ಚಿಕ್ಕಬಳ್ಳಾಪುರ: 13 ದಿನಗಳ ಬಳಿಕ 20 ಅಡಿ ಬೈಪಾಸ್ ಗಣೇಶ ವಿಸರ್ಜನೆ, ಅದ್ಧೂರಿ ಮೆರವಣಿಗೆ
ಚಿಕ್ಕಬಳ್ಳಾಪುರ , ಅಕ್ಟೋಬರ್ 02:ಚಿಕ್ಕಬಳ್ಳಾಪುರ ನಗರದಲ್ಲಿ ಒಂದೇ ಜಪ, ಅದುವೇ ಗಣಪತಿ ಬಪ್ಪಾ ಮೋರಯಾ. ಮಹರಾಜಕೀ ಜೈ. ಬೈಪಾಸ್ ವೃತ್ತದಲ್ಲಿ ಶ್ರೀ ವಿದ್ಯಾಗಣಪತಿ ಯುವಕರ ಸಂಘದವರು ಪ್ರತಿಷ್ಠಾಪಿಸಿರುವ 20 ಅಡಿ ಎತ್ತರದ ಶ್ರೀ ಮಹಾರಾಜ ಸಿಂಹಾಸನ ಗಣಪತಿ 13ನೇ ದಿನ ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆಗೊಂಡಿತು.
ಗಣೇಶ ವಿಸರ್ಜನೆಯ ನಿಮಿತ್ತ ಸಂಪೂರ್ಣ ನಗರದಲ್ಲಿ ವಿಘ್ನನಿವಾರಕನ ಗಾಯನ, ನೃತ್ಯ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಗಣೇಶ ವಿಸರ್ಜನೆಯ ಭವ್ಯ ಮೆರವಣಿಗೆ ನೋಡಲು ಕಣ್ಣೆರಡೂ ಸಾಲದು ಎಂಬಂತಿತ್ತು. ಸಾಗರೋಪಾದಿಯಲ್ಲಿ ನೆರೆದಿದ್ದ ಜನರ ನಡುವೆ ಸಾಗಿದ್ದ ಗಣೇಶನ ಮೆರವಣಿಗೆ ಅದ್ಧೂರಿಯೋ ಅದ್ಧೂರಿ. ಗಣೇಶ ವಿಗ್ರಹ ನೋಡುವುದೇ ಹಬ್ಬವಾಗಿತ್ತು.

ನಗರದ ಪ್ರಮುಖ ಬೀದಿಗಳಲ್ಲಿ ಹೊರಟ ಮೆರವಣಿಗೆ ನಗರದ ಹೃದಯ ಭಾಗವಾಗಿರುವ ಮಹಾತ್ಮ ಗಾಂಧಿವೃತ್ತದಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಾಗಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಲ್ಲೂಡಿ ಬಳಿ ವಿಗ್ರಹ ವಿಸರ್ಜಿಸಲಾಗುತ್ತದೆ.
ಗಣೇಶ ವಿಸರ್ಜನೆಗೆ ವಿವಿಧ ಜಾನಪದ ಕಲಾ ತಂಡಗಳು, ವಾದ್ಯ ವೃಂದಗಳು, ಝಾಂಜ್ ಮೇಳ, ಜಾನಪದ ಕಲಾ ತಂಡಗಳು ಮೆರಗು ತಂದಿದ್ದವು. ಧ್ವನಿ ವರ್ಧಕಗಳಿಂದ ಹೊರ ಹೊಮ್ಮುತ್ತಿದ್ದ ಹಾಡಿಗೆ ತಕ್ಕಂತೆ ಯುವಕ-ಯುವತಿಯರು, ಮಹಿಳೆಯರು, ಮಕ್ಕಳು ಹೆಜ್ಜೆ ಹಾಕಿ ಸಂಭ್ರಮಿಸಿದರು. ಗಣೇಶ ನಾಮ ಸ್ಮರಣೆ, ಗಣೇಶನ ಜಯ ಘೋಷ ಹಾಕುತ್ತಾ ಕುಳಿದು ಕುಪ್ಪಳಿಸಿದರು. ಇನ್ನು ವಿವಿಧ ವೇಷಭೂಷಣಗಳು ಧರಿಸಿದ್ದು ಗಮನ ಸೆಳೆಯಿತು.
ಗಣೇಶನಿಗೆ ವೈಭವದ ವಿದಾಯ ಹೇಳಲು ಮೆರವಣಿಗೆಯಲ್ಲಿ ಕುಳಿದು ಕುಪ್ಪಳಿಸುವ ಜನ ಒಂದೆಡೆಯಾದರೆ ಗಣೇಶ ವಿಸರ್ಜನೆಯ ಅವಿಸ್ಮರಣೀಯ ದೃಶ್ಯ ಕಣ್ತುಂಬಿಕೊಳ್ಳಲು ಅದಕ್ಕೂ ಹೆಚ್ಚು ಜನ ನೆರೆದಿದ್ದರು.ಡಾ ಬಾಬ ಸಾಹೇಬ್ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಾಗಿ ಬರುತ್ತಿದ್ದ ಗಣೇಶ ಮೆರವಣಿಗೆ ನೋಡಲು ಸಾಯಂಕಾಲ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಮನೆ ಅಂಗಡಿ ಸೇರಿದಂತೆ ಕಟ್ಟಡದ ತುತ್ತ ತುದಿಯಲ್ಲಿ ನಿಂತು ಜನರು ಗಣೇಶ ವಿಸರ್ಜನೆಯ ವೈಭವವನ್ನು ವೀಕ್ಷಿಸಿದರು.

ಗಣೇಶ ಹಬ್ಬ ಎಂದ ಮೇಲೆ ಕೇಳಬೇಕೇ ಪಟಾಕಿ ಸದ್ದು ಇದ್ದೇ ಇರುತ್ತದೆ. ಪರಿಸರ ಹಾನಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಪಟಾಕಿ ಸದ್ದು ಮಾತ್ರ ಅಡಗಲಿಲ್ಲ. ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಪಟಾಕಿಗಳು ಆಕರ್ಷಕವಾಗಿದ್ದವು.
ಮೆರವಣಿಗೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಬಂದೋಬಸ್ತ್ಗೆ ನಿಯೋಜನೆಗೊಳಿಸಲಾಗಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಡಿಎಆರ್ ಪೊಲೀಸ್ ಪಡೆ ನೇಮಿಸಲಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications