ಬೆಳೆ ಹಾನಿ: ಚಿಕ್ಕಬಳ್ಳಾಪುರದ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆ
ಚಿಕ್ಕಬಳ್ಳಾಪುರ, ಜನವರಿ 6: ಕಳೆದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುರಿದ ಭಾರೀ ಪ್ರಮಾಣದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಾನಿಗೊಳಗಾದ ರೈತರ ಬೆಳೆಗಳ ವಿವರಗಳನ್ನು ಈವರೆಗೆ ಒಟ್ಟು 17 ಹಂತಗಳಲ್ಲಿ ನಮೂದಿಸಲಾಗಿದೆ.
Recommended Video
ಒಟ್ಟು 81,165 ರೈತ ಫಲಾನುಭವಿಗಳಿಗೆ 37,80,03,265.5 ರೂ.ಗಳನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಈ ಕುರಿತು ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಮಳೆಯಿಂದ ಜಿಲ್ಲೆಯಾದ್ಯಂತ ಆಗಿರುವ ಬೆಳೆ ಹಾನಿ ವಿವರಗಳನ್ನು ಪ್ರಥಮ ಆದ್ಯತೆಯ ಮೇಲೆ ಪರಿಹಾರ್ ಪೋರ್ಟಲ್ನಲ್ಲಿ ನಮೂದಿಸಲಾಗಿದೆ. ಜ.6ರವರೆಗೆ ನಡೆದ 17 ಹಂತಗಳ ದತ್ತಾಂಶ ನಮೂದು ಭಾಗವಾಗಿ 81,165 ರೈತ ಫಲಾನುಭವಿಗಳಿಗೆ ಒಟ್ಟು 37,80,03,265.5 ರೂಪಾಯಿಯನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.

ಜ.6ರವರೆಗೆ ಲಭ್ಯವಾಗಿರುವ ಅಂಕಿ ಅಂಶಗಳ ಪ್ರಕಾರ, ಈವರೆಗೆ ಒಟ್ಟು 17 ಹಂತಗಳಲ್ಲಿ ರೈತರ ಬೆಳೆ ಹಾನಿ ವಿವರ ನೋಂದಣಿ ಮಾಡಿ ರೈತ ಫಲಾನುಭವಿಗಳ ಹೆಸರನ್ನು ಪರಿಹಾರ್ ಪೋರ್ಟಲ್ ದತ್ತಾಂಶದಲ್ಲಿ ನಮೂದಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಳೆಹಾನಿ ವಿವರ ಹಾಗೂ ಪರಿಹಾರ
ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳ ಹಾನಿಗೊಳಗಾದ ದತ್ತಾಂಶವನ್ನು ತಾಲ್ಲೂಕುವಾರು ಈ ರೀತಿ ನಮೂದಿಸಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಒಟ್ಟು 10,367.6 ಹೆಕ್ಟೇರ್, ಚಿಂತಾಮಣಿಯಲ್ಲಿ 12,190.7 ಹೆಕ್ಟೇರ್, ಬಾಗೇಪಲ್ಲಿಯಲ್ಲಿ 14,811.4 ಹೆಕ್ಟೇರ್, ಗೌರಿಬಿದನೂರಿನಲ್ಲಿ 14,104.3 ಹೆಕ್ಟೇರ್, ಗುಡಿಬಂಡೆ 7,613.12 ಹೆಕ್ಟೇರ್ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ 9,356.96 ಹೆಕ್ಟೇರ್ ಸೇರಿದಂತೆ ಒಟ್ಟಾರೆ 68,444 ಹೆಕ್ಟೇರ್ ಪ್ರದೇಶದ ವಿವಿಧ ಬೆಳೆಗಳ ಬೆಳೆ ಹಾನಿಯಾಗಿದೆ.
ಕೋವಿಡ್ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ
ಕೋವಿಡ್-19ನಿಂದ ಮೃತಪಟ್ಟ 341 ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದಿಂದ ನೀಡುವ 50 ಸಾವಿರ ರೂ.ಗಳನ್ನು ನೇರವಾಗಿ ಸಂಬಂಧಪಟ್ಟವರ ಖಾತೆಗೆ ಜಮೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ನೀಡುವ ಒಂದು ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಚೆಕ್ ಮೂಲಕ 246 ಕುಟುಂಬಸ್ಥರಿಗೆ ವಿತರಿಸಲಾಗುತ್ತಿದೆ.

ಈ 246 ಕುಟುಂಬಗಳ ಪೈಕಿ ಚಿಕ್ಕಬಳ್ಳಾಪುರ ತಾಲ್ಲೂಕು 84, ಚಿಂತಾಮಣಿ ತಾಲ್ಲೂಕು 93, ಬಾಗೇಪಲ್ಲಿ ತಾಲ್ಲೂಕು 36, ಗೌರಿಬಿದನೂರು ತಾಲ್ಲೂಕು 48, ಗುಡಿಬಂಡೆ 23 ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 87 ಒಟ್ಟಾರೆ 341 ಕುಟುಂಬಸ್ಥರಿಗೆ ಪರಿಹಾರ ವಿತರಿಸಲು ಕ್ರಮವಹಿಸಲಾಗಿದೆ.
ಮಳೆಯಿಂದ ಹಾನಿಯಾದ ಮನೆಗಳ ವಿವರ ಹಾಗೂ ಪರಿಹಾರ
ಮಳೆಯಿಂದ ಹಾನಿಯಾದ ಮನೆಗಳಿಗೆ ಸರ್ಕಾರವು ಎ, ಬಿ, ಸಿ ವರ್ಗಗಳ ಹಾನಿಗೊಳಗಾದ ಮನೆಗಳಿಗೆ ವಿವಿಧ ಹಂತಗಳಲ್ಲಿ ಪರಿಹಾರವನ್ನು ನೀಡಲಾಗುತ್ತಿದೆ. ಅಲ್ಲದೇ ಮನೆಯಲ್ಲಿ ಮಳೆನೀರು ನುಗ್ಗಿ ದಿನಬಳಕೆ ವಸ್ತುಗಳು/ ಪಾತ್ರೆ/ ಬಟ್ಟೆ/ ದವಸ ಧಾನ್ಯಗಳು ಹಾನಿಯಾಗಿದ್ದರೆ, ತುರ್ತು ಪರಿಹಾರಕ್ಕೆ 10 ಸಾವಿರ ರೂ.ಗಳನ್ನು ವಿತರಿಸಲಾಗುತ್ತಿದೆ.
'ಎ' ವರ್ಗದ (ಶೇ.75ರಿಂದ ಶೇ.100) ಪೂರ್ಣ ಪ್ರಮಾಣದ ಮನೆ ಹಾನಿ ಹಾಗೂ 'ಬಿ 2' (ಶೇ.25ರಿಂದ ಶೇ.75) ತೀವ್ರ ಮನೆ ಹಾನಿ (ಕೆಡವಿ ಹೊಸದಾಗಿ ನಿರ್ಮಿಸುವುದು) ಒಟ್ಟು 5 ಲಕ್ಷ ರೂ. ನೀಡುತ್ತಿದ್ದು, ಮೊದಲ ಕಂತಿನಲ್ಲಿ 95,100 ರೂ.ಗಳನ್ನು ಹಾಗೂ ಉಳಿದ ನಾಲ್ಕು ಕಂತುಗಳಲ್ಲಿ 4,04,900 ರೂಗಳನ್ನು ನೀಡಲಾಗುತ್ತದೆ.
'ಬಿ 1' (ಶೇ.25ರಿಂದ ಶೇ.75) ತೀವ್ರ ಮನೆ ಹಾನಿ (ದುರಸ್ಥಿ)ಗೆ ಒಟ್ಟು 3 ಲಕ್ಷ ರೂ.ಗಳು ಮೊದಲ ಕಂತಿನಲ್ಲಿ 95,100 ರೂ.ಗಳು ಉಳಿದೆರಡು ಕಂತುಗಳಲ್ಲಿ 2,04,900 ರೂ.ಗಳನ್ನು ವಿತರಿಸಲಾಗುತ್ತದೆ. 'ಸಿ' (ಶೇ.15ರಿಂದ ಶೇ.25) ಭಾಗಶಃ ಮನೆಹಾನಿಗೆ ಒಟ್ಟು 50 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications