Get Updates
Get notified of breaking news, exclusive insights, and must-see stories!

ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ 47 ಬಾರಿ ಪ್ರಥಮ: ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ, ಫೆಬ್ರವರಿ 2: ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆಯ 2022ರ ಜನವರಿ ತಿಂಗಳ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಕಳೆದ ಜನವರಿ ತಿಂಗಳಲ್ಲಿಯೂ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲೆಯಲ್ಲಿ ಜನವರಿ ಮಾಹೆಯಲ್ಲಿ ಒಟ್ಟು 68,667 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ, ಈ ಪೈಕಿ 67,722 ಅರ್ಜಿಗಳನ್ನು ಸಕಾಲ ನಿಯಮಗಳನ್ವಯ ನಿಗದಿತ ಕಾಲ‌ಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ ಎಂದರು.

4,071ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತಗೊಂಡಿದ್ದು, 2,217 ಅರ್ಜಿಗಳು ವಿಲೇವಾರಿಯಾಗುವುದು ಬಾಕಿಯಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯುವುದು ತಪ್ಪುತ್ತದೆ. ಜೊತೆಗೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ. ಸಕಾಲ ಯೋಜನೆ ಅನುಷ್ಠಾನದಲ್ಲಿ ಜನವರಿ ಮಾಹೆಯಲ್ಲೂ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿರುವುದು ಸಂತಸ ತಂದಿದೆ ಎಂದರು.

Chikkaballapur District 47 times First Place in Sakala Project Implementation: DC R Latha

ಗಮನಾರ್ಹ ಸಾಧನೆ
ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಯಾವಾಗಲೂ ಮುಂಚೂಣಿಯಲ್ಲಿದ್ದು, ಸದರಿ ಯೋಜನೆ ಆರಂಭವಾದಾಗಿನಿಂದ (2012ರಿಂದ) ಈವರೆಗೆ ಸರ್ಕಾರ ಈ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ 47 ಬಾರಿ (ತಿಂಗಳು)ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲಾಡಳಿತದ ಪಾರದರ್ಶಕಯುಕ್ತ, ತ್ವರಿತ ಆಡಳಿತಕ್ಕೆ ಹಾಗೂ ಸರ್ಕಾರದ ಎಲ್ಲಾ ಯೋಜನೆಗಳ ದಕ್ಷ ಅನುಷ್ಠಾನಕ್ಕೆ ಕೈಗನ್ನಡಿಯಾಗಿದೆ. ಇದು ರಾಜ್ಯಮಟ್ಟಕ್ಕೆ ಜಿಲ್ಲೆಯ ಕೀರ್ತಿ ಪತಾಕೆಯನ್ನು ಎತ್ತರಿಸಿದ ಗಮನಾರ್ಹ ಸಾಧನೆ ಎಂದು ಹರ್ಷ ವ್ಯಕ್ತಪಡಿಸಿದರು.

ಏನಿದು ರ್ಯಾಂಕ್?
ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ರ್ಯಾಂಕಿಂಗ್ ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ. ಕಾಲ ಮಿತಿಯಲ್ಲಿ ಕಡತ ವಿಲೇವಾರಿಯಾಗಬೇಕು ಹಾಗೂ ನಾಗರೀಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರದ ಸೇವೆಗಳು ಲಭ್ಯವಾಗಲಿವೆ ಎಂದರು.

Chikkaballapur District 47 times First Place in Sakala Project Implementation: DC R Latha

ಸಕಾಲ ಸಚಿವರಿಂದ ಪ್ರಶಂಸೆ
ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ಸಕಾಲ ಯೋಜನೆ ಆರಂಭದಿಂದ ಈವರೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಒಟ್ಟು 20,98,381 ಅರ್ಜಿಗಳನ್ನು ಸ್ವೀಕರಿಸಿ 20,76,286 ಅರ್ಜಿಗಳನ್ನು 98.94 ಸರಾಸರಿಯಲ್ಲಿ ವಿಲೇವಾರಿ ಮಾಡಿದೆ. ಈ ಪೈಕಿ 47 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನ ಗಳಿಸಿದೆ. ಒಟ್ಟಾರೆ 47 ಬಾರಿ (ಮಾಹೆ) ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಡಳಿತ ಗಮನಾರ್ಹ ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.

ರಾಜ್ಯಮಟ್ಟದಲ್ಲಿ ಸಕಾಲ ಸಚಿವರಿಂದ ಪ್ರಶಂಸೆ ಪಡೆದಿರುವ ಕೀರ್ತಿಯು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಲ್ಲುತ್ತದೆ. ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ಸೇವೆ ನೀಡುವಲ್ಲಿ ಸಹಕಾರಿಯಾಗಿ ನಿಂತಿದೆ. ಈ ಅಭೂತಪೂರ್ವ ಸಾಧನೆಗೆ ಸಹಕಾರ ನೀಡಿದ ಹಾಗೂ ಅಹರ್ನಿಶಿ ಶ್ರಮಿಸಿದ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳು.

ಮುಂದಿನ ದಿನಗಳಲ್ಲಿಯೂ ತಾವೆಲ್ಲರೂ ತಮ್ಮ ಕಾರ್ಯ ವೈಖರಿಯನ್ನು ಹೀಗೆಯೇ ಯಶಸ್ವಿಯಾಗಿ ನಿರ್ವಹಿಸಿ ಪ್ರಥಮ ಸ್ಥಾನವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದ ಜಿಲ್ಲಾಧಿಕಾರಿ, ಇದೇ ವೇಳೆ ಈ ಸಾಧನೆಗೆ ಕೈಜೋಡಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಸಮಸ್ತ ಜನತೆಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆಯನ್ನು ತಿಳಿಸಿದರು.

Recommended Video

      ಬೀದಿ‌ ನಾಯಿ ಸಾವಿಗೆ ನ್ಯಾಯ ಕೊಡಿಸಲು ಹೋರಾಟಕ್ಕಿಳಿದ ನಟಿ & ಸಂಸದೆ Ramya | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+