ಎಐಎಡಿಎಂಕೆ ಫ್ಲ್ಯಾಗ್ಪೋಲ್ ತಪ್ಪಿಸಲು ಹೋಗಿ ಟ್ರಕ್ ಅಡಿಗಾದ ಯುವತಿ
ಚೆನ್ನೈ, ನವೆಂಬರ್ 12: ಟೆಕ್ಕಿ ಶುಭಶ್ರೀ ಪ್ರಕರಣ ಮಾಸುವ ಮುನ್ನವೇ ಚೆನ್ನೈನಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ.
ತಮಿಳುನಾಡಿನ ಕೊಯಮತ್ತೂರಿನ ಹೆದ್ದಾರಿಯಲ್ಲಿ ಎಐಎಡಿಎಂಕೆ ಫ್ಲ್ಯಾಗ್ಪೋಲ್ ಬೀಳುವುದನ್ನು ತಪ್ಪಿಸಲು ಪ್ರಯತ್ನಿಸಿದ 30 ವರ್ಷದ ಯುವತಿಯೊಬ್ಬಳು ಟ್ರಕ್ಗೆ ಡಿಕ್ಕಿ ಹೊಡೆದಿದ್ದಾಳೆ.
ಸ್ಕೂಟರ್ ಸವಾರಿ ಮಾಡುತ್ತಿದ್ದ ಅನುರಾಧಾ ರಾಜೇಶ್ವರಿ, ಭಾರೀ ವಾಹನದ ಮುಂಭಾಗದ ಬಲ ಚಕ್ರ ಹರಿದ ನಂತರ ಆಕೆಯ ಎರಡೂ ಕಾಲುಗಳು ಮುರಿದಿವೆ.
ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಟ್ರಕ್ ಚಾಲಕ ವೇಗದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೇಶ್ವರಿ ಕಚೇರಿಗೆ ತೆರಳುತ್ತಿದ್ದರು
ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪದವೀಧರರಾದ ಎಂ.ಎಸ್.ರಾಜೇಶ್ವರಿ ಅಪಘಾತ ಸಂಭವಿಸಿದಾಗ ಅವರು ಕಚೇರಿಗೆ ತೆರಳುತ್ತಿದ್ದರು. ಪೋಷಕರ ಒಬ್ಬಳೇ ಮುದ್ದಿನ ಮಗಳು ರಾಜೇಶ್ವರಿ. ಇದೀಗ ಎರಡು ಕಾಲುಗಳನ್ನು ಕಳೆದುಕೊಂಡಿರುವ ಮಗಳನ್ನು ನೋಡಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಸೈಕಲ್ ಸವಾರನಿಗೂ ಡಿಕ್ಕಿ ಹೊಡೆದ ಟ್ರಕ್
ಅದೇ ಟ್ರಕ್ ಮೋಟಾರ್ ಸೈಕಲ್ ಸವಾರಿ ಮಾಡುತ್ತಿದ್ದ ಇನ್ನೊಬ್ಬ ವ್ಯಕ್ತಿಗೂ ಡಿಕ್ಕಿ ಹೊಡೆದಿದೆ. ಅವರಿಗೆ ಕೈ ಮತ್ತು ಮೊಣಕಾಲಿಗೆ ಗಾಯಗಳಾಗಿವೆ. ಸೆಪ್ಟೆಂಬರ್ನಲ್ಲಿ ಚೆನ್ನೈನಲ್ಲಿ ಟೆಕ್ಕಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಸಾರ್ವಜನಿಕರ ಆಕ್ರೋಶದ ಹೊರತಾಗಿಯೂ ಈ ಅಪಘಾತ ಸಂಭವಿಸಿದೆ.

ಪಳನಿಸ್ವಾಮಿ ಸ್ವಾಗತಕ್ಕೆ ಸಿದ್ಧವಾಗಿತ್ತು ಫ್ಲ್ಯಾಗ್ಪೋಲ್
ಕೊಯಮತ್ತೂರಿನಲ್ಲಿ ಮುಖ್ಯಮಂತ್ರಿ ಇ ಪಳನಿಸ್ವಾಮಿಯನ್ನು ಸ್ವಾಗತಿಸಲು ಹೆದ್ದಾರಿಯಲ್ಲಿ ಎಐಎಡಿಎಂಕೆ ಹೋರ್ಡಿಂಗ್ ಹಾಕಲಾಗಿತ್ತು ಎಂದು ತಿಳಿದುಬಂದಿದೆ.
ಸುರಕ್ಷತೆಯ ಹಿತದೃಷ್ಟಿಯಿಂದ ರಸ್ತೆಯಲ್ಲಿ ಯಾವುದೇ ಹೋರ್ಡಿಂಗ್ಗಳನ್ನು ಇರಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ಈಗಾಗಲೇ ನಿರ್ದೇಶನ ನೀಡಿದೆ. ಈ ಆದೇಶ ಹೊರತಾಗಿಯೂ ಬ್ಯಾನರ್, ಹೋರ್ಡಿಂಗ್ಗಳು ರಾರಾಜಿಸುತ್ತಿವೆ.

ಟೆಕ್ಕಿ ಶುಭಶ್ರೀ ಸಾವಿಗೆ ಕಾರಣವಾಗಿತ್ತು ಹೋರ್ಡಿಂಗ್
ಸೆಪ್ಟೆಂಬರ್ 1ರಂದು ಟಿಕ್ಕಿ ಶುಭಶ್ರೀ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹೋರ್ಡಿಂಗ್ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಕ್ರಮ ಹೋರ್ಡಿಂಗ್ಗಳ ಬಗ್ಗೆ ಅವರ ಪೋಷಕರು ಧ್ವನಿ ಎತ್ತಿದರೆ ಹೋರ್ಡಿಂಗ್ಸ್ದೇನು ತಪ್ಪಿಲ್ಲ ಗಾಳಿಯನ್ನು ಶಿಕ್ಷಿಸಿ ಎಂದು ಹಿರಿಯ ರಾಜಕಾರಣಿಯೊಬ್ಬರು ಹೇಳಿದ್ದರು.ಈ ಅಕ್ರಮ ಬ್ಯಾನರ್, ಹೋರ್ಡಿಂಗ್ಸ್ಗಳಿಂದ ಇನ್ನೆಷ್ಟು ಪ್ರಾಣಕ್ಕೆ ಕುತ್ತುಬರುತ್ತದೋ ತಿಳಿದಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications