲ್ಲವನ್ನು' ಅಮ್ಮ' ನಿಭಾಯಿಸುತ್ತಿದ್ದಾರೆ ಎಂದು ಎಐಎಡಿಎಂಕೆ ಹೇಳಿಕೊಂಡಿದೆ.
ಮುಖ್ಯಮಂತ್ರಿ ಜಯಲಲಿತಾ ಅವರು ಅನಾರೋಗ್ಯಪೀಡಿತರಾಗಿದ್ದು, ತಮಿಳುನಾಡಿನ ರಾಜ್ಯಭಾರದ ಹೊಣೆಯನ್ನು ಅವರ ಆಪ್ತ ಸಖಿ ಶಶಿಕಲಾ ನಟರಾಜನ್ ವಹಿಸಿಕೊಂಡಿದ್ದಾರೆ ಎಂಬ ಸುದ್ದಿಯಿದೆ. ಆದರೆ, ಶಶಿಕಲಾರಿಗಿಂತ ನಿವೃತ್ತ ಐಎಎಸ್ ಅಧಿಕಾರಿ ಶೀಲಾ ಬಾಲಕೃಷ್ಣನ್ (62) ಆದೇಶವೇ ನಡೆಯುತ್ತಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಜಯಲಲಿತಾ ಸಂಪುಟದ ಹಿರಿ, ಕಿರಿ ಸಚಿವರು ಕೂಡಾ ಶೀಲಾ ಅವರಿಗೆ ಸಲಾಮ್ ಮಾಡಿ ಆಜ್ಞೆ ಪಾಲಿಸುತ್ತಿದ್ದಾರೆ.[ಜಯಾ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಬಹಿರಂಗ ಪಡಿಸಿ: ಹೈಕೋರ್ಟ್]
ಕೇರಳ ಮೂಲದ ಶೀಲಾ ಭಾಸ್ಕರನ್ ಅವರ ಮೇಲೆ ಜಯಲಲಿತಾ ಅವರಿಗೆ ಅಪಾರ ವಿಶ್ವಾಸವಿದೆ. ಜಯಾ ಅವರ ಸಲಹೆ ಪಡೆದು ಕಳೆದ ವಾರದಿಂದ ಶೀಲಾ ಅವರು ರಾಜ್ಯದ ಆಡಳಿತವನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ.[ತಮಿಳರ 'ಅಮ್ಮ' ಜಯಲಲಿತಾರಿಗೆ ನಿಜಕ್ಕೂ ಏನು ಕಾಯಿಲೆ?]

ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ
ಈ ನಡುವೆ ಜಯಾ ಆರೋಗ್ಯದ ಬಗ್ಗೆ ಎರಡು ದಿನಗಳ ಒಳಗಾಗಿ ಮಾಹಿತಿ ನೀಡುವಂತೆ ಸರಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದೆ. ಆದೇಶಿಸಿದೆ. ಸಾಮಾಜಿಕ ಹೋರಾಟಗಾರರೊಬ್ಬರ ಅರ್ಜಿ ಹಿನ್ನೆಲೆಯಲ್ಲಿ ಈ ಆದೇಶ ಹೊರ ಬಂದಿದೆ.[ಜಯಾ ಸಿಂಗಪುರಕ್ಕೆ ಹೋಗ್ಲಿ ಎಂದಿದ್ದು ಬದ್ಧವೈರಿ ಸ್ವಾಮಿ!]

ಯಾರೀಕೆ ಶೀಲಾ ಬಾಲಕೃಷ್ಣನ್?
1976ರ ಬ್ಯಾಚಿನ ಐಎಎಸ್ ಅಧಿಕಾರಿ ಶೀಲಾ ಅವರು ಮೂಲತಃ ಕೇರಳದ ತಿರುವನಂತಪುರಂನವರು. 2014ರಲ್ಲಿ ಕರ್ತವ್ಯದಿಂದ ನಿವೃತ್ತರಾದ ಬಳಿಕ ಜಯಾ ಅವರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.

ಎರಡನೇ ಮಹಡಿಯಿಂದ ಕಾರ್ಯಭಾರ
ಈಗ ಅಪೋಲೊ ಆಸ್ಪತ್ರೆಯ ಎರಡನೇ ಮಹಡಿಯಿಂದ ಕಾರ್ಯಭಾರ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಜಯಾ ಅವರ ರೂಮಿನ ಅಕ್ಕ ಪಕ್ಕದಲ್ಲಿ ಶಶಿಕಲಾ ನಟರಾಜನ್ ಹಾಗೂ ಶೀಲಾ ಭಾಸ್ಕರನ್ ಅವರ ರೂಮ್ ಗಳಿವೆ.

ಜಯಾ ಅವರ ಆಪ್ತ ವರ್ಗಕ್ಕೆ ಸೇರಿದ ಶೀಲಾ
2002ರಿಂದ ಜಯಾ ಅವರ ಆಪ್ತ ವರ್ಗಕ್ಕೆ ಸೇರಿದ ಶೀಲಾ ಅವರು ಕಷ್ಟಕಾಲದಲ್ಲೂ ಜಯಾ ಅವರ ಜತೆಗಿದ್ದರು. 2011ರಲ್ಲಿ ಮತ್ತೆ ಜಯಾ ಅಧಿಕಾರಕ್ಕೆ ಬಂದರೂ 2014ರ ನಂತರ ಅಧಿಕೃತವಾಗಿ ಸಲಹೆಗಾರ್ತಿ ಪಟ್ಟಕ್ಕೇರಿದರು. ಶೀಲಾ ಅವರ ಪತಿ ಬಾಲಕೃಷ್ಣನ್ ಆರ್ ಅವರು 2012ರಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಯಾದರು. ಶೀಲಾ ಅವರು ನಿವೃತ್ತಿ ಬಳಿಕ ಜಯಾ ಅವರ ಜತೆಯಲ್ಲೇ ಹೆಜ್ಜೆ ಹಾಕತೊಡಗಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications