ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ; ಜೆಡಿಎಸ್ ಪಕ್ಷದ ಅಚ್ಚರಿಯ ನಡೆ!

|
Google Oneindia Kannada News

ಚಿಕ್ಕಬಳ್ಳಾಪುರ, ನವೆಂಬರ್ 17 : ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಒಂದು ದಿನ ಬಾಕಿ ಉಳಿದಿದೆ. ಎರಡು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ಸೂಚನೆಯನ್ನು ಜೆಡಿಎಸ್ ನೀಡಿದೆ, ಇದು ಅಚ್ಚರಿ ಮೂಡಿಸಿದೆ.

ಜೆಡಿಎಸ್ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಲಿದೆ ಎಂಬ ಸುದ್ದಿ ಹಬ್ಬಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇದಕ್ಕೂ ಮೊದಲು ಪಕ್ಷ ಅಭ್ಯರ್ಥಿಗಳನ್ನು ಬದಲಾವಣೆ ಮಾಡಬೇಕಿದೆ.

ಕರ್ನಾಟಕ; ಮತ್ತೊಂದು ಉಪ ಚುನಾವಣೆ ಘೋಷಣೆಕರ್ನಾಟಕ; ಮತ್ತೊಂದು ಉಪ ಚುನಾವಣೆ ಘೋಷಣೆ

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕೆ. ಪಿ. ಬಚ್ಚೇಗೌಡ ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದೆ. ಭಾನುವಾರ ರಾಧಾಕೃಷ್ಣ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಈ ಬದಲಾವಣೆಗೆ ಕಾರಣವೇನು? ಎಂಬುದು ಬಹಿರಂಗವಾಗಿಲ್ಲ.

ಯಶವಂತಪುರ ಉಪ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಯಾರು? ಯಶವಂತಪುರ ಉಪ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಯಾರು?

15 Seat By Elections JDS Candidate Changed

ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ. ಅವರ ಜೊತೆ ರಾಧಾಕೃಷ್ಣ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ರಾಧಾಕೃಷ್ಣ ಶಿಡ್ಲಘಟ್ಟ ತಾಲೂಕು ನಾಗಮಂಗಲ ನಿವಾಸಿ.

ಉಪ ಚುನಾವಣೆ ಗೆಲ್ಲಲು ತಂತ್ರ ಹಣೆಗೆ ಯಡಿಯೂರಪ್ಪ! ಉಪ ಚುನಾವಣೆ ಗೆಲ್ಲಲು ತಂತ್ರ ಹಣೆಗೆ ಯಡಿಯೂರಪ್ಪ!

ಅಭ್ಯರ್ಥಿ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯ ಡಾ. ಕೆ. ಸುಧಾಕರ್, "ಕ್ಷೇತ್ರದಲ್ಲಿ ವ್ಯಕ್ತಿತ್ವವಿರುವ ಅಭ್ಯರ್ಥಿ ಇಲ್ಲ ಎಂದು ಎರಡು ಪಕ್ಷದವರಿಗೆ ಎನಿಸಿರಬಹುದು. ಹಣ ಇದೆ ಎಂದು ಬೇರೆ ಕ್ಷೇತ್ರದಿಂದ ಕರೆತಂದು ನಿಲ್ಲಿಸಿದ್ದಾರೆ" ಎಂದರು.

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿಯೂ ಅಭ್ಯರ್ಥಿ ಬದಲಾವಣೆ ಬಗ್ಗೆ ಸುದ್ದಿ ಹಬ್ಬಿತ್ತು. ಕಾಂತರಾಜು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಡಾ. ಗಿರೀಶ್ ನಾಶಿ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು. ಸೋಮವಾರ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಕಾದು ನೋಡಬೇಕು.

English summary
Karnataka JD(S) may change the party candidate for Chikkaballapura by elections. Radhakrishna may replaced the K.P.Bache Gowda. November 18 last date to submit nominations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X