ಶಿಡ್ಲಘಟ್ಟದ ಭಕ್ತರಹಳ್ಳಿ ಶಾಲೆಯ ಗ್ರಂಥಾಲಯಕ್ಕೆ ಜರ್ಮನಿ ಅನುದಾನ
ಶಿಡ್ಲಘಟ್ಟ, ಆಗಸ್ಟ್ 9 : ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿಗೂ ಜರ್ಮನಿಗೂ, ಬರೋಡಾ ರಾಜ ಮನೆತನಕ್ಕೂ ಎಲ್ಲಿಂದ ಎಲ್ಲಿಯ ಸಂಬಂಧ? ಬೆಟ್ಟದ ನೆಲ್ಲಿಕಾಯಿ ಹಾಗೂ ಸಮುದ್ರದ ಉಪ್ಪಿಗೂ ಇರುವ ಸಂಬಂಧದಂತೆ ಎಂಬುದು ಬುಧವಾರ ಸಾಬೀತಾಯಿತು ನೋಡಿ.
ಭಕ್ತರಹಳ್ಳಿಯ ಬಿ.ಎಂ.ವಿ.ಎಜುಕೇಷನಲ್ ಟ್ರಸ್ಟ್ ಶಾಲೆ ಆವರಣದಲ್ಲಿ ಕಾನ್ಸುಲೇಟ್ ಜನರಲ್ ಆಫ್ ಜರ್ಮನಿಯ ಆರ್ಥಿಕ ನೆರವಿನಿಂದ ನಿರ್ಮಾಣ ಆಗಿರುವ ಗ್ರಂಥಾಲಯ ಹಾಗೂ ಪ್ರಯೋಗಾಲಯ ಉದ್ಘಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾನ್ಸುಲ್ ಜನರಲ್ ಆಫ್ ಜರ್ಮನಿ ಮಾರ್ಗಿಟ್ ಹೆಲ್ ವಿಗ್ ಬೊಟ್ಟೆ ಮಾತನಾಡಿ, ಈ ಶಾಲೆಯ ಮಕ್ಕಳನ್ನು ನೋಡಿದರೆ ಖುಷಿ ಆಗುತ್ತದೆ. ತೋಟಗಾರಿಕೆ ತಜ್ಞ- ಜರ್ಮನಿಯ ಕೃಂಬಿಗಲ್ ಇಲ್ಲಿ ಸುಂದರವಾದ ಕಂಬಗಳನ್ನು ನಿರ್ಮಿಸಿರುವುದು ಗೊತ್ತಾದ ಮೇಲೆ ಇನ್ನೂ ಹೆಚ್ಚು ಸಂತೋಷವಾಯಿತು. ಇಂದಿನ ಈ ಕಾರ್ಯಕ್ರಮ ನಮ್ಮ ನಂಟನ್ನು ಇನ್ನಷ್ಟು ಗಟ್ಟಿ ಮಾಡಿದೆ ಎಂದರು.

ಮಾಹಿತಿ ತಂತ್ರಜ್ಞಾನ ಮುಂದುವರಿದ ಹಾಗೆಲ್ಲ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಆದರೂ ಪುಸ್ತಕ ಓದಿಗೆ ಅದು ಸರಿಸಾಟಿಯಿಲ್ಲ. ಗ್ರಂಥಾಲಯ ಮತ್ತು ವಿಜ್ಞಾನದ ಪ್ರಯೋಗಾಲಯಗಳ ಸದ್ಬಳಕೆ ಆಗಬೇಕು ಎಂದು ಬೊಟ್ಟೆ ಹೇಳಿದರು.
ಬರೋಡದ ರಾಜಮನೆತನದ ರಾಯಲ್ ಹೆರಿಟೇಜ್ ಗ್ರೀನ್ ಮಿಷನ್ ಮುಖ್ಯಸ್ಥ ಜಿತೇಂದ್ರಸಿಂಗ್ ಜಿ ಗಾಯಕ್ವಾಡ್ ಮಾತನಾಡಿ, ಬರೋಡಾ ಸಂಸ್ಥಾನಕ್ಕೂ ಮೈಸೂರಿಗೂ ಅವಿನಾಭಾವ ಸಂಬಂಧವಿದೆ. ಬರೋಡಾದಲ್ಲಿ ಮೈಸೂರು ಜಯಚಾಮರಾಜೇಂದ್ರ ಒಡೆಯರ್ ಹೆಸರಿನ ರಸ್ತೆಯಿದ್ದರೆ, ಮೈಸೂರಿನಲ್ಲಿ ಸಯ್ಯಾಜಿರಾವ್ ಗಾಯಕ್ವಾಡ್ ಮಹಾರಾಜರ ಹೆಸರಿನ ರಸ್ತೆಯಿದೆ. ಈ ಬಾಂಧವ್ಯ ಭಕ್ತರಹಳ್ಳಿಗೂ ವಿಸ್ತರಿಸಿದೆ ಎಂದರು.

ರವಿವರ್ಮ ಚಿತ್ರಿಸಿರುವ ಚಾಮರಾಜೇಂದ್ರ ಒಡೆಯರ್ ಮತ್ತು ಸಯ್ಯಾಜಿರಾವ್ ಗಾಯಕ್ವಾಡ್ ಮಹಾರಾಜರ ಚಿತ್ರವನ್ನು ಮತ್ತು ಉತ್ತಮ ಅಂಕ ಪಡೆದ ಮಕ್ಕಳಿಗೆ ಪ್ರಶಸ್ತಿ ನೀಡಲು ಸಹಾಯಧನ ಹಾಗೂ ಬರೋಡಾ ಸಂಸ್ಥಾನದ ಕುರಿತ ಪುಸ್ತಕವನ್ನು ಜೀತೇಂದ್ರಸಿಂಗ್ ಜಿ ಗಾಯಕ್ವಾಡ್ ಶಾಲೆಗೆ ಕೊಡುಗೆಯಾಗಿ ನೀಡಿದರು.
ಕಾರ್ಯಕ್ರಮಕ್ಕೆ ಬಂದಿದ್ದ ಗಣ್ಯರು ಶಾಲೆ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟರು. ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ನಾರಾಯಣ ಮಾನೆ ಅವರು ಶಾಲೆಗೆ ಹತ್ತು ಕಂಪ್ಯೂಟರ್ ನೀಡಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications