ನನಗಾಗಿ ಒಂದು ತಿಂಗಳು ದುಡಿಯಿರಿ, ಐದು ವರ್ಷ ನಿಮ್ಮ ಸೇವೆ ಮಾಡುವೆ: ಕಾರ್ಯಕರ್ತರಿಗೆ ಕೆ. ಸುಧಾಕರ್ ಮನವಿ

ನನಗಾಗಿ ಒಂದು ತಿಂಗಳು ದುಡಿಯಿರಿ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಥಳೀಯ ಮುಖಂಡರಿಗೆ ಸೂಚನೆ ನೀಡಿರುವುದರ ಹಿಂದಿನ ಉದ್ದೇಶವೇನು?

ಚಿಕ್ಕಬಳ್ಳಾಪುರ, ಫೆಬ್ರವರಿ, 09: ಉಚಿತ ನಿವೇಶನ, ಮನೆ, ರಸ್ತೆ, ಆರೋಗ್ಯ, ನೀರಾವರಿ ಯೋಜನೆಗಳ ಅನುಷ್ಠಾನ, ಸ್ತ್ರೀ ಶಕ್ತಿ ಸಂಘಗಳಿಗೆ ಸಹಕಾರ ಸೇರಿದಂತೆ ಎಲ್ಲ ರೀತಿಯ ಅಬಿವೃದ್ಧಿ ಮಾಡಲಾಗಿದೆ. ಸ್ಥಳೀಯ ಮುಖಂಡರು ನನಗಾಗಿ ಒಂದು ತಿಂಗಳು ದುಡಿದರೆ ಮುಂದಿನ ಐದು ವರ್ಷ ನಿಮ್ಮ ಸೇವೆ ಮಾಡುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದರು.

ತಾಲೂಕಿನ ಮಂಡಿಕಲ್ ಹೋಬಳಿ ಮಟ್ಟದ ಕಾರ್ಯಕರ್ತರಿಗಾಗಿ ಚಿಕ್ಕಬಳ್ಳಾಪುರ ನಗರದ ಸಚಿವರ ನಿವಾಸದ ಬಳಿ ಬುಧವಾರ ಆಯೋಜಿಸಿದ್ದ ಸ್ಥಳೀಯ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆ ವೇಳೆ ಬಿಜೆಪಿಯೇ ಇಲ್ಲವೆಂದು ಗೇಲಿ ಮಾಡಿದ್ದರು. ಆ ಸಂದರ್ಭದಲ್ಲಿ ಮಂಡಿಕಲ್ ಹೋಬಳಿಯಿಂದ ಬರೋಬ್ಬರಿ ಏಳೂವರೆ ಸಾವಿರ ಮತಗಳನ್ನು ಹೆಚ್ಚುವರಿಯಾಗಿ ನೀಡಿದ್ದೀರಿ. ಈಗ ಎಲ್ಲ ರೀತಿಯ ಅಭಿವೃದ್ಧಿ ಮಾಡಿ, ನಿಮ್ಮ ಮುಂದೆ ಬಂದಿದ್ದು, ಎಷ್ಟು ಮತ ಅಂತರ ನೀಡಲಿದ್ದೀರಿ ಎಂದು ಸಚಿವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸ್ಥಳೀಯ ಮುಖಂಡರು ಹತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಳ್ಳುವುದಾಗಿ ಭರವಸೆ ನೀಡಿದರು.

ವಿರೋಧ ಪಕ್ಷಗಳು ತಮ್ಮನ್ನು ಗುರಿಯಾಗಿಸಿಕೊಂಡು ಪ್ರಚಾರ ನಡೆಸುತ್ತಿದ್ದು, ಅವರಿಗೆ ಬುದ್ಧಿ ಕಲಿಸುವ ರೀತಿಯಲ್ಲಿ ಪ್ರತಿಯೊಬ್ಬ ಮುಖಂಡರೂ ಶ್ರಮಿಸಬೇಕು. ಪ್ರಸ್ತುತ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ವಿಧಾನಸಭೆ ಚುನಾವಣೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಸೇರಿದಂತೆ ಸಾಲು ಸಾಲು ಚುನಾವಣೆಗಳು ಬರಲಿವೆ. ಸ್ಥಳೀಯ ಮುಖಂಡರು ಇದಕ್ಕೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.

 ಕಾರ್ಯಕರ್ತರಿಗೆ ಕಿವಿಮಾತು

ಕಾರ್ಯಕರ್ತರಿಗೆ ಕಿವಿಮಾತು

ಪ್ರಸ್ತುತ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಸ್ಥಳೀಯ ಮುಖಂಡರ ಹೆಗಲಿಗೆ ನೀಡಲಿದ್ದೇನೆ. ತಮ್ಮನ್ನು ಪ್ರಣಾಳಿಕೆ ಉಸ್ತುವಾರಿಯನ್ನಾಗಿ ಪಕ್ಷ ಜವಾಬ್ದಾರಿ ನೀಡಿದ್ದು, ಇನ್ನು ಮುಂದೆ ತಾವು ಕ್ಷೇತ್ರಕ್ಕೆ ಸೀಮಿತವಾಗದೆ ರಾಜ್ಯದ ಜವಾಬ್ದಾರಿಗಳು ಹೆಚ್ಚಲಿವೆ. ತಾವು ಚಿಕ್ಕಬಳ್ಳಾಪುರಕ್ಕೆ ಮಾತ್ರ ಸೀಮಿತರಾಗಿ ಎನ್ನುವುದಾದರೆ ಅದಕ್ಕೂ ತಾವು ಸಿದ್ಧವಿರುವುದಾಗಿ ಶಾಸಕರು ಘೋಷಿಸುತ್ತಿದ್ದಂತೆ ಮುಖಂಡರು ರಾಜ್ಯ ಮಟ್ಟದಲ್ಲಿ ಬೆಳೆಯುವಂತೆ ಮನವಿ ಮಾಡಿದರು. ಹಾಗಾಗಿ ಈ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ವಹಿಸಿಕೊಳ್ಳಬೇಕು. ಕ್ಷೇತ್ರಕ್ಕೆ ತಾವು ಬರದಿದ್ದರೂ ನೀವೇ ಶ್ರಮ ಪಟ್ಟು ಕೆಲಸ ಮಾಡಬೇಕು. ನೀವು ಕೆಲಸ ಮಾಡುವುದಾದರೆ ತಾವು ರಾಜ್ಯ ಮಟ್ಟದಲ್ಲಿ ಪ್ರಚಾರ ನಡೆಸಲು ಸಹಕಾರಿಯಾಗಲಿದೆ ಎಂದರು.

 ಪ್ರಚಾರ ಮಾಡಲು ಸ್ಥಳೀಯ ಮುಖಂಡರಿಗೆ ಸೂಚನೆ

ಪ್ರಚಾರ ಮಾಡಲು ಸ್ಥಳೀಯ ಮುಖಂಡರಿಗೆ ಸೂಚನೆ

ಪ್ರಸ್ತುತ ಚುನಾವಣೆಯಲ್ಲಿ ತಮಗೆ ಮೂರು ಜಿಲ್ಲೆಗಳ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜವಾಬ್ದಾರಿಯನ್ನು ತಾವು ನೋಡಬೇಕಿದ್ದು, ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಸಮಯದ ತೀವ್ರ ಅಭಾವ ಎದುರಾಗಲಿದೆ. ಆದ್ದರಿಂದ ಸಂಪೂರ್ಣ ಹೊಣೆಯನ್ನು ಸ್ಥಳೀಯ ಮುಖಂಡರೇ ಹೊರಬೇಕಿದೆ. ಸ್ಥಳೀಯ ಮುಖಂಡರಲ್ಲಿ ಆಂತರಿಕ ಭಿನ್ನಮತಗಳಿದ್ದರೆ ಸರಿಪಡಿಸುವ ಕೆಲಸವಾಗಬೇಕು. ಮುನಿಸಿಕೊಂಡಿರುವ ಸ್ಥಳೀಯ ಮುಖಂಡರ ಮನವೊಲಿಸುವ ಕೆಲಸವಾಗಬೇಕು. ತಾವೇ ಖುದ್ದಾಗಿ ಅಂತಹ ನಾಯಕರನ್ನು ಮಾತನಾಡಿಸಲು ಸಚಿವರು ಸೂಚಿಸಿದರು.

 ಮನೆಗಳ ಮೇಲೆ BJP ಬಾವುಟ ಕಟ್ಟಿಸಬೇಕು

ಮನೆಗಳ ಮೇಲೆ BJP ಬಾವುಟ ಕಟ್ಟಿಸಬೇಕು

ಬೂತ್ ಅಭಿಮಾಯನದ ಮೂಲಕ ಪ್ರತಿ ಮುಖಂಡರೂ ಒಂದು ಬೂತಿನ ನೇತೃತ್ವವನ್ನು ವಹಿಸಬೇಕು. ಬೂತಿನಿಂದ ರಾಜ್ಯ, ದೇಶ ಗೆಲ್ಲುವ ಕೆಲಸ ಆಗಬೇಕು. ಪ್ರತಿ ಮನೆಯ ಮೇಲೆ ಬಿಜೆಪಿ ಬಾವುಟ, ಸ್ಟಿಕ್ಕರ್ ಹಾಕಿಸುವ ಕೆಲಸ ಮಾಡಬೇಕು. ಮೊಬೈಲ್ ಮೂಲಕ ಸದಸ್ಯತ್ವ ನೋಂದಣಿ ನಡೆಯುತ್ತಿದ್ದು, ಪ್ರತಿ ಬೂತಿನಲ್ಲಿ ಸದಸ್ಯತ್ವ ಮಾಡಿಸುವ ಕೆಲಸ ಆಗಬೇಕು. ಕ್ಷೇತ್ರ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಸರ್ಕಾರಗಳ ಸಾಧನೆಗಳ ಬಗ್ಗೆ ಕರಪತ್ರಗಳನ್ನು ಪ್ರತಿ ಮನೆಗೆ ವಿತರಿಸುವ ಕೆಲಸವಾಗಬೇಕು. ಜವಾಬ್ದಾರಿ, ಪಕ್ಷದ ಬಗ್ಗೆ ನಿಷ್ಠೆ ಇರುವ ವ್ಯಕ್ತಿಗಳನ್ನು ಪೇಜ್ ಪ್ರಮುಖ್ ಆಗಿ ಆಯ್ಕೆ ಮಾಡಿ, ಪ್ರತಿ ಮತದಾರನ ಮನವೊಲಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.

 ಶೇ. 5 ರಷ್ಟು ಮಹಿಳೆಯರು ಸ್ಪರ್ಧೆಯಲ್ಲಿ ಭಾಗಿ

ಶೇ. 5 ರಷ್ಟು ಮಹಿಳೆಯರು ಸ್ಪರ್ಧೆಯಲ್ಲಿ ಭಾಗಿ

ಇತ್ತೀಚಿಗೆ ನಡೆದ ಚಿಕ್ಕಬಳ್ಳಾಪುರ ಉತ್ಸವದಲ್ಲಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಕ್ಷೇತ್ರದ ಶೇಕಡಾ 95 ರಷ್ಟು ಮಹಿಳೆಯರು ಭಾಗವಹಿಸಿದ್ದಾರೆ. ಉಳಿದ ಶೇಕಡಾ 5 ರಷ್ಟು ಮಹಿಳೆಯರು ಮಾತ್ರ ಸ್ಪರ್ಧೆಯಿಂದ ದೂರ ಇದ್ದು, ಕ್ಷೇತ್ರದ ಪ್ರತಿ ಮನೆಗೂ ಸಮಾಧಾನಕರ ಬಹುಮಾನವಾಗಿ ಗ್ಯಾಸ್ ಸ್ಟೌವ್ ವಿತರಿಸಲು ಸಚಿವರು ಸೂಚಿಸಿದರು. ಹಾಗೆಯೇ ಸ್ಥಳೀಯ ಮುಖಂಡರು ಪ್ರತಿ ಮನೆಗೆ ತೆರಳಿ ಈ ಬಹುಮಾನ ವಿತರಿಸುವ ಜವಾಬ್ದಾರಿಯನ್ನು ವಹಿಸಬೇಕು. ಆ ಮೂಲಕ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಯಕತ್ವವನ್ನು ಸಿದ್ಧಪಡಿಸಿಕೊಳ್ಳಬೇಕು. ಸ್ತ್ರೀ ಶಕ್ತಿ ಸಂಘಗಳಲ್ಲಿ ಸಕ್ರಿಯವಾಗಿರುವ ಮಹಿಳೆಯರೂ ಇದರಲ್ಲಿ ಭಾಗವಹಿಸಬೇಕು. ಪ್ರತಿ ಗ್ರಾಮ ಪಂಚಾಯತ್‌ನಿಂದ ಸ್ಥಳೀಯ ಮುಖಂಡರು ಪ್ರತಿ ವಾರಕ್ಕೊಮ್ಮೆ ಪೇಜ್ ಪ್ರಮುಖ್ ರ ಸಭೆ ನಡೆಸಬೇಕು ಎಂದು ಹೇಳಿದರು.

 ದಂಪತಿಗಳ ಆಹ್ವಾನಕ್ಕೆ ಸೂಚನೆ

ದಂಪತಿಗಳ ಆಹ್ವಾನಕ್ಕೆ ಸೂಚನೆ

ಮಾರ್ಚ್‌ 5ರಂದು ಭಾನುವಾರ ಸಂಜೆ ಕ್ಷೇತ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ತಿರುಪತಿಯ ಮೆರವಣಿಗೆ ದೇವರನ್ನು ಅಲ್ಲಿನ ಅರ್ಚಕರೇ ತಂದು ಶ್ರೀನಿವಾಸ ಕಲ್ಯಾಣ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರತಿ ಮನೆಯಿಂದ ದಂಪತಿಗಳು ಆಗಮಿಸುವ ವ್ಯವಸ್ಥೆ ಮಾಡಬೇಕು. ವಸ್ತ್ರ ಕೊಟ್ಟು ಆಹ್ವಾನ ನೀಡುವ ಕೆಲಸವಾಗಬೇಕು. ಅದೇ ರೀತಿಯಲ್ಲಿ ಫೆಬ್ರವರಿ 18ರಂದು ಶಿವೋತ್ಸವ ನಡೆಯಲಿದ್ದು, ಎಲ್ಲರೂ ಆಗಮಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬೊಮ್ಮಗಾನಹಳ್ಳಿ ಪೃಥ್ವಿರಾಜ್ ರೆಡ್ಡಿ, ಗ್ರಾಮ ಪಂಚಾಯತ್‌ ಸದಸ್ಯ ಹಿರೇನಾಗವಲ್ಲಿ ಮೂರ್ತಿ, ಶ್ರೀನಿವಾಸ್, ಮುದ್ದಲಹಳ್ಳಿ ಆಚಾರಿ, ಮುಖಂಡರಾದ ರಾಮಪಟ್ಟಣ ಅರವಿಂದ್, ಮಂಡಿಕಲ್ ಗ್ರಾಮ ಪಂಚಾಯತ್‌ ಅಧ್ಯಕ್ಷ ಷಂಶಾಧ್ ಭಾನು ಫಯಾಜ್, ಉಪಾಧ್ಯಕ್ಷ ರಾಮಕೃಷ್ಣ, ಗ್ರಾಮ ಪಂಚಾಯತ್‌ ಸದಸ್ಯರಾದ ಸುಬ್ಬರಾಯಪ್ಪ, ಪೈಯೂರು ಅಶ್ವಥ್ಥಪ್ಪ, ಅಂಜಿನಪ್ಪ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್, ಮುಖಂಡರಾದ ಪಯಾಜ್ ಅಹಮದ್, ಶೇಖರಪ್ಪ, ಎಂ.ಆರ್.ಸುಹಾಸ್, ವ್ಯಾಪ್ತಿಯ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+