ಬೈಕ್, ಮೊಬೈಲ್ ಆಸೆಗಾಗಿ 4 ತಿಂಗಳ ಮಗುವನ್ನು ಮಾರಿದ ತಂದೆ-ತಾಯಿ
ಚಿಕ್ಕಬಳ್ಳಾಪುರ, ಆಗಸ್ಟ್ 30: ಹೆತ್ತ ತಂದೆ ತಾಯಿಯೇ 4 ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಅನುಮಾನಸ್ಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ತಿನಕಲ್ಲು ಗ್ರಾಮದ ಮಹಾಲಕ್ಷ್ಮೀ ಹಾಗೂ ನರಸಿಂಹಮೂರ್ತಿ ದಂಪತಿಗೆ ಇಬ್ಬರು ಮಕ್ಕಳಿದ್ದು, ಇದರಲ್ಲಿ 4 ತಿಂಗಳ ಹೆಣ್ಣು ಮಗುವನ್ನು ಶಿಡ್ಲಘಟ್ಟ ತಾಲೂಕು ಮಳಮಾಚನಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಮುನಿರತ್ನಮ್ಮ ದಂಪತಿಗೆ ಮಾರಾಟ ಮಾಡಿದ್ದಾರೆ.
ಮುನಿರತ್ನಮ್ಮ ಹಾಗೂ ಮಂಜುನಾಥ್ ದಂಪತಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಿನಕಲ್ಲು ಗ್ರಾಮದ ಮಹಾಲಕ್ಷ್ಮೀ ಹಾಗೂ ನರಸಿಂಹಮೂರ್ತಿ ಮಗುವನ್ನು ದತ್ತು ನೀಡಲು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಮಹಿಳಾ ಹೋಮ್ ಗಾರ್ಡ್ ಮಧ್ಯವರ್ತಿಯಾಗಿ ಮಗು ಮಾರಾಟ ಮಾಡಿಸಿರುವ ಮಾಹಿತಿ ಲಭ್ಯವಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ತಿನಕಲ್ಲು ಗ್ರಾಮ ಹಾಗೂ ಮಳಮಾಚನಹಳ್ಳಿ ಗ್ರಾಮದ ದಂಪತಿ ಮನೆ ಮೇಲೆ ದಾಳಿ ಮಾಡಿದಾಗ ಮಳಮಾಚನಹಳ್ಳಿ ಗ್ರಾಮದ ಮಂಜುನಾಥ್-ಮುನಿರತ್ನಮ್ಮ ಮನೆಯಲ್ಲಿ ಮಗು ಪತ್ತೆಯಾಗಿದ್ದು, ಈ ವೇಳೆ ವಿಚಾರಿಸಿದಾಗ ಮಗುವಿನ ತಂದೆ, ತಾಯಿ ಬಾಯ್ಬಿಟ್ಟಿದ್ದಾರೆ.
ತಂದೆ, ತಾಯಿ ಮಗುವನ್ನು ಸಾಕಲು ಅಶಕ್ತರಾದ ಕಾರಣ ನಾವು ಸಾಕುತ್ತಿದ್ದೇವೆ ಎಂದು ಮಗು ಕೊಂಡುಕೊಂಡ ದಂಪತಿ ಹೇಳಿದ್ದಾರೆ. ಮಗು ಮಾರಾಟ ಮಾಡಿರುವ ಮನೆಗೆ ಭೇಟಿ ನೀಡಿದಾಗ ತಾಯಿ ಮಾತ್ರ ಇದ್ದು, ತಂದೆ ಪರಾರಿಯಾಗಿದ್ದ.
ಹೀಗಾಗಿ ಮನೆಯಲ್ಲಿದ್ದ ತಾಯಿ ಹಾಗೂ ಮತ್ತೊಂದು ಗಂಡು ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ವಶಕ್ಕೆ ಪಡೆದ ಮಗುವನ್ನ ಚಿಕ್ಕಬಳ್ಳಾಪರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಒಂದೂವರೆ ಲಕ್ಷ ರುಪಾಯಿಗೆ ಮಗುವನ್ನು ಮಾರಾಟ ಮಾಡಲಾಗಿದೆ ಎನ್ನಲಾಗಿದ್ದು, ಈ ಹಣದಲ್ಲಿ ತಂದೆ ಹೊಸ ಬೈಕ್ ಹಾಗೂ ತಾಯಿ ಹೊಸ ಮೊಬೈಲ್ ಖರೀದಿಸಿ ಶೋಕಿ ಮಾಡುತ್ತಿದ್ದಾಗ ಅನುಮಾನಗೊಂಡವರು ಈ ವಿಚಾರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳಿಗೆ ತಿಳಿಸಿದ್ದರು.
ಈ ಕುರಿತು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದು, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ತನಿಖೆಯಿಂದ ಸಂಪೂರ್ಣ ಸತ್ಯ ಹೊರಬರಬೇಕಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications