ರಜನಿಕಾಂತ್ಗೆ ಯಾರು ನೀವು ಎಂದು ಕೇಳಿದ ಯುವಕ: ಶಹಬ್ಬಾಸ್ ಎಂದರು ಟ್ವಿಟ್ಟಿಗರು!
ಚೆನ್ನೈ, ಜೂನ್ 1: ತೂತುಕುಡಿ ಪ್ರತಿಭಟನೆ ವೇಲೆ ನಡೆದ ಗೋಲಿಬಾರ್ ಹಾಗೂ ಘರ್ಷಣೆ ದುರಂತದಲ್ಲಿ ಗಾಯಗೊಂಡ ಸಂತ್ರಸ್ತರ ಭೇಟಿ ಮಾಡಲು ತೆರಳಿದ್ದ ಖ್ಯಾತ ನಟ ರಜನಿಕಾಂತ್ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ.
ತನ್ನ ಯೋಗ ಕ್ಷೇಮ ವಿಚಾರಿಸಲು ಬಂದ 'ತಲೈವ' ರಜನಿಗೆ 21 ವರ್ಷದ ಯುವಕನೊಬ್ಬ 'ಯಾರು ನೀವು?' ಎಂದು ಪ್ರಶ್ನಿಸಿದ್ದಾನೆ. ಅರೆ ಕ್ಷಣ ಮುಜುಗರಕ್ಕೆ ಒಳಗಾದ ರಜನಿ, ಬಳಿಕ ಸಾವರಿಸಿಕೊಂಡು 'ನಾನು ರಜನಿಕಾಂತ್' ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತೂತುಕುಡಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಲಿಬಾರ್ ಸಂತ್ರಸ್ತರನ್ನು ರಜನಿಕಾಂತ್ ಭೇಟಿ ಮಾಡಿದ್ದರು.
Who are you??? Thoothukudi Youngster questions rajinikanth in the hospital🤔🤔🤔 #Thoothukudi #Thalaivar #RajiniMakkalMandram #Rajinikanth #RajiniInThoothukudi pic.twitter.com/4MyiDYkmvL
— kumaran (@kumaran9189) 30 May 2018
ಈ ಸಂದರ್ಭದಲ್ಲಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೂತುಕುಡಿ ಸಮೀಪದ ಹಳ್ಳಿಯೊಂದರ ಬಿಕಾಂ ಪದವೀಧರ ಸಂತೋಷ್ ರಾಜ್, ರಜನಿ ಅವರನ್ನು ಆಕ್ರೋಶ ಭರಿತ ಧ್ವನಿಯಲ್ಲಿ ಪ್ರಶ್ನಿಸಿದ್ದಾರೆ. ನಾನು ರಜನಿಕಾಂತ್ ಎಂದು ಉತ್ತರಿಸಿದ ರಜನಿ, ತಕ್ಷಣ ಅಲ್ಲಿಂದ ಮುಂದಕ್ಕೆ ಹೋಗಿದ್ದಾರೆ.
ಕೆಲಹೊತ್ತಿನಲ್ಲಿಯೇ #Naan-ThanPaRajinikanth (ನಾನು ರಜನಿಕಾಂತ್) ಮತ್ತು #AntiTamilRajinikanth (ತಮಿಳುದ್ರೋಹಿ ರಜನಿಕಾಂತ್) ಎಂಬ ಹ್ಯಾಷ್ಟ್ಯಾಗ್ಗಳು ಟ್ವಿಟ್ಟರ್ನಲ್ಲಿ ಟ್ರೆಂಡ್ ಆಗಿದ್ದವು.
ಸಾಮಾಜಿಕ ಜಾಲತಾಣಗಳಲ್ಲಿ ಸಂತೋಷ್ ಅವರನ್ನು ಬೆಂಬಲಿಸಿ ಮತ್ತು ರಜನಿಕಾಂತ್ ಅವರನ್ನು ಟೀಕಿಸಿ ಟ್ವೀಟ್ಗಳು ಹರಿದಾಡುತ್ತಿವೆ.

ಸ್ಟೆರ್ಲೈಟ್ ವಿರೋಧಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಸಂತೋಷ್ ರಾಜ್, ಕಾಲೇಜು ವಿದ್ಯಾರ್ಥಿಗಳ ಒಕ್ಕೂಟವನ್ನು ರಚಿಸಿಕೊಂಡು ಹೋರಾಟ ನಡೆಸಿದ್ದರು. ಮೇ 22ರಂದು ತೂತುಕುಡಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಲಾಠಿ ಏಟಿನಿಂದ ಅವರು ತೀವ್ರವಾಗಿ ಗಾಯಗೊಂಡಿದ್ದರು.
ಇದಕ್ಕೂ ಮುನ್ನ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಕದಂಬುರ್ ಸಿ. ರಾಜಾ ಅವರನ್ನು ಸಹ ಸಂತೋಷ್ ಪ್ರಶ್ನಿಸಿದ್ದರು. ಇದು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿತ್ತು. ಈ ಕಹಿ ಅನುಭವದ ಬಳಿಕ ಉಪಮುಖ್ಯಮಂತ್ರಿ ಓ. ಪನ್ನೀರ್ಸೆಲ್ವಂ ಅವರು ಸಂತ್ರಸ್ತರ ಭೇಟಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಮಾಧ್ಯಮಗಳಿಗೆ ಒಳಗೆ ಪ್ರವೇಶ ನೀಡಿರಲಿಲ್ಲ. ಆಗಲೂ ಸಂತೋಷ್ ಅವರು ಪನ್ನೀರ್ಸೆಲ್ವಂ ಅವರನ್ನು ಪ್ರಶ್ನಿಸಿದ್ದರು ಎನ್ನಲಾಗಿದೆ.
ಪ್ರತಿಭಟನೆ ಆರಂಭವಾಗಿ ನೂರು ದಿನ ಕಳೆದರೂ ಈ ಬಗ್ಗೆ ರಜನಿಕಾಂತ್ ಒಂದೂ ಹೇಳಿಕೆ ನೀಡಿರಲಿಲ್ಲ. ಅಲ್ಲದೆ ರಜನಿ ಮಕ್ಕಳ್ ಮಂಡ್ರಮ್ ಪಕ್ಷದ ಸದಸ್ಯರು ಸಹ ಪ್ರತಿಭಟನಾಕಾರರನ್ನು ಸಂಪರ್ಕಿಸಿರಲಿಲ್ಲ. ಇದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications