ಚಿಕ್ಕಬಳ್ಳಾಪುರ: ಹೈಕೋರ್ಟ್ ಅನುಮತಿ ಬೆನ್ನಲ್ಲೆ ಲೋಕಾರ್ಪಣೆಗೆ ಸಜ್ಜುಗೊಂಡ ಆದಿಯೋಗಿ ಪ್ರತಿಮೆ

ಚಿಕ್ಕಬಳ್ಳಾಪುರ, ಜ. 15: ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಭಾನುವಾರ ರಾಜ್ಯದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಉದ್ಘಾಟನೆಯಾಗಲಿದೆ.

ಉಪರಾಷ್ಟ್ರಪತಿ ಜಗದೀಪ್ ಧನಖರ್ ಪ್ರತಿಮೆ ಉದ್ಘಾಟನೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅವರ ಪ್ರವಾಸ ಮುಂದೂಡಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿರಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿರುವ ಆದಿಯೋಗಿ ಪ್ರತಿಮೆಯು ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿರುವ ಜನಪ್ರಿಯ ಪ್ರತಿಮೆಯ ಪ್ರತಿರೂಪವಾಗಿದೆ.

112 foot tall Adi Yogi statue to be inaugurated Sunday

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್‌ ನಿರ್ಮಿಸುತ್ತಿರುವ ಈ ಪ್ರತಿಮೆಯು ಪರಿಸರ ಸೂಕ್ಷ್ಮ ಪ್ರದೇಶದಲ್ಲಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿತ್ತು. ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯ ಅನಾವರಣ ಸಮಾರಂಭವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲು ಶುಕ್ರವಾರ ಅನುಮತಿ ನೀಡಿತ್ತು.

ಶುಕ್ರವಾರ ಉದ್ಘಾಟನಾ ಸಮಾರಂಭವನ್ನು ನಡೆಸಲು ಹೈಕೋರ್ಟ್‌ನ ವಿಭಾಗೀಯ ಪೀಠ ಇಶಾ ಫೌಂಡೇಶನ್‌ಗೆ ಅನುಮತಿ ನೀಡಿತು ಆದರೆ ಸ್ಥಳದಲ್ಲಿ ನಿರ್ಮಾಣ ಚಟುವಟಿಕೆಗಳ ಬಗ್ಗೆ ಯಥಾಸ್ಥಿತಿಗೆ ಆದೇಶಿಸಿದೆ. ನಿರ್ಮಾಣ ಚಟುವಟಿಕೆಗಳನ್ನು ಮುಂದುವರಿಸಲು ಅನುಮತಿಸದ ಕಾರಣ ಕಾರ್ಯಕ್ರಮಕ್ಕಾಗಿ ಯಾವುದೇ ಮರಗಳನ್ನು ಕಡಿಯಬಾರದು ಎಂದು ನ್ಯಾಯಾಲಯವು ಒತ್ತಿಹೇಳಿದೆ.

ಪ್ರತಿಮೆ ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಜನರು ಭಾಗವಹಿಸುವ ಸಾಧ್ಯತೆಯಿದೆ ಮತ್ತು ಇಶಾ ಫೌಂಡೇಶನ್ ಮಕರ ಸಂಕ್ರಾಂತಿಯ ಮುನ್ನಾದಿನದಂದು 14 ನಿಮಿಷಗಳ ಬೆಳಕು ಮತ್ತು ಧ್ವನಿ ಪ್ರದರ್ಶನವಾದ 'ದಿವ್ಯ ದರ್ಶನಂ' ಅನ್ನು ಸಹ ಯೋಜಿಸಿದೆ.

"15 ರಂದು ಸಂಜೆ 6:00 ಗಂಟೆಗೆ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿಯನ್ನು ಸದ್ಗುರುಗಳ ಉಪಸ್ಥಿತಿಯಲ್ಲಿ ಅನಾವರಣಗೊಳಿಸಲಾಗುವುದು. ಸಂಜೆ ಆದಿಯೋಗಿ ದಿವ್ಯ ದರ್ಶನ ಮತ್ತು ಮಂತ್ರಮುಗ್ಧಗೊಳಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ" ಎಂದು ಇಶಾ ಫೌಂಡೇಶನ್‌ ಹೇಳಿಕೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+