Chandrayaan 3: ಚಂದ್ರಯಾನ 3ರ ಯಶಸ್ವಿನ ಹಿಂದೆ ಚಿಕ್ಕಬಳ್ಳಾಪುರದ ವಿಜ್ಞಾನಿ !
ಚಿಕ್ಕಬಳ್ಳಾಪುರ, ಜುಲೈ. 14: ದೇಶದ ಬಹುನಿರೀಕ್ಷಿತ 'ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ'ಯ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಶ್ರೀಹರಿಕೋಟಾದ ಸತೀಶ್ ದವನ್ ಸ್ಪೇಸ್ ಸೆಂಟರ್ನಿಂದ ನಭಕ್ಕೆ ಜಿಮ್ಮಿದ ಚಂದ್ರಯಾನ ನೌಕೆಯು ಮೂರು ಹಂತ ದಾಟಿ ನಿಗದಿತ ಕಕ್ಷೆ ಸೇರಿದೆ. ಈ ಸಾಧನೆಗಾಗಿ ವಿಜ್ಞಾನಿಗಳಿಗೆ ಮತ್ತು ತಂತ್ರಜ್ಞರಿಗೆ ಅಭಿನಂದನೆಗಳು ಬರುತ್ತಿವೆ.
ಇದೇ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿ ಗ್ರಾಮದ ವಿಜ್ಞಾನಿ ಗುರ್ರಪ್ಪ ಈ ಭಾರಿಯ ಚಂದ್ರಯಾನ 3ರ ಉಡಾವಣೆಯಲ್ಲಿ ಮಿಷನ್ ಕಂಟ್ರೋಲ್ ಸೆಂಟ್ರಲ್ನ ಇನ್ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿದ್ದಾರೆ. ಇದಕ್ಕೆ ಗುಡುಬಂಡೆ ತಾಲೂಕಿನ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಜ್ಞಾನಿ ಗುರ್ರಪ್ಪ ಅವರು ತಾಲೂಕಿನ ಕುಗ್ರಾಮವಾದ ಜಂಗಾಲಹಳ್ಳಿಯಲ್ಲಿ ಚನ್ನಪ್ಪಯ್ಯ ಮತ್ತು ತಿಮ್ಮಕ್ಕ ರವರ ಮಗನಾಗಿ ಜನಸಿದ್ದಾರೆ. ಇವರು 2013ರ ಮಂಗಳಯಾನ ಉಡಾವಣೆಯಲ್ಲೂ ಸಹ ಪ್ರಮುಖ ಪಾತ್ರವನ್ನು ಸಹ ವಹಿಸಿದ್ದರು. ತಮ್ಮ ಕೆಲಸದಿಂದ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದರು. ಈಗ ಚಂದ್ರಯಾನ 3ರ ಉಡಾವಣೆಯಲ್ಲಿ ಇನ್ನು ಹೆಚ್ಚಿನ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಈ ಹೆಮ್ಮೆಯ ಚಂದ್ರಯಾನ 3ರ ಉಡಾವಣೆಯಲ್ಲಿ ಮಿಷನ್ ಕಂಟ್ರೋಲ್ ಸೆಂಟ್ರಲ್ನ ಇನ್ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವುದಕ್ಕೆ ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.
2013ರ ಮಂಗಳಯಾನ ಉಡಾವಣೆಯಲ್ಲಿ ವಿಜ್ಞಾನಿ ಗುರ್ರಪ್ಪ ರವರು ಪ್ರಮುಖ ಪಾತ್ರ ವಹಿಸಿದ್ದರು. ಮಂಗಳಯಾನ ಉಡಾವಣೆ ಯಶಸ್ವಿಯಾದ ಸಂದರ್ಭದಲ್ಲಿ ಗುರ್ರಪ್ಪ ರವರನ್ನು ಪ್ರಧಾನಿ ನರೇಂದ್ರ ಮೋದಿ ಹಸ್ತ ಲಾಘವ ಮಾಡಿ ಶ್ಲಾಘಿಸಿದ್ದರು. ಇನ್ನು, ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ರವರು ಚಂದ್ರಯಾನ 3ರ ಉಡಾವಣೆಯಲ್ಲಿ ಪ್ರಮುಖ ವಿಭಾಗದಲ್ಲಿ ಜವಾಬ್ದಾರಿ ಹೊತ್ತು ಕೆಲಸ ನಿರ್ವಹಿಸುವುದು ಸಂತಸದ ವಿಚಾರವಾಗಿದೆ ಎಂದು ಗ್ರಾಮಸ್ಥರು ಖುಷಿ ಹಂಚಿಕೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications