Chikkaballapur Lok Sabha Election Results 2024: ವಿಧಾನಸಭಾ ಚುನಾವಣೆ ಸೋಲನ್ನು ಹಿಮ್ಮೆಟ್ಟುತ್ತಾರಾ ಸುಧಾಕರ್!?
ಚಿಕ್ಕಬಳ್ಳಾಪುರ, ಜೂನ್. 02: ಈ ಬಾರಿ ಹೆಚ್ಚು ಕುತೂಹಲಕ್ಕೆ ಕಾರಣವಾಗಿದ್ದ ಲೋಕಸಭಾ ಕ್ಷೇತ್ರಗಳಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಒಂದು. ಮಾಜಿ ಸಚಿವರ ಎದುರು ಮೊದಲ ಬಾರಿಗೆ ಯುವ ನಾಯಕರೊಬ್ಬರನ್ನು ಕಾಂಗ್ರೆಸ್ ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ನಡೆಸಿದೆ. ಇಬ್ಬರು ನಾಯಕರಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕ, ಸಚಿವ ಕೆ ಸುಧಾಕರ್ ಅವರನ್ನು ಸೋಲಿಸಿ ಯಾರು ನಿರೀಕ್ಷಿಸದ ಫಲಿತಾಂಶ ನೀಡಿದ್ದ ಕ್ಷೇತ್ರ ಚಿಕ್ಕಬಳ್ಳಾಪುರ. ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರವನ್ನು 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಮತ್ತು ಒಕ್ಕಲಿಗರ ಮತಗಳಿಂದ ಬಿಜೆಪಿ ಮೊದಲ ಬಾರಿಗೆ ಕಸಿದುಕೊಂಡಿತ್ತು. ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಮಾಜಿ ಸಚಿವ ಸುಧಾಕರ್ ಕೂಡ ತಮ್ಮ ಕ್ಷೇತ್ರ ಉಳಿಸಿಕೊಳ್ಳಲು ಭಾರಿ ಪ್ರಯತ್ನ ಮಾಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗೆಲುವು ಯಾರಿಗೆ?
ಮಾಜಿ ಸಚಿವ ಸುಧಾಕರ್ ಅವರಿಗೆ ಹೋಲಿಸಿಕೊಂಡರೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ಹೊಸ ಮುಖ. ಆದರೆ, ಶ್ರೀಮಂತ ಮತ್ತು ಪ್ರಭಾವಿ ರಾಜಕೀಯ ಕುಟುಂಬ, ಎಂ ಎಸ್ ರಾಮಯ್ಯ ಮನೆತನದಿಂದ ಬಂದವರು. ಹೀಗಾಗಿ ಚಿಕ್ಕಬಳ್ಳಾಪುರದ ಜನತೆಗೆ ಪರಿಚಿತ ಮುಖ. ಚಿಕ್ಕಬಳ್ಳಾಪುರ, ದೇವನಹಳ್ಳಿ ಮತ್ತು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಇವರ ಪ್ರಭಾವವಿದೆ. ಅದು ಮತಗಳಾಗಿ ಪರಿವರ್ತನೆಯಾಗಿದೆಯೆ ಎಂಬುದು ಜೂನ್ ನಾಲ್ಕರಂದು ತಿಳಿಯಲಿದೆ.
ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಕಾಂಗ್ರೆಸ್ ಬಿಟ್ಟು ಬಿಜೆಪಿಯ ಆಪರೇಷನ್ ಕಮಲಕ್ಕೆ ಸಿಲುಕಿದವರು. ಹೀಗಾಗಿ ಕಾಂಗ್ರೆಸ್ ನಾಯಕರಲ್ಲಿಯೂ ಅವರ ಆಪ್ತರಿದ್ದಾರೆ. ಈ ಬಾರಿ ಕಾಂಗ್ರೆಸ್ಗೆ ಒಳ ಏಳು ಬಿಟ್ಟಿರುವ ಸಾಧ್ಯತೆ ಹೆಚ್ಚಾಗಿದೆ. ಸಚಿವರಾಗಿ ಮತ್ತು ಶಾಸಕರಾಗಿ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಹೆಸರು ಕೂಡ ಇದೆ ಹೀಗಾಗಿ ಸುಧಾಕರ್ ತಾವೇ ಗೆಲ್ಲುವುದು ಎಂಬ ವಿಶ್ವಾಸದಲ್ಲಿದ್ದಾರೆ.

ಇನ್ನು, 1962ರಿಂದ ಚಿಕ್ಕಬಳ್ಳಾಪುರ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿಯಿಂದ ಎರಡು ಬಾರಿ ಮಾತ್ರ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿದೆ. ಈವರೆಗಿನ 13 ಚುನಾವಣೆಗಳಲ್ಲಿ, ಒಬಿಸಿ ಅಭ್ಯರ್ಥಿಗಳು 1996 ರಿಂದ ಸತತವಾಗಿ ಆರು ಚುನಾವಣೆಗಳನ್ನು ಗೆದ್ದಿದ್ದಾರೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications