ಎಂಟಿಬಿ ನಾಗರಾಜ್ ಮತ್ತು ಬಿಜೆಪಿ ಗೆ ಸವಾಲು ಹಾಕಿದ ಸಂಸದ ಬಿ.ಎನ್.ಬಚ್ಚೇಗೌಡ
ಚಿಕ್ಕಬಳ್ಳಾಪುರ, ಜನವರಿ 20: ಮಗ ಶರತ್ ಬಚ್ಚೇಗೌಡ ವಿರುದ್ಧ ಸೋತಿರುವ ಬಿಜೆಪಿಯ ಎಂಟಿಬಿ ನಾಗರಾಜ್ ಅವರ ಕುರಿತು ಮಾತನಾಡುತ್ತಾ, ಬಿಜೆಪಿ ಪಕ್ಷಕ್ಕೂ ಪರೋಕ್ಷವಾಗಿ ಸಂಸದ ಬಿ.ಎನ್.ಬಚ್ಚೇಗೌಡ ಸವಾಲು ಹಾಕಿದ್ದಾರೆ.
Recommended Video
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಎಂಟಿಬಿ ನಾಗರಾಜ್ ನನ್ನ ಮೇಲೆ ಪದೇ-ಪದೇ ದೂರು ಕೊಡುತ್ತಿದ್ದಾನೆ, ಆದರೆ ಅದಕ್ಕೆಲ್ಲಾ ಹೆದರುವನಲ್ಲ, ನನ್ನ ವಿರುದ್ಧ ಅದೇನು ಕ್ರಮಕೈಗೊಳ್ಳುತ್ತಾರೋ ನಾನೂ ನೋಡುತ್ತೇನೆ' ಎಂದು ಬಿಜೆಪಿ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಸವಾಲು ಹಾಕಿದ್ದಾರೆ.
'ನಾನು ರಾಜಕಾರಣಕ್ಕೆ ಹೊಸಬನಲ್ಲ, ಎಂಟಿಬಿ ಎಷ್ಟು ಬೇಕಾದರೂ ದೂರು ಕೊಡಲಿ, ಅಂತಹವನ್ನೆಲ್ಲಾ ನಾನು ಲೆಕ್ಕಕ್ಕೆ ಇಟ್ಟುಕೊಳ್ಳುವುದಿಲ್ಲ, ಅವನದ್ದು ಏನೇ ಇದ್ದರು ಅವನ ಮನೆಯಲ್ಲಿ ಇಟ್ಟುಕೊಳ್ಳಲಿ' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

'ನನ್ನ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ತೆಗೆದುಕೊಳ್ಳಲಿ, ಪಕ್ಷದಿಂದ ಉಚ್ಛಾಟಿಸಬಹುದು ಸಂಸದ ಸ್ಥಾನದಿಂದ ಅಲ್ಲ, ಯಾರು ಏನು ಮಾಡುತ್ತಾರೋ ಮಾಡಲಿ' ಎಂದು ಅವರು ಪಕ್ಷಕ್ಕೂ ಪರೋಕ್ಷವಾಗಿ ಸವಾಲು ಹಾಕಿದರು.
'ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಕೆಲವರು ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತ ಬಳಿಕವೂ ಮತದಾರರ ಬಗ್ಗೆ ಮಾತನಾಡುತ್ತಿದ್ದಾರೆ, ಯಾರೇ ಆಗಲಿ ಇದು ಒಳ್ಳೆಯ ಬೆಳವಣಿಗೆ ಅಲ್ಲ' ಎಂದು ಬಚ್ಚೇಗೌಡ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications