ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ಶಂಕು ಸ್ಥಾಪನೆಗೆ ಮುಹೂರ್ತ ನಿಗದಿ
ಬೆಂಗಳೂರು, ನವೆಂಬರ್ 1: ಚಿಕ್ಕಬಳ್ಳಾಪುರ, ವಿವಾದಿತ ವೈದ್ಯ ಕಾಲೇಜಿನ ಶಂಕುಸ್ಥಾಪನೆ ನವೆಂಬರ್ 8ರಂದು ನೆರವೇರಲಿದೆ.
ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಅನರ್ಹ ಶಾ. ಡಾ. ಕೆ. ಸುಧಾಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜಿನ ಶಂಕುಸ್ಥಾಪನೆಗೆ ಮುಹೂರ್ತ ನಿಗದಿಯಾಗಿದೆ.
ಮೆಡಿಕಲ್ ಕಾಲೇಜು ವಿಚಾರ: ಡಿಕೆಶಿಗೆ ತಿರುಗೇಟು ಕೊಟ್ಟ ಸುಧಾಕರ್
ನವೆಂಬರ್ 8ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಸ್ಥಳಾಂತರ ಮಾಡಿ ಬಿಜೆಪಿ ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ.
450 ಕೋಟಿ ರೂ. ಯೋಜನೆಗೆ ಒಪ್ಪಿಗೆ ನೀಡಿದ್ದು, 150ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಉಂಟಾಗಿರುವ ವಿವಾದ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು.
ತಾಲೂಕಿಗೊಂದು ವೈದ್ಯ ಕಾಲೇಜು ಕೊಡುವುದಿಕ್ಕೆ ಆಗುವುದಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಯಡಿಯೂರಪಪ್ ಕನಕಪುರದಲ್ಲಿ ವೈದ್ಯ ಕಾಲೇಜು ಸ್ಥಾಪನೆ ಇಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.
ಕಾಲೇಜು ಸ್ಥಾಪನೆ ವಿಚಾರದಲ್ಲಿ ಗೊಂದಲ ಇಲ್ಲ, ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅವಕಾಶ ನೀಡಲಾಗುವುದು, ತಾಲೂಕಿಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅವಕಾಶ ಕೊಡುವುದಕ್ಕೆ ಆಗುತ್ತದೆಯೇ ಈ ಬಗ್ಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಳಿ ಮಾತನಾಡುತ್ತೇನೆ ಎಂದು ತಿಳಿಸಿದರು.