ಚಿಕ್ಕಬಳ್ಳಾಪುರ: ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆಯಿಂದ ಉಚಿತ ಹೃದಯ ಶಸ್ತ್ರಚಿಕಿತ್ಸೆ ಸೇವೆ
ಚಿಕ್ಕಬಳ್ಳಾಪುರ: ವಸುಧೈವ ಕುಟುಂಬಕಂ ಎನ್ನುವ ಪರಿಕಲ್ಪನೆ ಭಾರತದ ಸಂಸ್ಕೃತಿಯ ಭಾಗವಾಗಿದೆ. ಜಗತ್ತೇ ಒಂದು ಕುಟುಂಬ ಎನ್ನುವ ಪರಿಕಲ್ಪನೆ ಸಮಾಜದ ಭಾಗವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಗಳು ಸೇರಿದಂತೆ ಕೆಲವೊಂದು ಕ್ಷೇತ್ರಗಳಲ್ಲಿ ಮಾನವೀಯತೆ ಮರೆಯಾಗಿದೆ. ದುಡ್ಡೇ ಮಾತನಾಡುವಂತಾಗಿದೆ ಎನ್ನುವ ಅಪವಾದವಿದೆ. ಅದಕ್ಕೆ ತದ್ವಿರುದ್ಧವಾಗಿ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿರುವ ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆಯ ಬಡವರಿಗೆ ಆಶಾಕಿರಣವಾಗಿದೆ.
ಸುಧಾರಿತ ಹೃದಯ ಆರೈಕೆಯು ಎಲ್ಲರಿಗೂ ಸಿಗಬೇಕು. ಕೇವಲ ಶ್ರೀಮಂತರಿಗೆ ಸೀಮಿತವಾಗಬಾರದು ಎಂಬ ಗುರಿಯೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ, ಉಪಕ್ರಮಗಳು, ಆರೋಗ್ಯ ರಕ್ಷಣೆಯಲ್ಲಿ ತಾಂತ್ರಿಕ ಶ್ರೇಷ್ಠತೆ ಮತ್ತು ನಾವೀನ್ಯತೆಯ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್'ನ ಬದ್ಧತೆಯನ್ನು ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆ ಅಳವಡಿಸಿಕೊಂಡಿದೆ.

'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ನ ಭಾಗವಾಗಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಸ್ಥೆಯು (SMSIMSR) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಮಿನಿಮಲ್ ಇನ್ವೇಸಿವ್ ಟೋಟಲ್ ಎಂಡೋಸ್ಕೋಪಿಕ್ ಕಾರ್ಡಿಯಾಕ್ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಿದ ಜಗತ್ತಿನ ವೈದ್ಯಕೀಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಭಾರತದ ಮೂರನೇ ಕೇಂದ್ರವಾಗಿದೆ.
2025ರ ಡಿಸೆಂಬರ್ 13 ರಂದು 29 ವರ್ಷದ ಮಹಿಳಾ ರೋಗಿಗೆ ಸಂಪೂರ್ಣ ಎಂಡೋಸ್ಕೋಪಿಕ್ ಕಾರ್ಡಿಯಾಕ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದರೊಂದಿಗೆ ಅವರು ಹೊಸ ಜೀವನ, ಕನಸುಗಳು ಹಾಗೂ ಅವಕಾಶಗಳನ್ನು ನೀಡಿದಂತಾಗಿದೆ. ಹಾರ್ಟ್ ವಾಲ್ಟ್ ಬ್ಯಾಂಕ್ನ ನಿರ್ದೇಶಕರಾದ ಡಾ ಸಿ.ಎಸ್.ಹಿರೇಮಠ್ ನೇತೃತ್ವದಲ್ಲಿ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ತಂಡವು ಕೋಲ್ಕತ್ತಾದ ಮಣಿಪಾಲ ಆಸ್ಪತ್ರೆಯ ಮುಖ್ಯ ಎಂಡೋಸ್ಕೋಪಿಕ್ ಕಾರ್ಡಿಯಾಕ್ ಸರ್ಜನ್ ಡಾ ಸಂದೀಪ್ ಸರ್ದಾರ್ ಮತ್ತವರ ತಂಡದ ಸಹಯೋಗದೊಂದಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಸುಧಾರಿತ ಉಪಕರಣಗಳೊಂದಿಗೆ ನಡೆಸಲಾದ ಶಸ್ತ್ರಚಿಕಿತ್ಸೆಯ ಪರಿಣಾಮವಾಗಿ ರೋಗಿಗೆ 2 ಸೆಂ.ಮೀ ಗಿಂತ ಕಡಿಮೆ ಗಾತ್ರದ ಗಾಯದ ಗುರುತು ಆಗಿದೆ. ಅವರು ಕೇವಲ 72 ಗಂಟೆಗಳಲ್ಲಿ ಚೇತರಿಸಿಕೊಳ್ಳಲು ಮತ್ತು ಅವರನ್ನು ಡಿಸ್ಚಾರ್ಚ್ ಮಾಡಲು ಸಾಧ್ಯವಾಗಿದೆ. ಈ ವೈದ್ಯಕೀಯ ಬೆಳವಣಿಗೆಯು ರೋಗಿಗಳಿಗೆ ಸುರಕ್ಷಿತ ಹೃದಯ ಶಸ್ತ್ರಚಿಕಿತ್ಸೆ ಆಯ್ಕೆಗಳನ್ನು ನೀಡುತ್ತದೆ. ಜೊತೆಗೆ ಕನಿಷ್ಠ ಗಾಯದ ಗುರುತು ಮತ್ತು ತ್ವರಿತ ಚೇತರಿಕೆಯನ್ನು ನೀಡಲು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ತಂಡದ ಪರಿಣಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications