ಚಿಕ್ಕಬಳ್ಳಾಪುರ ಕುಂಟುತ್ತಾ ಸಾಗುತ್ತಿರುವ ಒಳಚರಂಡಿ ಕಾಮಗಾರಿ 9 ತಿಂಗಳಲ್ಲಿ ಪೂರ್ಣ: ಸುಬ್ಬಾರೆಡ್ಡಿ ಭರವಸೆ
ಚಿಕ್ಕಬಳ್ಳಾಪುರ ಡಿಸೆಂಬರ್ 30: ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಆಮೆ ವೇಗದಲ್ಲಿ ಕುಂಟುತ್ತಾ ಸಾಗುತ್ತಿರುವ ಒಳಚರಂಡಿ ಕಾಮಗಾರಿಯನ್ನು 6 ರಿಂದ 9 ತಿಂಗಳೊಳಗೆ ಮುಗಿಸಲು ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು
ಪಟ್ಟಣದ ವಿವಿದ ಕಡೆಗಳಲ್ಲಿ ಒಳಚರಂಡಿ ಅಧಿಕಾರಿಗಳೊಂದಿಗೆ ಒಳಚರಂಡಿ ಕಾಮಗಾರಿಯನ್ನ ವೀಕ್ಷಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. 2012 ರಲ್ಲಿ ಒಳಚರಂಡಿ ಕಾಮಗಾರಿ ಪ್ರಾರಂಭಿಸಲಾಯಿತು. 3 ಹಂತಗಳಲ್ಲಿ ಹಣ ಬಿಡುಗಡೆಯಾಗಿದ್ದು ಇದುವರೆಗೆ ಸುಮಾರು 51 ಕೋಟಿ ವೆಚ್ಚಮಾಡಲಾಗಿದೆ.

ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷö್ಯದಿಂದಾಗಿ ಕಾಮಗಾರಿ ಮಂದಗತಿಯಲ್ಲಿ ನಡೆದಿದೆ. ಅನೇಕ ಕಡೆಗಳಲ್ಲಿ ಅತ್ಯಂತ ಕಳಪೆಯಾಗಿ ಕಾಮಗಾರಿ ಮಾಡಲಾಗಿದೆ. ಗುತ್ತಿಗೆದಾರರ ಮೂಗಿನ ನೇರಕ್ಕೆ ಕಾಮಗಾರಿ ನಡೆಸಿದ್ದರೂ ಅಧಿಕಾರಿಗಳು ಕುಮ್ಮಕ್ಕಾಗಿ ಬಿಲ್ ಮಾಡಿದ್ದಾರೆ. ಕಠಿಣ ಸ್ಥಳಗಳಲ್ಲಿ ಕಾಮಗಾರಿಯನ್ನೇ ಮಾಡದೆ ಬಿಡಲಾಗಿದೆ. ಇವೆಲ್ಲಾ ವಿಚಾರಗಳನ್ನು ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು ಇಂದು ಒಳಚರಂಡಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಸುಲಭವಾಗಿ ಆಗುವ ಕಡೆ ಕಾಮಗಾರಿ ಮುಗಿಸಿ ಕಠಿಣ ಎಂದ ಕಡೆ ಬಿಟ್ಟಿರುವ ಗುತ್ತಿಗೆದಾರನಿಗೆ ಬಿಲ್ ಮಾಡಿರುವುದಕ್ಕೆ ಚೀಫ್ ಇಂಜಿನಿಯರ್ ಚಂದ್ರಪ್ಪ ರವರಿಗೆ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರ ಹಣ ಈ ರೀತಿ ದುರುಪಯೋಗಪಡಿಸಿಕೊಂಡಿರುವುದು ಅಧಿಕಾರಿಗಳ ನಿರ್ಲಕ್ಷö್ಯದಿಂದಾಗಿಯೇ ಎಂದರು.
ಎಸ್.ಟಿ.ಪಿ ಪ್ಲಾಂಟ್ ಕಾಮಗಾರಿ ಶೇ 90 ರಷ್ಟು ಮುಗಿದಿದ್ದು ಈಗಾಗಲೇ ಟ್ರಯಲ್ ರನ್ ಮಾಡಲಾಗಿದೆ. ಈಗ ನ್ಯಾಷನಲ್ ಕಾಲೇಜು ಕಡೆಯಿಂದ ಎಸ್.ಟಿ.ಪಿ ಪ್ಲಾಂಟ್ವರೆಗೆ ಪರೀಕ್ಷೆ ಮಾಡಬೇಕಾಗಿದ್ದು ಅದಕ್ಕೆ 10 ಲಕ್ಷ ಹಣದ ಅವಶ್ಯಕತೆ ಇದೆ ಎಂದು ಶಾಸಕರಲ್ಲಿ ಮನವಿ ಮಾಡಿದಾಗ ಕೂಡಲೇ ಬಿಡುಗಡೆಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿಗೆ ದೂರವಾಣಿಯಲ್ಲಿ ಸೂಚಿಸಿದರು.
ಎಸ್.ಟಿ.ಪಿ ಪ್ಲಾಂಟ್ಗೆ ಸ್ಥಳದ ಸಮಸ್ಯೆ, ಕೆಲ ಕಡೆ ಕಾವiಗಾರಿಗೆ ಕಲ್ಲುಗಳು ಅಡ್ಡಿಯಾಗುವುದರ ಜೊತೆಗೆ ಅಧಿಕಾರಿ-ಗುತ್ತಿಗೆದಾರರ ನಿರ್ಲಕ್ಷö್ಯ ನಿಧಾನಗತಿಗೆ ಕಾರಣವಾಗಿತ್ತು. ಈಗ ಕಾಮಗಾರಿಗೆ ವೇಗ ನೀಡಲಾಗುತ್ತಿದೆ.ಕಾಮಗಾರಿಗೆ ಅವಶ್ಯಕತೆ ಇರುವ 15-20 ಕೋಟಿ ರೂಪಾಯಿಗಳನ್ನು ಶೀಘ್ರ ಸರ್ಕಾರದಿಂದ ಕೊಡಿಸುತ್ತೇನೆ.ಅವೈಜ್ಞಾನಿಕ ಕಾಮಗಾರಿ ಸರಿಪಡಿಸುವ ಸಾಧ್ಯಾಸಾದ್ಯತೆಗಳ ಬಗ್ಗೆ ಪರಿಶೀಲನೆ ನಡೆದಿದೆ ಎಂದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿಯವರು ಅಧಿಕಾರಿಗಳೊಂದಿಗೆ ಒಳಚರಂಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸುತ್ತಿರುವ ಸಂದರ್ಭದಲ್ಲಿ ವiತ್ತು ನಂತರ ನಡೆದ ಅಧಿಕಾರಿಗಳ ಸಭೆಗೆ ಗೈರುಹಾಜರಾಗಿದ್ದ ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮ ಶರಣಯ್ಯ ರವರ ಕಾರ್ಯವೈಖರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಿಟ್ಟು ವ್ಯಕ್ತಪಡಿಸಿದರು.
ಮೀಟಿಂಗ್ ಹೆಸರಲ್ಲಿ ಇಂದು ಗೈರು ಹಾಜರಾಗಿದ್ದಾರೆ. ಸಾರ್ವಜನಿಕರಿಂದರ ಅವರ ಕಾರ್ಯವೈಖರಿ ಬಗ್ಗೆ ಹೆಚ್ಚಿನ ದೂರುಗಳು ಬಂದಿದ್ದು ಕೂಡಲೇ ಅವರಿಗೆ ಎಚ್ಚರಿಕೆ ನೀಡಲಾಗುವುದು. ಸರಿಪಡಿಸಿಕೊಳ್ಳದಿದ್ದರೆ ಅವರ ಜಾಗಕ್ಕೆ ಮತ್ತೊಬ್ಬರನ್ನು ತರುವುದು ನನಗೆ ಗೊತ್ತಿದೆ ಎಂದು ಮುಖ್ಯಾಧಿಕಾರಿ ವಿರುದ್ದ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications