Chikkaballapur Lok Sabha Election Results 2024 LIVE: ಹೊಸಬ Vs ಹಳಬ.. ಯಾರ ಕೈ ಹಿಡಿದ ಚಿಕ್ಕಬಳ್ಳಾಪುರ ಮತದಾರ?
ಚಿಕ್ಕಬಳ್ಳಾಪುರ, ಜೂನ್. 04: ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೊಸಬ V/s ಹಳಬ ಪೈಪೋಟಿಯಿದೆ. ಮಾಜಿ ಸಚಿವ ಡಾ. ಕೆ ಸುಧಾಕರ್ ಎದುರು ಮೊದಲ ಬಾರಿಗೆ ಯುವ ನಾಯಕ ರಕ್ಷಾ ರಾಮಯ್ಯರನ್ನು ಕಾಂಗ್ರೆಸ್ ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ನಡೆಸಿದೆ. ಇಬ್ಬರು ನಾಯಕರಲ್ಲಿ ಯಾರಿಗೆ ಗೆಲುವು ಎಂಬುದೆ ಸದ್ಯದ ದೊಡ್ಡ ಚರ್ಚೆ.
ಸಚಿವರಾಗಿದ್ದರೂ ಕೂಡ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಕೆ ಸುಧಾಕರ್ ಅವರಿಗೆ ಈ ಚುನಾವಣೆ ಮಾಡು ಇಲ್ಲವೆ ಮಡಿ ಎಂಬಂತಿದೆ. ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರವನ್ನು 2019ರಲ್ಲಿ ಬಿಜೆಪಿ ಕೈವಶವಾಗಲು ಸುಧಾಕರ್ ಕೂಡ ಕಾರಣ. ಹೀಗಾಗಿಯೇ ಅವರಿಗೆ ಟಿಕೆಟ್ ಸಿಕ್ಕಿದೆ. ಅವರು ಕ್ಷೇತ್ರ ಉಳಿಸಿಕೊಳ್ಳುವ ಹೋರಾಟದಲ್ಲಿದ್ದಾರೆ. ಆದರೆ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಟಫ್ ಫೈಟ್ ಕೊಡುತ್ತಿದ್ದಾರೆ.
ಕೆ ಸುಧಾಕರ್ ಗೆಲುವಿನ ನಗೆ
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆಲುವಿನ ನಗೆ ಬೀರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಾದ ಸೋಲಿನ ಕಹಿಯನ್ನು ಮರೆತಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,63, 460 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ 8,22,619 ಮತಗಳನ್ನು ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.
ಡಾ. ಕೆ ಸುಧಾಕರ್ಗೆ 49645 ಮತಗಳ ಮುನ್ನಡೆ
ಡಾ.ಕೆ ಸುಧಾಕರ್:270775
ರಕ್ಷಾ ರಾಮಯ್ಯ:221130
ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್: 49645 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹಿನ್ನಡೆ
ಬಿಜೆಪಿ - ಡಾ.ಕೆ.ಸುಧಾಕರ್ - 1,18,262
ಕಾಂಗ್ರೆಸ್ - ರಕ್ಷಾ ರಾಮಯ್ಯ - 96,199
ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ 22063 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 22063 ಮತಗಳ ಹಿನ್ನಡೆ.
ಬಿಜೆಪಿ ಅಭ್ಯರ್ಥಿ ಸುಧಾಕರ್ ಮುನ್ನಡೆ
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಮುನ್ನಡೆ ಸಾಧಿಸಿದ್ದಾರೆ, ಐದು ಸುತ್ತುಗಳ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಿಂತ 6934 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅಂಚೆ ಮತಗಳ ಎಣಿಕೆ
ಲೋಕಸಭಾ ಚುನಾವಣೆಯ ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮುನ್ನಡೆಯಲ್ಲಿದ್ದಾರೆ. ಮಾಜಿ ಸಚಿವ ಡಾ. ಕೆ ಸುಧಾಕರ್ ಹಿನ್ನಡೆ ಅನುಭವಿಸಿದ್ದಾರೆ.

ಆದರೆ, ಶ್ರೀಮಂತ ಮತ್ತು ಪ್ರಭಾವಿ ರಾಜಕೀಯ ಕುಟುಂಬ, ಎಂ ಎಸ್ ರಾಮಯ್ಯ ಮನೆತನದಿಂದ ಬಂದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ಹೊಸ ಮುಖ. ಆದರೂ, ಚಿಕ್ಕಬಳ್ಳಾಪುರದ ಜನತೆಗೆ ಪರಿಚಿತ ಮುಖವೆ. ಹೀಗಾಗಿ ಮಾಜಿ ಸಚಿವ ಸುಧಾಕರ್ಗೆ ದೊಡ್ಡ ಪೈಪೋಟಿಯೇ ನೀಡಿದ್ದಾರೆ.
ಇನ್ನು, 1962ರಿಂದ ಚಿಕ್ಕಬಳ್ಳಾಪುರ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿಯಿಂದ ಎರಡು ಬಾರಿ ಮಾತ್ರ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿದೆ. ಈ ಬಾರಿ ಮತ್ತೆ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications