ಗಣೇಶ ಚತುರ್ಥಿ ಮೆರವಣಿಗೆ: ತಮಿಳುನಾಡಿನಲ್ಲಿ ಯುವಕನ ಹತ್ಯೆ
ಚೆನ್ನೈ, ಸೆಪ್ಟೆಂಬರ್ 1: ಗಣೇಶ ಚತುರ್ಥಿ ಮೆರವಣಿಗೆಯಲ್ಲಿ ಮುಂದಾಳತ್ವ ವಹಿಸಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ರಾಮನಾಥಪುರಂನಲ್ಲಿ ಸೋಮವಾರ ನಡೆದಿದೆ.
ರಾಮನಾಥಪುರಂ ಸಮೀಪದ ವಸಂತನಗರದ ಕಲ್ಲಾರ್ ಬೀದಿಯ ಸಾಮಿನಾಥನ್ ಎಂಬುವವರ ಮಗ ಅರುಣ್ ಕುಮಾರ್ (21) ಹತ್ಯೆಯಾದ ಯುವಕ. ಅರುಣ್ ಮತ್ತು ಅವರ ಸ್ನೇಹಿತ ಯೋಗೇಶ್ವರಮ್ ಸೋಮವಾರ ಮಧ್ಯಾಹ್ನ ಎಟಿಎಂ ಒಂದರ ಮುಂದೆ ನಿಂತು ಮಾತನಾಡುತ್ತಿದ್ದರು. ಆಗ ಮೂರು ಬೈಕ್ನಲ್ಲಿ ಬಂದ 9 ಮಂದಿ ಅಪರಿಚಿತ ದುಷ್ಕರ್ಮಿಗಳು ಅವರನ್ನು ಸುತ್ತವರಿದರು. ಅರುಣ್ ಮತ್ತು ಯೋಗೇಶ್ವರಂ ಇಬ್ಬರನ್ನೂ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾರೆ.
ಇಬ್ಬರನ್ನೂ ರಾಮನಾಥಪುರಂನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್ ಆಸ್ಪತ್ರೆಯಲ್ಲಿ ಅಸುನೀಗಿದರು. ಯೋಗೇಶ್ವರಂ ಅವರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದ್ದು, ಹಿಂದೂ-ಮುಸ್ಲಿಂ ಸಂಘರ್ಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಆರೋಪಿಸಲಾಗಿದೆ.
ರಾಮನಾಥಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹತ್ಯೆಗೆ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ. ರಾಮನಾಥಪುರಂದವರೇ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಅದರ ಮೂಲಕ ಅಪರಾಧಿಗಳ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ. ಮೂವರು ಶಂಕಿತರನ್ನು ಬಂಧಿಸಲಾಗಿದೆ.
ತಮ್ಮ ಬೀದಿಯಲ್ಲಿ ನಡೆದ ಗಣೇಶ ಚತುರ್ಥಿ ಮೆರವಣಿಗೆಯ ಮುಂದಾಳತ್ವವನ್ನು ಅರುಣ್ ವಹಿಸಿದ್ದರು. ಈ ಕಾರಣಕ್ಕಾಗಿಯೇ ಅವರ ಹತ್ಯೆ ನಡೆದಿದೆ. ಇದರ ಹಿಂದೆ ಎಸ್ಡಿಪಿಐ ಅಥವಾ ಪಿಎಫ್ಐ ಮುಸ್ಲಿಂ ಮೂಲಭೂತವಾದಿಗಳ ಕೈವಾಡ ಇದೆ ಎಂದು ಆರೋಪಿಸಲಾಗಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications