ಚಿಕ್ಕಬಳ್ಳಾಪುರ ತಾಲೂಕಲ್ಲಿ ಗುರುವಾರವೂ ಭೂಕಂಪನದ ಅನುಭವ!
ಚಿಕ್ಕಬಳ್ಳಾಪುರ, ಡಿಸೆಂಬರ್ 23: ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಗುರುವಾರವೂ ಭೂಕಂಪನದ ಅನುಭವವಾಗಿದೆ. ಬುಧವಾರ ಮುಂಜಾನೆ ಭೂಮಿ ನಡುಗಿತ್ತು. ಬಂಡಹಳ್ಳಿ, ಆರೂರು, ದೊಡ್ಡಹಳ್ಳಿ, ಭೋಗಪರ್ತಿ ಮುಂತಾದ ಕಡೆ ಭೂಮಿ ಕಂಪಿಸಿತ್ತು. ಗುರುವಾರದಂದು ರೆಡ್ಡಿ ಗೊಲ್ಲರಹಳ್ಳಿ ಪೆರೇಸಂದ್ರದಲ್ಲಿ ಕಂಪನದ ಅನುಭವವಾಗಿದೆ. ಲಘು ಕಂಪನದ ಅನುಭವವಾಗಿದ್ದು ರಾಷ್ಟ್ರೀಯ ಭೂಕಂಪ ಕೇಂದ್ರ(NCS) ಇನ್ನೂ ಅಧಿಕೃತ ಪ್ರಕಟಣೆ ನೀಡಿದೆ.
ಗುರುವಾರದಂದು ಪೆರೇಸಂದ್ರದಲ್ಲಿ ಮಧ್ಯಾಹ್ನ 2.16ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಕಂಪನ ದಾಖಲಾಗಿದೆ ಎಂದು ಮಾಹಿತಿ NCS ನೀಡಿದೆ.
ಬುಧವಾರ ಬೆಳಗ್ಗೆ 7.10ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 2.9 ಮತ್ತು 3.0 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿ ಕಂಪಿಸಿದ ಅನುಭವ ಆಗುತ್ತಲೇ ಜನರು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದರು.
ಭೂಮಿ ಕಂಪಿಸಿದ ಅನುಭವವಾಯಿತು. ಪಾತ್ರೆಗಳು ಅಲುಗಾಡಿದವು ಎಂದು ರೆಡ್ಡಿ ಗೊಲ್ಲಹಳ್ಳಿ, ಪೆರೇಸಂದ್ರ ಗ್ರಾಮಸ್ಥರು ಹೇಳಿದ್ದಾರೆ. ಬಂಡಹಳ್ಳಿಯಲ್ಲಿ ಕೆಲವು ಮನೆಗಳಲ್ಲಿ ಇಂದು ಬಿರುಕು ಕಾಣಿಸಿಕೊಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(KSNMDC) ನಿನ್ನೆಯೇ ಟ್ವೀಟ್ ಮಾಡಿ, ಭೂಕಂಪದ ನಂತರ ಪರಿಣಾಮದ ಬಗ್ಗೆ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
Two Earthquakes of Magnitude 2.9 & 3.0 in Chikkaballapur Dist. were recorded by KSNDMC Network on 22 Dec 2021.
— KSNDMC (@KarnatakaSNDMC) December 22, 2021
Community need not Panic as the intensity observed is low and not destructive. pic.twitter.com/qc8x2xZi5V
ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಆದನ್ನಗಾರಹಳ್ಳಿ, ರೆಡ್ಡಿಗೊಲ್ಲವಾರಹಳ್ಳಿ, ಪರೇಸಂದ್ರ ಗ್ರಾಮದ ಸುತ್ತ-ಮುತ್ತ ಸ್ಫೋಟದ ಸದ್ದು ಸಹ ಕೇಳಿ ಬಂದಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಪೈಕಿ ರೆಡ್ಡಿಗೊಲ್ಲವಾರಹಳ್ಳಿ, ಪರೇಸಂದ್ರದಲ್ಲಿ ಇಂದು ಮತ್ತೊಮ್ಮೆ ಕಂಪನದ ಅನುಭವಾಗಿದೆ.
ಮಂಡಿಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2.9 ಮತ್ತು ಭೋಗಪರ್ತಿ ಗ್ರಾಮದ ಬಳಿ 3.0 ತೀವ್ರತೆಯ ಸಣ್ಣ ಪ್ರಮಾಣದ ಭೂಕಂಪವಾಗಿತ್ತು. ಆದರೆ, ಈ ಗ್ರಾಮವನ್ನೇ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ. ಆದರೆ, "ಜನರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ" ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್. ಹೇಳಿದ್ದಾರೆ.

ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್ಸಿಎಸ್) ಈ ಕುರಿತು ಟ್ವೀಟ್ ಮಾಡಿ, 3.1 ತೀವ್ರತೆಯ ಭೂಕಂಪನ ಡಿಸೆಂಬರ್ 22ರಂದು ಬೆಳಗ್ಗೆ 7.09ರ ವೇಳೆಗೆ ಸಂಭವಿಸಿದೆ. ಬೆಂಗಳೂರಿನ ಉತ್ತರ ಈಶಾನ್ಯ ಭಾಗದ 70 ಕಿ. ಮೀ. ದೂರದಲ್ಲಿ 11 ಕಿ. ಮೀ. ಆಳದಲ್ಲಿ ಭೂಕಂಪ ಉಂಟಾಗಿದೆ ಎಂದು ಹೇಳಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications