ಚಿಕ್ಕಬಳ್ಳಾಪುರದ ಚಿನ್ನದಂಗಡಿ ಮಾಲೀಕನಿಗೆ ಕೊರೊನಾ ಸೋಂಕು
ಚಿಕ್ಕಬಳ್ಳಾಪುರ, ಮೇ 10: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಚಿನ್ನದಂಗಡಿ ಮಾಲೀಕನಿಗೆ ಕೊರೊನಾ ವೈರಸ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ನಗರದಲ್ಲಿ ಹೈ ಅಲರ್ಟ್ ಆಗಿದೆ. ಇಂದಿನಿಂದ ಚಿಂತಾಮಣಿ ನಗರದಲ್ಲಿ ಚಿನ್ನದಂಗಡಿ, ಚಪ್ಪಲಿ, ಬಟ್ಟೆ, ಫ್ಯಾನ್ಸಿ ಸ್ಟೋರ್ ಸೇರಿ ಬಹುತೇಕ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಕೊರೊನಾ ಸೋಂಕಿತ ವ್ಯಕ್ತಿ ಚಿನ್ನದಂಗಡಿ ಮಾಲೀಕನಾಗಿರುವ ಕಾರಣ, ಸಮುದಾಯದ ಸಂಪರ್ಕದಲ್ಲಿದ್ದರು ಎಂದು ಎಲ್ಲಾ ಚಿನ್ನದಂಗಡಿಗಳನ್ನು ಬಂದ್ ಮಾಡಲಾಗಿದೆ. ಚಿಂತಾಮಣಿ ನಗರ ವಾಣಿಜ್ಯ ನಗರಿಯಾಗಿದೆ.
ಸೋಂಕಿತನ ಪತ್ನಿ ಮೇ 4 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅಂತ್ಯಕ್ರಿಯೆಯಲ್ಲಿ ಇವರ ಸಮುದಾಯದ ನೂರಾರು ಮಂದಿ ಭಾಗಿಯಾಗಿದ್ದರು. ಹೀಗಾಗಿ ಆ ಸಮುದಾಯದವರು ವ್ಯಾಪಾರ ವಹಿವಾಟು ಮಾಡುವ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ಕೇವಲ ಅಗತ್ಯ ವಸ್ತುಗಳಾದ ದಿನಸಿ, ಹಾಲು, ತರಕಾರಿ ಹಾಗೂ ಕೃಷಿ ಪರಿಕರಗಳು ಕೆಲ ಅಂಗಡಿಗಳು ತೆರೆಯಲಷ್ಟೇ ಅನುಮತಿ ನೀಡಲಾಗಿದೆ.

ಲಾಕ್ ಡೌನ್ 3.0 ಸಡಿಲಿಕೆಗಳ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಮಧ್ಯಾಹ್ನ 2 ಗಂಟೆಯವರೆಗೂ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳು ತೆರೆಯಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದರು.
ಆದರೆ ಈಗ ಚಿಂತಾಮಣಿ ನಗರದಲ್ಲಿ ಮೊದಲ ಕೋವಿಡ್-19 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅವಕಾಶವಿದೆ. ಸದ್ಯಕ್ಕೆ ಸೋಂಕಿತನ ನಿವಾಸದ 200 ಮೀಟರ್ ಸುತ್ತಳತೆಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ಚಿಂತಾಮಣಿ ನಗರ ಹೊರವಲಯದ ಬಿಸಿಎಂ ವಸತಿ ನಿಲಯದಲ್ಲಿ ಸೋಂಕಿತನ ಪ್ರಥಮ ಸಂಪರ್ಕಿತ 42 ಮಂದಿ ಕುಟುಂಬ ಸದಸ್ಯರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಇನ್ನಷ್ಟು ಮಂದಿ ಕ್ವಾರಂಟೈನ್ ಗೆ ಒಳಪಡಿಸುವ ಸಾಧ್ಯತೆಯಿದೆ.
ಇದಲ್ಲದೇ ಸೋಂಕಿತನ 22 ವರ್ಷದ ಮೊಮ್ಮಗನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದ್ದು, ವೃದ್ಧನ ಮೊಮ್ಮಗನಿಗೂ ಕೊರೊನಾ ಸೋಂಕು ಧೃಢವಾಗುವ ಸಾಧ್ಯತೆಯಿದೆ. ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications