Dr. K Sudhakar Assets: ಚಿಕ್ಕಬಳ್ಳಾಪುರ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಆಸ್ತಿ ವಿವರ
ಚಿಕ್ಕಬಳ್ಳಾಪುರ, ಮಾರ್ಚ್ 02: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದುಗೂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.

ಸೋಮವಾರ ಡಾ.ಕೆ.ಸುಧಾಕರ್ ಅವರು ಚುನಾವಣಾ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್, ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಮುಖಂಡರಾದ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಎಲ್ಲರ ಸಹಕಾರವನ್ನು ಕೋರಿದರು. ಇದಕ್ಕೂ ಮುನ್ನ ಮನೆ ದೇವರಾದ ಚನ್ನಕೇಶವಸ್ವಾಮಿ ಹಾಗೂ ಭೋಗನಂದೀಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.
ಡಾ.ಕೆ ಸುಧಾಕರ್ ಕುಟುಂಬದ ಆಸ್ತಿ ವಿವರ
ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಒಟ್ಟು ಆಸ್ತಿ 49 ಕೋಟಿ 82 ಲಕ್ಷ 41 ಸಾವಿರದ 646 ರೂಪಾಯಿ ಎಂದು ನಾಮಪತ್ರದ ಜೊತೆಗೆ ಜೊತೆಗೆ ಅಫಿಡವಿಟ್ನಲ್ಲಿ ಸಲ್ಲಿಕೆ ಮಾಡಿದ್ದಾರೆ. 3ಲಕ್ಷ 55 ಸಾವಿರ 320 ಮೌಲ್ಯದ 160 ಗ್ರಾಂ ಚಿನ್ನಾಭರಣ, ಪತ್ನಿ ಪ್ರೀತಿ ಸುಧಾಕರ್ ಬಳಿ 1 ಕೆಜಿ ಚಿನ್ನ 4 ಜೊತೆ ವಜ್ರಾಭಾರಣಗಳಿರುವ ಬಗ್ಗೆ ತಿಳಿಸಿದ್ದಾರರ. ಸುಧಾಕರ್ ಬಳಿ ಇರುವ ನಗದು- 10,680 ರೂಪಾಯಿ, ಪತ್ನಿ ಪ್ರೀತಿ ಸುಧಾಕರ್ ಬಳಿ ನಗದು - 5,10,000 ರೂಪಾಯಿ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

ಸುಧಾಕರ್ ಸಾಲದ ವಿವರ
ಸುಧಾಕರ್ ಮಾಡಿರುವ ಒಟ್ಟು ಸಾಲ - 1,31,28,130 ರೂಪಾಯಿ, ಪತ್ನಿ ಪ್ರೀತಿ ಸುಧಾಕರ್ ಸಾಲ 19,03,92,819 ರೂಪಾಯಿ, ಡಾ.ಕೆ ಸುಧಾಕೆರ್ ಹೆಸರಿನಲ್ಲಿ ವಿವಿಧ ಬ್ಯಾಂಕ್ಗಳಲ್ಲಿರುವ ಒಟ್ಟು ಹಣ 11 ಕೋಟಿ 76 ಲಕ್ಷ 7 ಸಾವಿರದ 833 ರೂಪಾಯಿ, ಡಾ.ಕೆ ಸುಧಾಕರ್ ಪತ್ನಿ ಪ್ರೀತಿ ವಿವಿಧ ಬ್ಯಾಂಕ್ಗಳಲ್ಲಿರುವ ಒಟ್ಟು ಹಣ 38,14,348 ಲಕ್ಷ ರೂಪಾಯಿ, ವಿವಿಧ ಸಂಸ್ಥೆಗಳೊಂದಿಗೆ ಡಾ.ಕೆ. ಸುಧಾಕರ್ ಹೊಂದಿರುವ ಷೇರುಗಳು 86,20,329 ರೂಪಾಯಿ, ಡಾ.ಕೆ. ಸುಧಾಕರ್ ಪತ್ನಿ ಪ್ರೀತಿ ಹೊಂದಿರುವ ಒಟ್ಟು ಷೇರುಗಳು 1,89,74,056 ರೂಪಾಯಿ ಒಟ್ಟು ಕುಟುಂಬದ ಕಂಪನಿ ಷೇರುಗಳು 149,46,420 ರೂಪಾಯಿ .ಲ್ಯಾನ್ಸರ್, ಮೂರು ಟ್ರ್ಯಾಕ್ಟರ್ಗಳು ಹಾಗೂ ಪತ್ನಿ ಹೆಸರಲ್ಲಿ ಹೊಂಡಾ ಆ್ಯಕ್ಟೀವಾ ಇರುವ ಬಗ್ಗೆ ಅಫಿಡವಿಟ್ನಲ್ಲಿ ಸಲ್ಲಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications