ನಾನು ಹಣವಿಲ್ಲದೆ ಚಿಕ್ಕಬಳ್ಳಾಪುರದಲ್ಲಿ ಗೆಲುವು ಸಾಧಿಸಿದ್ದೇನೆ: ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ, ಮೇ, 13: ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಹಾಗೆಯೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರಬಲ ನಾಯಕನಾಗಿದ್ದ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮಣಿಸಿದ್ದಾರೆ. ಇನ್ನು ಈ ಬಗ್ಗೆ ಪ್ರದೀಪ್ ಈಶ್ವರ್ ಹೇಗೆ ಪ್ರತಿಕ್ರಿಸಿದ್ದಾರೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
"ಕಾಂಗ್ರೆಸ್ ಪಕ್ಷವು ದಕ್ಷಿಣ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಪ್ರಬಲ ನೆಲೆಯನ್ನು ಹೊಂದಿದೆ. ಅನಾಥ ಮಗು, ಬಡ ಕುಟುಂಬದವನಾಗಿದ್ದ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಚುನಾವಣೆಯಲ್ಲಿ ನಾನು ಹಣವಿಲ್ಲದೆ ಗೆಲುವು ಸಾಧಿಸಿದ್ದೇನೆ. ಇದರಿಂದ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಆದ್ದರಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದ ಹೇಳುತ್ತೇನೆ." ಹೀಗೆ ಹೇಳುವ ಮೂಲಕ ಕೆ.ಸುಧಾಕರ್ಗೆ ಪ್ರದೀಪ್ ಈಶ್ವರ್ ಟಾಂಟ್ ಕೊಟ್ಟಿದ್ದಾರೆ.

ಅದರಲ್ಲೂ ಚಿಕ್ಕಾಬಳ್ಳಾಪುರ ಕ್ಷೇತ್ರದಲ್ಲಿ ಕೆ.ಸುಧಾಕರ್ ಅವರು ಬಿಜೆಪಿಯ ಪ್ರಬಲ ಆಭ್ಯರ್ಥಿ ಆಗಿದ್ದರು. ಹಾಗೆಯೆ ಇವರ ಪರವಾಗಿ ಸಿನಿ ತಾರೆಯರು ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಅಬ್ಬರದ ಪ್ರಚಾರ ಮಾಡದ್ದರು. ಅಲ್ಲದೆ ಸುಧಾರಕರ್ ಈ ಕ್ಷೇತ್ರದಲದಲ್ಲಿ ತುಂಬಾ ಪ್ರಾಬಲ್ಯವುಳ್ಳವರಾಗಿದ್ದರು. ಆದರೂ ಕೂಡ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಹೊಸ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಸೋಲುಂಡಿರುವುದು ನಿಜಕ್ಕೂ ಆಶ್ಚರ್ಯದ ಸಂಗತಿಯಾಗಿದೆ.












Click it and Unblock the Notifications