ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಟಿಬಿ ನಾಗರಾಜ್ ಮತ್ತು ಬಿಜೆಪಿ ಗೆ ಸವಾಲು ಹಾಕಿದ ಸಂಸದ ಬಿ.ಎನ್.ಬಚ್ಚೇಗೌಡ

|
Google Oneindia Kannada News

ಚಿಕ್ಕಬಳ್ಳಾಪುರ, ಜನವರಿ 20: ಮಗ ಶರತ್ ಬಚ್ಚೇಗೌಡ ವಿರುದ್ಧ ಸೋತಿರುವ ಬಿಜೆಪಿಯ ಎಂಟಿಬಿ ನಾಗರಾಜ್ ಅವರ ಕುರಿತು ಮಾತನಾಡುತ್ತಾ, ಬಿಜೆಪಿ ಪಕ್ಷಕ್ಕೂ ಪರೋಕ್ಷವಾಗಿ ಸಂಸದ ಬಿ.ಎನ್.ಬಚ್ಚೇಗೌಡ ಸವಾಲು ಹಾಕಿದ್ದಾರೆ.

Recommended Video

ರಾಕೆಟ್ ಲ್ಯಾಂಡ್ ಆಗ್ತಿದ್ದಂತೆ ಜನರಲ್ಲಿ ಆತಂಕ | Iran | USA | Embassy | War | Oneindia Kannada

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಎಂಟಿಬಿ ನಾಗರಾಜ್ ನನ್ನ ಮೇಲೆ ಪದೇ-ಪದೇ ದೂರು ಕೊಡುತ್ತಿದ್ದಾನೆ, ಆದರೆ ಅದಕ್ಕೆಲ್ಲಾ ಹೆದರುವನಲ್ಲ, ನನ್ನ ವಿರುದ್ಧ ಅದೇನು ಕ್ರಮಕೈಗೊಳ್ಳುತ್ತಾರೋ ನಾನೂ ನೋಡುತ್ತೇನೆ' ಎಂದು ಬಿಜೆಪಿ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಸವಾಲು ಹಾಕಿದ್ದಾರೆ.

'ನಾನು ರಾಜಕಾರಣಕ್ಕೆ ಹೊಸಬನಲ್ಲ, ಎಂಟಿಬಿ ಎಷ್ಟು ಬೇಕಾದರೂ ದೂರು ಕೊಡಲಿ, ಅಂತಹವನ್ನೆಲ್ಲಾ ನಾನು ಲೆಕ್ಕಕ್ಕೆ ಇಟ್ಟುಕೊಳ್ಳುವುದಿಲ್ಲ, ಅವನದ್ದು ಏನೇ ಇದ್ದರು ಅವನ ಮನೆಯಲ್ಲಿ ಇಟ್ಟುಕೊಳ್ಳಲಿ' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

BJP MP BN Bache Gowda Lambasted On MTB Nagraj

'ನನ್ನ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ತೆಗೆದುಕೊಳ್ಳಲಿ, ಪಕ್ಷದಿಂದ ಉಚ್ಛಾಟಿಸಬಹುದು ಸಂಸದ ಸ್ಥಾನದಿಂದ ಅಲ್ಲ, ಯಾರು ಏನು ಮಾಡುತ್ತಾರೋ ಮಾಡಲಿ' ಎಂದು ಅವರು ಪಕ್ಷಕ್ಕೂ ಪರೋಕ್ಷವಾಗಿ ಸವಾಲು ಹಾಕಿದರು.

'ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಕೆಲವರು ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತ ಬಳಿಕವೂ ಮತದಾರರ ಬಗ್ಗೆ ಮಾತನಾಡುತ್ತಿದ್ದಾರೆ, ಯಾರೇ ಆಗಲಿ ಇದು ಒಳ್ಳೆಯ ಬೆಳವಣಿಗೆ ಅಲ್ಲ' ಎಂದು ಬಚ್ಚೇಗೌಡ ಹೇಳಿದ್ದಾರೆ.

English summary
BJP MP BN Bachegowda lambasted on MTB Nagraj. said 'no one can harm me, if party wants to take action i will face, i will see who will take action against me'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X