ಡಿಎಂಕೆ ಗೆಲುವಿಗೆ ನಾಲಗೆ ಕತ್ತರಿಸಿಕೊಂಡು ಹರಕೆ ತೀರಿಸಿದ ಮಹಿಳೆ
ಚೆನ್ನೈ, ಮೇ 3: ಡಿಎಂಕೆ ಗೆಲುವು ಸಾಧಿಸಿದ್ದಕ್ಕೆ ಮಹಿಳೆಯೊಬ್ಬರು ತಮ್ಮ ನಾಲಗೆ ಕತ್ತರಿಸಿಕೊಂಡು ಹರಕೆ ತೀರಿಸಿರುವ ಸಂಗತಿ ತಮಿಳುನಾಡಿನಲ್ಲಿ ಸೋಮವಾರ ನಡೆದಿದೆ.
ಈ ಮುನ್ನ, ತಮಿಳುನಾಡಿನಲ್ಲಿ ಡಿಎಂಕೆ ಗೆದ್ದರೆ ದೇವಿಗೆ ತಮ್ಮ ನಾಲಗೆ ಕತ್ತರಿಸಿ ಅರ್ಪಿಸುವುದಾಗಿ 32 ವರ್ಷದ ವನಿತಾ ಎಂಬುವರು ಹರಕೆ ಕಟ್ಟಿಕೊಂಡಿದ್ದರು. ಭಾನುವಾರ ಚುನಾವಣಾ ಫಲಿತಾಂಶ ಹೊರಬಂದಿದ್ದು, ಡಿಎಂಕೆ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಸೋಮವಾರ ಬೆಳಿಗ್ಗೆ ವನಿತಾ ಮುತ್ತಾಲಯಮ್ಮನ ದೇವಸ್ಥಾನಕ್ಕೆ ಹೋಗಿ ನಾಲಗೆ ಕತ್ತರಿಸಿಕೊಂಡು ದೇವಿಗೆ ಅರ್ಪಿಸಲು ಮುಂದಾಗಿದ್ದಾರೆ. ಆದರೆ ಕೊರೊನಾ ಕಾರಣವಾಗಿ ದೇವಸ್ಥಾನ ಮುಚ್ಚಿದ್ದರಿಂದ ಗೇಟ್ ಬಳಿಯೇ ನಾಲಗೆ ಹಾಕಿ ಅಲ್ಲಿಯೇ ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಶಕಗಳ ನಂತರ ಡಿಎಂಕೆ ಅಧಿಕಾರಕ್ಕೆ ಬಂದಿದೆ. ಹತ್ತು ವರ್ಷಗಳಿಂದ ವಿರೋಧ ಪಕ್ಷವಾಗಿದ್ದ ಡಿಎಂಕೆ ಈಗ ಆಡಳಿತ ಚುಕ್ಕಾಣಿ ಹಿಡಿಯಲಿದೆ. 234 ಕ್ಷೇತ್ರಗಳ ಪೈಕಿ ಡಿಎಂಕೆ ಮೈತ್ರಿಕೂಟ 159 ಸ್ಥಾನಗಳಲ್ಲಿ ಜಯಗಳಿಸಿದೆ. ಡಿಎಂಕೆ ಪಕ್ಷ ಏಕಾಂಗಿಯಾಗಿ 133 ಸ್ಥಾನಗಳಲ್ಲಿ ಜಯಗಳಿಸಿದೆ.

ಪಕ್ಷದ ಮುಖ್ಯಸ್ಥ ಎಂ. ಕೆ. ಸ್ಟಾಲಿನ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು 20 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. 4ರಲ್ಲಿ ಗೆಲುವು ಸಾಧಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications