ಬೆಳೆ ಹಾನಿ: ಚಿಕ್ಕಬಳ್ಳಾಪುರದ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆ

ಚಿಕ್ಕಬಳ್ಳಾಪುರ, ಜನವರಿ 6: ಕಳೆದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುರಿದ ಭಾರೀ ಪ್ರಮಾಣದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಾನಿಗೊಳಗಾದ ರೈತರ ಬೆಳೆಗಳ ವಿವರಗಳನ್ನು ಈವರೆಗೆ ಒಟ್ಟು 17 ಹಂತಗಳಲ್ಲಿ ನಮೂದಿಸಲಾಗಿದೆ.

Recommended Video

      ನೈಟ್ ಕರ್ಫ್ಯೂ !! ಏನಿರತ್ತೆ ? ಏನಿರಲ್ಲಾ ? | Oneindia Kannada

      ಒಟ್ಟು 81,165 ರೈತ ಫಲಾನುಭವಿಗಳಿಗೆ 37,80,03,265.5 ರೂ.ಗಳನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

      ಈ ಕುರಿತು ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಮಳೆಯಿಂದ ಜಿಲ್ಲೆಯಾದ್ಯಂತ ಆಗಿರುವ ಬೆಳೆ ಹಾನಿ ವಿವರಗಳನ್ನು ಪ್ರಥಮ ಆದ್ಯತೆಯ ಮೇಲೆ ಪರಿಹಾರ್ ಪೋರ್ಟಲ್‌ನಲ್ಲಿ ನಮೂದಿಸಲಾಗಿದೆ. ಜ.6ರವರೆಗೆ ನಡೆದ 17 ಹಂತಗಳ ದತ್ತಾಂಶ ನಮೂದು ಭಾಗವಾಗಿ 81,165 ರೈತ ಫಲಾನುಭವಿಗಳಿಗೆ ಒಟ್ಟು 37,80,03,265.5 ರೂಪಾಯಿಯನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.

      Crop Damage Relief to Chikkaballapur District Farmer Beneficiaries Bank Account

      ಜ.6ರವರೆಗೆ ಲಭ್ಯವಾಗಿರುವ ಅಂಕಿ ಅಂಶಗಳ ಪ್ರಕಾರ, ಈವರೆಗೆ ಒಟ್ಟು 17 ಹಂತಗಳಲ್ಲಿ ರೈತರ ಬೆಳೆ ಹಾನಿ ವಿವರ ನೋಂದಣಿ ಮಾಡಿ ರೈತ ಫಲಾನುಭವಿಗಳ ಹೆಸರನ್ನು ಪರಿಹಾರ್ ಪೋರ್ಟಲ್ ದತ್ತಾಂಶದಲ್ಲಿ ನಮೂದಿಸಲಾಗಿದೆ ಎಂದು ಮಾಹಿತಿ ನೀಡಿದರು.

      ಬೆಳೆಹಾನಿ ವಿವರ ಹಾಗೂ ಪರಿಹಾರ
      ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳ ಹಾನಿಗೊಳಗಾದ ದತ್ತಾಂಶವನ್ನು ತಾಲ್ಲೂಕುವಾರು ಈ ರೀತಿ ನಮೂದಿಸಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಒಟ್ಟು 10,367.6 ಹೆಕ್ಟೇರ್, ಚಿಂತಾಮಣಿಯಲ್ಲಿ 12,190.7 ಹೆಕ್ಟೇರ್, ಬಾಗೇಪಲ್ಲಿಯಲ್ಲಿ 14,811.4 ಹೆಕ್ಟೇರ್, ಗೌರಿಬಿದನೂರಿನಲ್ಲಿ 14,104.3 ಹೆಕ್ಟೇರ್, ಗುಡಿಬಂಡೆ 7,613.12 ಹೆಕ್ಟೇರ್ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ 9,356.96 ಹೆಕ್ಟೇರ್ ಸೇರಿದಂತೆ ಒಟ್ಟಾರೆ 68,444 ಹೆಕ್ಟೇರ್ ಪ್ರದೇಶದ ವಿವಿಧ ಬೆಳೆಗಳ ಬೆಳೆ ಹಾನಿಯಾಗಿದೆ.

      ಕೋವಿಡ್‌ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ
      ಕೋವಿಡ್-19ನಿಂದ ಮೃತಪಟ್ಟ 341 ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದಿಂದ ನೀಡುವ 50 ಸಾವಿರ ರೂ.ಗಳನ್ನು ನೇರವಾಗಿ ಸಂಬಂಧಪಟ್ಟವರ ಖಾತೆಗೆ ಜಮೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ನೀಡುವ ಒಂದು ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಚೆಕ್ ಮೂಲಕ 246 ಕುಟುಂಬಸ್ಥರಿಗೆ ವಿತರಿಸಲಾಗುತ್ತಿದೆ.

      Crop Damage Relief to Chikkaballapur District Farmer Beneficiaries Bank Account

      ಈ 246 ಕುಟುಂಬಗಳ ಪೈಕಿ ಚಿಕ್ಕಬಳ್ಳಾಪುರ ತಾಲ್ಲೂಕು 84, ಚಿಂತಾಮಣಿ ತಾಲ್ಲೂಕು 93, ಬಾಗೇಪಲ್ಲಿ ತಾಲ್ಲೂಕು 36, ಗೌರಿಬಿದನೂರು ತಾಲ್ಲೂಕು 48, ಗುಡಿಬಂಡೆ 23 ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 87 ಒಟ್ಟಾರೆ 341 ಕುಟುಂಬಸ್ಥರಿಗೆ ಪರಿಹಾರ ವಿತರಿಸಲು ಕ್ರಮವಹಿಸಲಾಗಿದೆ.

      ಮಳೆಯಿಂದ ಹಾನಿಯಾದ ಮನೆಗಳ ವಿವರ ಹಾಗೂ ಪರಿಹಾರ
      ಮಳೆಯಿಂದ ಹಾನಿಯಾದ ಮನೆಗಳಿಗೆ ಸರ್ಕಾರವು ಎ, ಬಿ, ಸಿ ವರ್ಗಗಳ ಹಾನಿಗೊಳಗಾದ ಮನೆಗಳಿಗೆ ವಿವಿಧ ಹಂತಗಳಲ್ಲಿ ಪರಿಹಾರವನ್ನು ನೀಡಲಾಗುತ್ತಿದೆ. ಅಲ್ಲದೇ ಮನೆಯಲ್ಲಿ ಮಳೆನೀರು ನುಗ್ಗಿ ದಿನಬಳಕೆ ವಸ್ತುಗಳು/ ಪಾತ್ರೆ/ ಬಟ್ಟೆ/ ದವಸ ಧಾನ್ಯಗಳು ಹಾನಿಯಾಗಿದ್ದರೆ, ತುರ್ತು ಪರಿಹಾರಕ್ಕೆ 10 ಸಾವಿರ ರೂ.ಗಳನ್ನು ವಿತರಿಸಲಾಗುತ್ತಿದೆ.

      'ಎ' ವರ್ಗದ (ಶೇ.75ರಿಂದ ಶೇ.100) ಪೂರ್ಣ ಪ್ರಮಾಣದ ಮನೆ ಹಾನಿ ಹಾಗೂ 'ಬಿ 2' (ಶೇ.25ರಿಂದ ಶೇ.75) ತೀವ್ರ ಮನೆ ಹಾನಿ (ಕೆಡವಿ ಹೊಸದಾಗಿ ನಿರ್ಮಿಸುವುದು) ಒಟ್ಟು 5 ಲಕ್ಷ ರೂ. ನೀಡುತ್ತಿದ್ದು, ಮೊದಲ ಕಂತಿನಲ್ಲಿ 95,100 ರೂ.ಗಳನ್ನು ಹಾಗೂ ಉಳಿದ ನಾಲ್ಕು ಕಂತುಗಳಲ್ಲಿ 4,04,900 ರೂಗಳನ್ನು ನೀಡಲಾಗುತ್ತದೆ.

      'ಬಿ 1' (ಶೇ.25ರಿಂದ ಶೇ.75) ತೀವ್ರ ಮನೆ ಹಾನಿ (ದುರಸ್ಥಿ)ಗೆ ಒಟ್ಟು 3 ಲಕ್ಷ ರೂ.ಗಳು ಮೊದಲ ಕಂತಿನಲ್ಲಿ 95,100 ರೂ.ಗಳು ಉಳಿದೆರಡು ಕಂತುಗಳಲ್ಲಿ 2,04,900 ರೂ.ಗಳನ್ನು ವಿತರಿಸಲಾಗುತ್ತದೆ. 'ಸಿ' (ಶೇ.15ರಿಂದ ಶೇ.25) ಭಾಗಶಃ ಮನೆಹಾನಿಗೆ ಒಟ್ಟು 50 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+