ಸಂಕ್ರಾಂತಿ ಪ್ರಯುಕ್ತ ಎತ್ತಿನ ಬಂಡಿಗಳ ಓಟದ ಸ್ಪರ್ಧೆ: ಜನರನ್ನು ನೋಡಿ ಬಂಡಿ ಸಮೇತ ದಿಕ್ಕಾಪಾಲಾಗಿ ಓಡಿದ ಹಳ್ಳಿಕಾರ್ ಎತ್ತುಗಳು!
ಚಿಕ್ಕಬಳ್ಳಾಪುರ ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದಗೂರು ಗ್ರಾಮದಲ್ಲಿ. ಗ್ರಾಮದ ರೈತಮಿತ್ರ ರೈತ ಬಳಗದಿಂದ ಹಳ್ಳಿಕಾರ್ ಎತ್ತಿನಬಂಡಿ ಓಟದ ಸ್ಪರ್ಧೆ ಆಯೋಜನೆಯಾಗಿತ್ತು. ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ಜೊತೆಯ ಎತ್ತುಗಳು ಭಾಗವಹಿಸಿದ್ದವು. ಒಂದಕ್ಕಿಂತ ಇನ್ನೊಂದು ಜೋಡಿ ಕಲರ್ ಫುಲ್, ಪವರ್ ಫುಲ್ ಆಗಿದ್ದವು. ಉಳಿದಂತೆ ಹಳ್ಳಿಕಾರ್ ಎತ್ತುಗಳ ಓಟ ಹಾಗೂ ಬಂಡಿಗಳ ಓಟ ನೋಡುಗರ ಮನಸೊರೆಗೊಂಡಿತು.
ಅದೊಂದು ಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹಳ್ಳಿಕಾರ್ ಎತ್ತುಗಳ ಎತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಓಟದ ಸ್ಪರ್ಧೆಗೆ ಕಲರ್ ಫುಲ್ ಹಳ್ಳಿಕಾರ್ ಎತ್ತುಗಳು ಆಗಮಿಸಿದ್ವು. ಆದ್ರೆ ನೆರೆದಿದ್ದ ಜನಸ್ತೋಮ ನೋಡಿ ಕೆಲವು ಎತ್ತುಗಳು ಬೆದರಿ ಬಂಡಿ ಸಮೇತ ದಿಕ್ಕು ಪಾಲಾಗಿ ಓಡಿದ ರೋಮಾಚನಕಾರಿ ಘಟನೆಗಳು ನಡೆದವು. ಎತ್ತುಗಳಿಗೆ ಪರದಾಟವಾದ್ರೆ ಜನರಿಗೆ ತಮಾಸೆಯಾಗಿತ್ತು.

ಒತ್ತಾಯ ಪೂರ್ವಕವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎತ್ತುಗಳು? ಹೌದು ಇಂತಹದೊಂದು ಅನುಮಾನ ಬರಲು ಪ್ರಮುಖ ಕಾರಣ ದಿಕ್ಕಾಪಾಲಗಿ ಓಡಿದ ಎತ್ತುಗಳು, ಭಯಗೊಂಡ ರೈತರು, ಇದಕ್ಕೆಲ್ಲ ಕಾರಣ ಎತ್ತುಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಇಷ್ಟ ಇರಲಿಲ್ಲವೇನೋ, ಆದರೂ ಪಟ್ಟುಬಿಡದ ರೈತರು, ಹರಸಾಹಸ ಪಟ್ಟು ಬಲವಂತವಾಗಿ ಎತ್ತುಗಳನ್ನು ಸ್ಪರ್ಧೆಗೆ ಅಣಿಗೊಳಿಸಿದ್ದು ನೋಡುಗರಿಗೆ ರೋಮಾಂಚನಕಾರಿಯಾದ್ರೆ ಎತ್ತುಗಳ ಕಣ್ಣೀರ ಕೋಡಿಗೆ ಸಾಕ್ಷಿಯಾಯಿತು.
ಹಳ್ಳಿಕಾರ್ ಎತ್ತಿನ ಬಂಡಿಯ ಸ್ಪರ್ಧೆ ನೋಡಿ ಕೇಕೆ ಹಾಕಿ ಸಂಭ್ರಮ ಸಂತಸ ಒಂದೆಡೆಯಾದ್ರೆ ಮತ್ತೊಂದೆಡೆ ಪ್ರಾಣ ಭಯದಲ್ಲಿ ದಿಕ್ಕಾಪಾಲಾಗಿ ಓಡುತ್ತಿರುವ ಎತ್ತುಗಳು, ಇಂಥ ರೋಮಾಂಚನಕಾರಿ/ ಆತಂಕಕಾರಿ ದೃಶ್ಯಗಳು ಕಂಡು ಬಂದಿದ್ದು.

ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 30 ಸಾವಿರ ಹಾಗೂ ಟ್ರೋಫಿ, ಎರಡನೆಯ ಬಹುಮಾನವಾಗಿ 20 ಸಾವಿರ ಹಾಗೂ ಟ್ರೋಫಿ, ಮೂರನೆ ಬಹುಮಾನವಾಗಿ 10 ಸಾವಿರ ಹಾಗೂ ಟ್ರೋಫಿ, ನಾಲ್ಕನೆ ಬಹುಮಾನವಾಗಿ ಐದು ಸಾವಿರ ಹಾಗೂ ಟ್ರೋಫಿ ಘೋಷಣೆ ಮಾಡಲಾಯಿತು. ಮುನ್ನೂರು ಮೀಟರ್ ಉದ್ದದ ಟ್ರಾಕ್ ನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗೆಲ್ಲಲು ರೈತರು ತಮ್ಮ ತಮ್ಮ ಎತ್ತುಗಳನ್ನು ಹೊಡೆದು ಬಡಿದು ರೋಷವನ್ನು ಬಡೆದೆಬ್ಬಿಸಿ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡುವ ಮುಕೇನ, ಎತ್ತುಗಳ ಸಂಕಷ್ಟ ರೈತರಿಗೆ ಸಂತಸಕ್ಕೆ ಕಾರಣವಾಯಿತು.
-
Holiday Plan: ಉದ್ಯೋಗಿಗಳಿಗೆ ರಜೆ ಹಬ್ಬ: ಪ್ಲ್ಯಾನ್ ಮಾಡಿದ್ರೆ ಮಾರ್ಚ್ನಲ್ಲಿ ಎರಡು ಬಾರಿ ಪಡೆಯಬಹುದು ಸತತ 5 ದಿನಗಳ ಹಾಲಿಡೇ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications