ಆಪರೇಷನ್ ಕಮಲ : ಸ್ಪಷ್ಟನೆ ಕೊಟ್ಟ ಡಾ.ಕೆ.ಸುಧಾಕರ್
Recommended Video
ಬೆಂಗಳೂರು, ಸೆಪ್ಟೆಂಬರ್ 23 : ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಅವರು ಆಪರೇಷನ್ ಕಮಲದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 'ನಾನು ಎಂದಿಗೂ ಕಾಂಗ್ರೆಸ್ ಪಕ್ಷವನ್ನು ಬಿಡುವಿದಿಲ್ಲ' ಎಂದು ಅವರು ಟ್ವಿಟರ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು ತಮಿಳುನಾಡಿಗೆ ತೆರಳಿದ್ದಾರೆ ಎಂಬ ವರದಿ ಮಾಧ್ಯಮಗಳಲ್ಲಿ ಬಂದಿತ್ತು. ಈ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದ್ದರಿಂದ, ಡಾ.ಕೆ.ಸುಧಾಕರ್ ಅವರು ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ ಮುಂಬೈಗೆ ಹೋಗಲು ಹೇಳಿದ್ದೇ ನಾನು: ಕುಮಾರಸ್ವಾಮಿ
It's deeply shocking how a visit to a temple with one's friends can be flagged as a political conspiracy!
— Dr Sudhakar K (@mla_sudhakar) September 22, 2018
I had visited a temple in TN with M. T. B Nagraj & few of my friends. Now, few media channels are tagging it as 'Operation Kamala'. (1/2) pic.twitter.com/lq83ojP4z7
ವರದಿಗಳನ್ನು ನೋಡಿ ಶಾಕ್ ಆಗಿದೆ. ನನ್ನ ಮಿತ್ರರ ಜೊತೆ ತಮಿಳುನಾಡಿನ ದೇವಾಲಯಕ್ಕೆ ಹೋಗಿದ್ದು ರಾಜಕೀಯ ಚಟುವಟಿಕೆ ಹೇಗೆ ಆಗುತ್ತದೆ?. ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಮತ್ತು ಇತರ ಕೆಲವು ಸ್ನೇಹಿತರ ಜೊತೆ ದೇವಾಲಯಕ್ಕೆ ಹೋಗಿದ್ದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಆಪರೇಷನ್ ಕಮಲ : ಆರ್ಎಸ್ಎಸ್ನಿಂದ ಅಮಿತ್ ಶಾಗೆ ವರದಿ
'ನಾನು ಸಹ ಡಾಕ್ಟರ್, ನಾನು ಯಾವುದೇ ಆಪರೇಷನ್ಗೆ ಒಳಗಾಗುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಸದಸ್ಯನಾಗಿ ಮುಂದುವರೆಯಲಿದ್ದೇನೆ. ನಮ್ಮ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳ ಮೇಲೆ ನನಗೆ ನಂಬಿಕೆ ಇದೆ' ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.
Well, I am a Doctor but I don't indulge in such Operations! I have always been & will continue to be a staunch Congress man. And, I strongly believe in our leader Shri Rahul Gandhi & the ideologies of my Party. (2/2) pic.twitter.com/oeQvU72ikU
— Dr Sudhakar K (@mla_sudhakar) September 22, 2018