ಚಿಕ್ಕಬಳ್ಳಾಪುರ: 13 ದಿನಗಳ ಬಳಿಕ 20 ಅಡಿ ಬೈಪಾಸ್ ಗಣೇಶ ವಿಸರ್ಜನೆ, ಅದ್ಧೂರಿ ಮೆರವಣಿಗೆ
ಚಿಕ್ಕಬಳ್ಳಾಪುರ , ಅಕ್ಟೋಬರ್ 02:ಚಿಕ್ಕಬಳ್ಳಾಪುರ ನಗರದಲ್ಲಿ ಒಂದೇ ಜಪ, ಅದುವೇ ಗಣಪತಿ ಬಪ್ಪಾ ಮೋರಯಾ. ಮಹರಾಜಕೀ ಜೈ. ಬೈಪಾಸ್ ವೃತ್ತದಲ್ಲಿ ಶ್ರೀ ವಿದ್ಯಾಗಣಪತಿ ಯುವಕರ ಸಂಘದವರು ಪ್ರತಿಷ್ಠಾಪಿಸಿರುವ 20 ಅಡಿ ಎತ್ತರದ ಶ್ರೀ ಮಹಾರಾಜ ಸಿಂಹಾಸನ ಗಣಪತಿ 13ನೇ ದಿನ ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆಗೊಂಡಿತು.
ಗಣೇಶ ವಿಸರ್ಜನೆಯ ನಿಮಿತ್ತ ಸಂಪೂರ್ಣ ನಗರದಲ್ಲಿ ವಿಘ್ನನಿವಾರಕನ ಗಾಯನ, ನೃತ್ಯ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಗಣೇಶ ವಿಸರ್ಜನೆಯ ಭವ್ಯ ಮೆರವಣಿಗೆ ನೋಡಲು ಕಣ್ಣೆರಡೂ ಸಾಲದು ಎಂಬಂತಿತ್ತು. ಸಾಗರೋಪಾದಿಯಲ್ಲಿ ನೆರೆದಿದ್ದ ಜನರ ನಡುವೆ ಸಾಗಿದ್ದ ಗಣೇಶನ ಮೆರವಣಿಗೆ ಅದ್ಧೂರಿಯೋ ಅದ್ಧೂರಿ. ಗಣೇಶ ವಿಗ್ರಹ ನೋಡುವುದೇ ಹಬ್ಬವಾಗಿತ್ತು.

ನಗರದ ಪ್ರಮುಖ ಬೀದಿಗಳಲ್ಲಿ ಹೊರಟ ಮೆರವಣಿಗೆ ನಗರದ ಹೃದಯ ಭಾಗವಾಗಿರುವ ಮಹಾತ್ಮ ಗಾಂಧಿವೃತ್ತದಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಾಗಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಲ್ಲೂಡಿ ಬಳಿ ವಿಗ್ರಹ ವಿಸರ್ಜಿಸಲಾಗುತ್ತದೆ.
ಗಣೇಶ ವಿಸರ್ಜನೆಗೆ ವಿವಿಧ ಜಾನಪದ ಕಲಾ ತಂಡಗಳು, ವಾದ್ಯ ವೃಂದಗಳು, ಝಾಂಜ್ ಮೇಳ, ಜಾನಪದ ಕಲಾ ತಂಡಗಳು ಮೆರಗು ತಂದಿದ್ದವು. ಧ್ವನಿ ವರ್ಧಕಗಳಿಂದ ಹೊರ ಹೊಮ್ಮುತ್ತಿದ್ದ ಹಾಡಿಗೆ ತಕ್ಕಂತೆ ಯುವಕ-ಯುವತಿಯರು, ಮಹಿಳೆಯರು, ಮಕ್ಕಳು ಹೆಜ್ಜೆ ಹಾಕಿ ಸಂಭ್ರಮಿಸಿದರು. ಗಣೇಶ ನಾಮ ಸ್ಮರಣೆ, ಗಣೇಶನ ಜಯ ಘೋಷ ಹಾಕುತ್ತಾ ಕುಳಿದು ಕುಪ್ಪಳಿಸಿದರು. ಇನ್ನು ವಿವಿಧ ವೇಷಭೂಷಣಗಳು ಧರಿಸಿದ್ದು ಗಮನ ಸೆಳೆಯಿತು.
ಗಣೇಶನಿಗೆ ವೈಭವದ ವಿದಾಯ ಹೇಳಲು ಮೆರವಣಿಗೆಯಲ್ಲಿ ಕುಳಿದು ಕುಪ್ಪಳಿಸುವ ಜನ ಒಂದೆಡೆಯಾದರೆ ಗಣೇಶ ವಿಸರ್ಜನೆಯ ಅವಿಸ್ಮರಣೀಯ ದೃಶ್ಯ ಕಣ್ತುಂಬಿಕೊಳ್ಳಲು ಅದಕ್ಕೂ ಹೆಚ್ಚು ಜನ ನೆರೆದಿದ್ದರು.ಡಾ ಬಾಬ ಸಾಹೇಬ್ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಾಗಿ ಬರುತ್ತಿದ್ದ ಗಣೇಶ ಮೆರವಣಿಗೆ ನೋಡಲು ಸಾಯಂಕಾಲ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಮನೆ ಅಂಗಡಿ ಸೇರಿದಂತೆ ಕಟ್ಟಡದ ತುತ್ತ ತುದಿಯಲ್ಲಿ ನಿಂತು ಜನರು ಗಣೇಶ ವಿಸರ್ಜನೆಯ ವೈಭವವನ್ನು ವೀಕ್ಷಿಸಿದರು.

ಗಣೇಶ ಹಬ್ಬ ಎಂದ ಮೇಲೆ ಕೇಳಬೇಕೇ ಪಟಾಕಿ ಸದ್ದು ಇದ್ದೇ ಇರುತ್ತದೆ. ಪರಿಸರ ಹಾನಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಪಟಾಕಿ ಸದ್ದು ಮಾತ್ರ ಅಡಗಲಿಲ್ಲ. ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಪಟಾಕಿಗಳು ಆಕರ್ಷಕವಾಗಿದ್ದವು.
ಮೆರವಣಿಗೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಬಂದೋಬಸ್ತ್ಗೆ ನಿಯೋಜನೆಗೊಳಿಸಲಾಗಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಡಿಎಆರ್ ಪೊಲೀಸ್ ಪಡೆ ನೇಮಿಸಲಾಗಿತ್ತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications