ಕಾರ್ಯಕ್ರಮದಲ್ಲಿ ಜೀವಂತ ಹಾವು ಪ್ರದರ್ಶನ; ಜಗ್ಗಿ ವಾಸುದೇವ್ ವಿರುದ್ಧ ದೂರು
ಚಿಕ್ಕಬಳ್ಳಾಪುರ, ಅ 16: ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೀವಂತ ಹಾವನ್ನು ಪ್ರದರ್ಶನ ಮಾಡಿದ್ದ ಇಶಾ ಫೌಂಡೇಶನ್ನ ಸಂಸ್ಥಾಪಕ, ಸದ್ಗುರು ಎಂದು ಕರೆಸಿಕೊಳ್ಳುವ ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲಾಗಿದೆ.
ಶನಿವಾರ ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೀವಂತ ಹಾವನ್ನು ಅಕ್ರಮ ಸಾಗಣೆ ಮಾಡಿ ಪ್ರದರ್ಶಿಸಿದ ಆರೋಪದ ಮೇಲೆ ದೂರು ದಾಖಲಾಗಿದೆ. ವನ್ಯಜೀವಿಯನ್ನು ನಾಶಪಡಿಸಿದ ಆರೋಪದ ಮೇಲೆ ಸದ್ಗುರು ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.
ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಸೊಸೈಟಿ (Society for the Prevention of Cruelty to Animals)ಯ ಸದಸ್ಯ ಮತ್ತು ಉರಗ ತಜ್ಞ ಪೃಥ್ವಿರಾಜ್ ಅವರು ಚಿಕ್ಕಬಳ್ಳಾಪುರ ತಾಲೂಕಿನ ಅರಣ್ಯ ಉಪ ಸಂರಕ್ಷಣಾಧಿಕಾರಿ (ಡಿಸಿಎಫ್) ಅವರಿಗೆ ದೂರು ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ಹಾವು ಇನ್ನು ಅರಣ್ಯಾಧಿಕಾರಿಗೆ ಹಸ್ತಾಂತರಿಸಲಾಗಿಲ್ಲ ಎಂದು ಪೃಥ್ವಿರಾಜ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
''ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಉಲ್ಲಂಘನೆಯ ಕುರಿತು ISHA ಫೌಂಡೇಶನ್ನ ಸದ್ಗುರುಗಳು ಸಂಬಂಧಿಸಿದಂತೆ ಈ ದೂರು ನೀಡಲಾಗಿದೆ. ಸದ್ಗುರುಗಳು ಅಕ್ರಮವಾಗಿ ಸೆರೆಹಿಡಿಯಲಾದ, ಅಕ್ರಮವಾಗಿ ಸಾಗಣೆ ಮಾಡಲಾದ ಜೀವಂತ ಹಾವನ್ನು ಪ್ರದರ್ಶಿಸಿದ್ದಾರೆ. ಇದು ವನ್ಯಜೀವಿ ಸಂರಕ್ಷಣಾ ಕಾಯಿದೆ ಯ ಶೆಡ್ಯೂಲ್ 2 ರ ಅಡಿಯಲ್ಲಿ ಅಪರಾಧ. ಅಕ್ಟೋಬರ್ 9 ಮತ್ತು 10 ರಂದು ಘಟನೆ ಸಂಭವಿಸಿದೆ. ಇಲ್ಲಿಯವರೆಗೆ ಹಾವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿಲ್ಲ'' ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇಶಾ ಫೌಂಡೇಶನ್ ತಮಿಳುನಾಡಿನ ಅರಣ್ಯ ಭೂಮಿಯನ್ನು ಒತ್ತುವರಿ ಮಾಡುವ ಮೂಲಕ ಅರಣ್ಯ ನಾಶಕ್ಕೆ ಹಲವು ಪ್ರಯತ್ನಗಳನ್ನು ಮಾಡಿದೆ ಎಂದು ಪೃಥ್ವಿರಾಜ್ ಆರೋಪಿಸಿದ್ದಾರೆ.

ಅಕ್ಟೋಬರ್ 9 ರಂದು, ರಾಜ್ಯದಲ್ಲಿ ಇಶಾ ಫೌಂಡೇಶನ್ನ ಹೊಸ ಕೇಂದ್ರವನ್ನು ಘೋಷಿಸಲು ಸದ್ಗುರು ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಹೊಸ ಕೇಂದ್ರದಲ್ಲಿ 112 ಅಡಿ ಎತ್ತರದ ಶಿವನ ಪ್ರತಿಮೆಯೂ ನಿರ್ಮಾಣ ಹಂತದಲ್ಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಭಾಗವಹಿಸಿದ್ದರು.
ದೂರಿನ ಬಗ್ಗೆ ಇಶಾ ಫೌಂಡೇಶನ್ ಅಥವಾ ಸದ್ಗುರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications