ಚಿಕ್ಕಬಳ್ಳಾಪುರ: ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆಯಿಂದ ಉಚಿತ ಹೃದಯ ಶಸ್ತ್ರಚಿಕಿತ್ಸೆ ಸೇವೆ
ಚಿಕ್ಕಬಳ್ಳಾಪುರ: ವಸುಧೈವ ಕುಟುಂಬಕಂ ಎನ್ನುವ ಪರಿಕಲ್ಪನೆ ಭಾರತದ ಸಂಸ್ಕೃತಿಯ ಭಾಗವಾಗಿದೆ. ಜಗತ್ತೇ ಒಂದು ಕುಟುಂಬ ಎನ್ನುವ ಪರಿಕಲ್ಪನೆ ಸಮಾಜದ ಭಾಗವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಗಳು ಸೇರಿದಂತೆ ಕೆಲವೊಂದು ಕ್ಷೇತ್ರಗಳಲ್ಲಿ ಮಾನವೀಯತೆ ಮರೆಯಾಗಿದೆ. ದುಡ್ಡೇ ಮಾತನಾಡುವಂತಾಗಿದೆ ಎನ್ನುವ ಅಪವಾದವಿದೆ. ಅದಕ್ಕೆ ತದ್ವಿರುದ್ಧವಾಗಿ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿರುವ ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆಯ ಬಡವರಿಗೆ ಆಶಾಕಿರಣವಾಗಿದೆ.
ಸುಧಾರಿತ ಹೃದಯ ಆರೈಕೆಯು ಎಲ್ಲರಿಗೂ ಸಿಗಬೇಕು. ಕೇವಲ ಶ್ರೀಮಂತರಿಗೆ ಸೀಮಿತವಾಗಬಾರದು ಎಂಬ ಗುರಿಯೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ, ಉಪಕ್ರಮಗಳು, ಆರೋಗ್ಯ ರಕ್ಷಣೆಯಲ್ಲಿ ತಾಂತ್ರಿಕ ಶ್ರೇಷ್ಠತೆ ಮತ್ತು ನಾವೀನ್ಯತೆಯ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್'ನ ಬದ್ಧತೆಯನ್ನು ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆ ಅಳವಡಿಸಿಕೊಂಡಿದೆ.

'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ನ ಭಾಗವಾಗಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಸ್ಥೆಯು (SMSIMSR) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಮಿನಿಮಲ್ ಇನ್ವೇಸಿವ್ ಟೋಟಲ್ ಎಂಡೋಸ್ಕೋಪಿಕ್ ಕಾರ್ಡಿಯಾಕ್ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಿದ ಜಗತ್ತಿನ ವೈದ್ಯಕೀಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಭಾರತದ ಮೂರನೇ ಕೇಂದ್ರವಾಗಿದೆ.
2025ರ ಡಿಸೆಂಬರ್ 13 ರಂದು 29 ವರ್ಷದ ಮಹಿಳಾ ರೋಗಿಗೆ ಸಂಪೂರ್ಣ ಎಂಡೋಸ್ಕೋಪಿಕ್ ಕಾರ್ಡಿಯಾಕ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದರೊಂದಿಗೆ ಅವರು ಹೊಸ ಜೀವನ, ಕನಸುಗಳು ಹಾಗೂ ಅವಕಾಶಗಳನ್ನು ನೀಡಿದಂತಾಗಿದೆ. ಹಾರ್ಟ್ ವಾಲ್ಟ್ ಬ್ಯಾಂಕ್ನ ನಿರ್ದೇಶಕರಾದ ಡಾ ಸಿ.ಎಸ್.ಹಿರೇಮಠ್ ನೇತೃತ್ವದಲ್ಲಿ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ತಂಡವು ಕೋಲ್ಕತ್ತಾದ ಮಣಿಪಾಲ ಆಸ್ಪತ್ರೆಯ ಮುಖ್ಯ ಎಂಡೋಸ್ಕೋಪಿಕ್ ಕಾರ್ಡಿಯಾಕ್ ಸರ್ಜನ್ ಡಾ ಸಂದೀಪ್ ಸರ್ದಾರ್ ಮತ್ತವರ ತಂಡದ ಸಹಯೋಗದೊಂದಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಸುಧಾರಿತ ಉಪಕರಣಗಳೊಂದಿಗೆ ನಡೆಸಲಾದ ಶಸ್ತ್ರಚಿಕಿತ್ಸೆಯ ಪರಿಣಾಮವಾಗಿ ರೋಗಿಗೆ 2 ಸೆಂ.ಮೀ ಗಿಂತ ಕಡಿಮೆ ಗಾತ್ರದ ಗಾಯದ ಗುರುತು ಆಗಿದೆ. ಅವರು ಕೇವಲ 72 ಗಂಟೆಗಳಲ್ಲಿ ಚೇತರಿಸಿಕೊಳ್ಳಲು ಮತ್ತು ಅವರನ್ನು ಡಿಸ್ಚಾರ್ಚ್ ಮಾಡಲು ಸಾಧ್ಯವಾಗಿದೆ. ಈ ವೈದ್ಯಕೀಯ ಬೆಳವಣಿಗೆಯು ರೋಗಿಗಳಿಗೆ ಸುರಕ್ಷಿತ ಹೃದಯ ಶಸ್ತ್ರಚಿಕಿತ್ಸೆ ಆಯ್ಕೆಗಳನ್ನು ನೀಡುತ್ತದೆ. ಜೊತೆಗೆ ಕನಿಷ್ಠ ಗಾಯದ ಗುರುತು ಮತ್ತು ತ್ವರಿತ ಚೇತರಿಕೆಯನ್ನು ನೀಡಲು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ತಂಡದ ಪರಿಣಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications