Get Updates
Get notified of breaking news, exclusive insights, and must-see stories!

ಬಜರಂಗದಳ ನಿಷೇಧ: ಹೀಗಾಗಿಯೇ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಕಣ್ಮರೆ ಎಂದ ಸುಧಾಕರ್‌

ಚಿಕ್ಕಬಳ್ಳಾಪುರ, ಮೇ 04: ಯಾವುದೇ ಸಂಘಟನೆಯಾಗಲೀ ದೇಶದ್ರೋಹಿ ಕೆಲಸ ಮಾಡಿದರೆ ನಿಷೇಧ ಮಾಡಬೇಕು, ದೇಶ ಪ್ರೇಮಿ ಸಂಘಟನೆಗಳನ್ನು ಯಾಕೆ ನಿಷೇಧ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಜರಂಗದಳ ನಿಷೇಧ ಎನ್ನುವ ಕಾಂಗ್ರೆಸ್‌ ಭರವಸೆ ವಿರುದ್ಧ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಚಾರದಲ್ಲಿ ಮಾತನಾಡಿದ ಅವರು, ಪಿಎಫ್ಐ, ಭಜರಂಗದಳಕ್ಕೆ ಹೋಲಿಕೆ ಮಾಡಲು ಸಾಧ್ಯವೇ, ದೇಶ ದ್ರೋಹ ಮಾಡುವ ಸಂಘ ಸಂಸ್ಥೆಗಳನ್ನು ನ್ಯಾಯಾಲಯಗಳೇ ನಿಷೇಧ ಮಾಡಿವೆ. ಭಜರಂಗದಳದ ಮೇಲೆ ಅಂತಹ ಯಾವುದೇ ನಿದರ್ಶನಗಳಿದ್ದರೆ ಹೇಳಿ, ಇಂತಹ ಘಟನೆಗಳಿಂದಲೇ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಕಣ್ಮರೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

Dr. K Sudhakar Ourtage Against Congress Promise To Ban Bajrang Dal

ರಾಜ್ಯದಲ್ಲಿ ಬಿಜೆಪಿ ವರ್ಚಸ್ಸು ಕಂಡು ಹತಾಶರಾಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು, ಬಾಲಿಷ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೆ ಆಡಳಿತ ಹಿಡಿಯಲಿದೆ. ಎಲ್ಲ ವಿಭಾಗಗಳಲ್ಲಿಯೂ ಬಿಜೆಪಿ ಗಾಳಿ ಬೀಸುತ್ತಿದೆ, ಪ್ರಧಾನಿ ಬಂದ ಕಡೆ ಶೇಖಡಾ ವಾರು ಮತಗಳು ಹೆಚ್ಚುತ್ತಿದೆ, ಮೋದಿ ಅಂದರೆ ವಿಶ್ವಾಸ, ಹಾಗಾಗಿಯೇ ಬಿಜೆಪಿಯೇ ಭರವಸೆ, ಡಬಲ್ ಎಂಜಿನ್ ಸರ್ಕಾರವೇ ರಾಜ್ಯಕ್ಕೆ ಭರವಸೆ ಎಂದರು.

ಪ್ರಸ್ತುತ ಚುನಾವಣೆಗಳು ಮುಗಿದ ಕೂಡಲೇ ಜಿಲ್ಲಾ ಕೇಂದ್ರಕ್ಕೆ ಸಮೀಪದಲ್ಲಿರುವ ಮಂಚನಬಲೆ ಗ್ರಾಮವನ್ನು ನಗರಸಭೆಗೆ ಸೇರಿಸುವ ಜೊತೆಗೆ ಕೋಟ್ಯಂತರ ರುಪಾಯಿ ಅನುದಾನ ತಂದು ಅಬಿವೃದ್ಧಿ ಮಾಡಲಾಗುವುದು. ಈಗಾಗಲೇ 3 ಕೋಟಿ ವೆಚ್ಚದಲ್ಲಿ ಈ ಗ್ರಾಮದ ರಸ್ತೆ ಅಬಿವೃದ್ದಿ ಮಾಡಲಾಗಿದೆ. ಗುಂಡ್ಲಗುರ್ಕಿ, ಸಬ್ಬೇನಹಲ್ಳಿ, ಕಾಮಶೆಟ್ಟಿಹಳ್ಳಿಗಳಲ್ಲಿ ನಮ್ಮ ಅಭಿವೃದ್ಧಿಯ ಹೆಜ್ಜೆ ಗುರುತು ಬಿಡಲಾಗಿದೆ. ಈ ಸೇವೆ ಮುಂದುವರಿಯಲು ನೀವು ಮತ್ತೆ ಬೆಂಬಲಿಸಬೇಕು, ಈ ಬಾರಿ ಬಿಜೆಪಿಗೆ ಮತ ನೀಡಿದರೆ ಪ್ರತಿ ಮನೆಗೆ ಉದ್ಯೋಗ ನೀಡುವ ಕೆಲಸ ಮಾಡುವುದಾಗಿ ಅವರು ಹೇಳಿದರು.

Dr. K Sudhakar Ourtage Against Congress Promise To Ban Bajrang Dal

ಆಯುಷ್ಮಾನ್ ಭಾರತ್ ಯೋಜನೆ 10 ಲಕ್ಷಕ್ಕೆ ಏರಿಕೆ

ಮಂಚನಬಲೆ ಗ್ರಾಮಕ್ಕೆ ಸಮೀಪದಲ್ಲಿರುವ ದಿಬ್ಬೂರಿನಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗಿದೆ. ಕ್ಷೇತ್ರದ ಪ್ರತಿಯೊಬ್ಬರ ಆರೋಗ್ಯವೂ ಮುಖ್ಯ ಎಂದು ಭಾವಿಸಿರುವ ತಾವು, ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈದ್ಯಕೀಯ ಕಾಲೇಜು ಸಿದ್ಧವಾಗಿದೆ. ಮೂರೇ ವರ್ಷದಲ್ಲಿ ವೈದ್ಯಕೀಯ ಕಾಲೇಜು ತಂದು ಉದ್ಘಾಟನೆ. 800 ಕೋಟಿ ವೆಚ್ಚದ ವೈದ್ಯಕೀಯ ಕಾಲೇಜು ಸಿದ್ಧವಾಗಿದ್ದು, ಮುಂದಿನ ತಿಂಗಳಿನಿಂದ ಸೇವೆಗೆ ಸಮರ್ಪಣೆಯಾಗಲಿದೆ ಎಂದರು.

ಈ ಹಿಂದೆ 800 ಕೋಟಿ ವೆಚ್ಚದ ಯೋಜನೆಯನ್ನು ಈ ಕ್ಷೇತ್ರಕ್ಕೆ ತಂದ ಉದಾಹರಣೆಯೇ ಇಲ್ಲ. ಎಚ್ಎನ್ ವ್ಯಾಲಿ ಯೋಜನೆ 1,400 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಿದ ಪರಿಣಾಮ ರೈತರಿಗೆ ತುಂಬಾ ಅನುಕೂಲವಾಗಿ, ಕೊಳವೆ ಬಾವಿಗಳು, ತೆರೆದ ಬಾವಿಗಳಲ್ಲಿ ನೀರು ಬರಲು ಕಾರಣವಾಗಿದೆ. ಆಯುಷ್ಮಾನ್ ಭಾರತ್ ಯೋಜನೆ 5 ಲಕ್ಷದಿಂದ 10 ಲಕ್ಷಕ್ಕೆ ಏರಿಸಲಾಗಿದೆ. ಚುನಾವಣೆ ನಂತರ ಬಾಕಿ ಉಳಿದಿರುವ ನಿವೇಶನಗಳನ್ನು ಬಡವರಿಗೆ ಹಂಚಲಾಗುವುದು. ಬಡವರಿಗೂ ಶುದ್ಧ ಕುಡಿಯುವ ನೀರು ಒದಗಿಸಲು ಪ್ರತಿ ಗ್ರಾಮದಲ್ಲಿಯೂ ಶುದ್ಧನೀರಿನ ಘಟಕ ಮಾಡಲಾಗಿದೆ. ಜಾತಿ, ಧರ್ಮ ನೋಡದೆ, ಭ್ರಷ್ಟಾಚಾರ ಇಲ್ಲದೆ ಪಾರದರ್ಶಕತೆಯಿಂದ ನಿವೇಶನ ಹಂಚಲಾಗಿದೆ, ಈ ನಿವೇಶನಗಳಲ್ಲಿ ಮನೆ ನಿರ್ಮಿಸಲು 5 ಲಕ್ಷ ಅನುದಾನ ನೀಡಲಾಗುವುದು ಎಂದು ಹೇಳಿದರು.

ಮೋದಿ ಆಗಮನದಿಂದ ಬಿಜೆಪಿ ಮತ ಹೆಚ್ಚಳ

ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದಿಂದ ರಾಜ್ಯದಲ್ಲಿ ಬಿಜೆಪಿ ಉತ್ಸಾಹ ಹೆಚ್ಚಾಗಿದೆ. ಬಿಜೆಪಿ ಪರ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂರಕ್ಕೆ ನೂರು ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಬಿಜೆಪಿ ಆಡಳಿತ ಹಿಡಿಯುವುದು ದೃಢ. ಪ್ರಧಾನಿ ಆಗಮನದಿಂದ ರಾಜ್ಯದಲ್ಲಿ ಶೇ.5ಕ್ಕೂ ಹೆಚ್ಚು ಶೇಖಡಾವಾರು ಮತ ಹೆಚ್ಚಳವಾಗಲಿದೆ, ಕೇವಲ ಗ್ರಾಪಂ ನಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಕಾರ್ಯಕರ್ತರ ಹುರುಪು ನೋಡಿದರೆ ರಾಜ್ಯದಲ್ಲಿ ದಾಖಲೆ ಮಟ್ಟದ ಸ್ಥಾನ ಗಳಿಸುವುದು ಗ್ಯಾರೆಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದ ಜನತೆ ನಿಮ್ಮನ್ನು ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಧಾಕರ್‌, ರಾಜ್ಯದ ಎಲ್ಲ ಶಾಸಕರೂ ಅವರವರ ಕ್ಷೇತ್ರದ ಮುಖ್ಯಮಂತ್ರಿಯೇ ಆಗಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ, ವರಿಷ್ಠರು ಉತ್ತಮ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಮಾತ್ರ ನಮಗೆ ಮುಖ್ಯ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+