5, 8ನೇ ತರಗತಿಗಳ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ, ಚಿಕ್ಕಬಳ್ಳಾಪುರ ಜಿಲ್ಲೆಯ ವಿದ್ಯಾರ್ಥಿಗಳ ವಿವರ ಇಲ್ಲಿದೆ
ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಣೆಗಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಪ್ರಕಾರ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಚಿಕ್ಕಬಳ್ಳಾಪುರ, ಮಾರ್ಚ್, 03: ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಣೆಗಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಪ್ರಕಾರ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.
2022-23ನೇ ಸಾಲಿನ ಶೈಕ್ಷಣಿ ವರ್ಷ ಪ್ರಾರಂಭದಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸುವ ಬಗ್ಗೆ ಇಲಾಖೆಯು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾಹಿತಿ ನೀಡಿರಲಿಲ್ಲ. ಇದೀಗ ಈ ನಿಯಮವನ್ನು ದಿಢೀರ್ ಜಾರಿಗೆ ತಂದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ.
ಆದ್ದರಿಂದ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡಲು ಶಿಕ್ಷಕರು ಮುಂದಾಗಿದ್ದಾರೆ. ವಿದ್ಯಾರ್ಥಿಗಳ ಗೊಂದಲ ನಿವಾರಣೆ ಮಾಡುವುದು ಇದೀಗ ಶಿಕ್ಷಕರಿಗೆ ಸವಾಲಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ 5ನೇ ತರಗತಿ ಪರೀಕ್ಷೆ ಬರೆಯಲು 16,078 ಮಕ್ಕಳು ನೋಂದಾಯಿಸಿದ್ದಾರೆ. ಜೊತೆಗೆ 387 ಪರೀಕ್ಷಾ ಕೇಂದ್ರಗಳನ್ನು ಸಹ ತೆರೆಯಲಾಗುತ್ತಿದೆ.

ಎಷ್ಟು ಅಂಕದ ಪ್ರಶ್ನೆಗಳು ಇರುತ್ತವೆ?
ಇನ್ನು 8ನೇ ತರಗತಿ ಪರೀಕ್ಷೆ ಬರೆಯಲು 16,846 ವಿದ್ಯಾರ್ಥಿಗಳು ನೋಂದಾಯಿಸಿದ್ದು, 218 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಜಿಲ್ಲಾ ಶಿಕ್ಷಣ ವಹಿಸಿಕೊಂಡಿದ್ದು, ಎಲ್ಲಾ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಶ್ನೆ ಪತ್ರಿಕೆಯು ತಲಾ 40 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಂದು ಅಂಕದ 20 ಬಹುಆಯ್ಕೆಯ ಪ್ರಶ್ನೆಗಳು, 20 ಅಂಕಗಳಿಗೆ ವಿವರಣಾತ್ಮಕ ಉತ್ತರ ಬರೆಯುವ ಪ್ರಶ್ನೆಗಳಿರುತ್ತವೆ.
ಪ್ರಶ್ನೆಗಳು ಹೇಗೆ ಇರಲಿವೆ?
ಅವುಗಳಲ್ಲಿ ಎರಡು ಅಂಕದ 5 ಪ್ರಶ್ನೆಗಳು, ಮೂರು ಅಂಕದ 2 ಪ್ರಶ್ನೆಗಳು, ನಾಲ್ಕು ಅಂಕದ 1 ಪ್ರಶ್ನೆಯನ್ನು ಪತ್ರಿಕೆ ಒಳಗೊಂಡಿರುತ್ತದೆ. ಉತ್ತರಿಸಲು ಎರಡು ಗಂಟೆ ಸಮಯವನ್ನು ನಿಗದಿ ಮಾಡಲಾಗಿದೆ. ಅದಕ್ಕೂ ಮೊದಲು ಶಾಲೆಯಲ್ಲಿ 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಸರಬರಾಜು ಮಾಡಲಿದೆ.

8ನೇ ತರಗತಿಯ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡಲು ಜಿಲ್ಲೆಯ ಒಂದು ತಾಲೂಕಿನಿಂದ ಮತ್ತೊಂದು ತಾಲೂಕಿಗೆ ಹಾಗೂ 5ನೇ ತರಗತಿಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲು ಒಂದು ಕ್ಲಸ್ಟರ್ನಿಂದ ಮತ್ತೊಂದು ಕ್ಲಸ್ಟರ್ಗೆ ಕಳುಹಿಸಿಕೊಡಲಾಗುವುದು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಕಲಿಕಾ ಸುಧಾರಣೆ, ಶಿಕ್ಷಕರ ಬೋಧನಾ ಕ್ರಮದ ಬಗ್ಗೆ ಮಾಹಿತಿ ದೊರೆಯುತಂತಾಗುತ್ತದೆ
ಮಕ್ಕಳ ಸಾಮರ್ಥ್ಯ ಅರಿಯುವ ಪರೀಕ್ಷೆ
ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದೇವೆ. ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಮಕ್ಕಳ ಸಾಮರ್ಥ್ಯ ಅರಿಯುವ ಪರೀಕ್ಷೆ ಇದಾಗಿದ್ದು, ಮಾರ್ಗದರ್ಶನವನ್ನು ನೀಡಿದ್ದೇವೆ. 8ನೇ ತರಗತಿ ಪರೀಕ್ಷೆ ಮಾರ್ಚ್ 13ರಿಂದ 18ರವರೆಗೆ ಹಾಗೂ 5ನೇ ತರಗತಿ ಪರೀಕ್ಷೆ ಮಾರ್ಚ್ 15ರಿಂದ 18ರವರೆಗೆ ನಡೆಯಲಿದೆ. ಪರೀಕ್ಷೆಯು ಪ್ರತಿದಿನ ಮಧ್ಯಾಹ್ನ 2:30ರಿಂದ 4.30ರವರೆಗೆ ನಡೆಯಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಿದೆ. ಮಾದರಿ ಪ್ರಶ್ನೆಗಳು ಮಂಡಳಿಯ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯರಾಮರೆಡ್ಡಿ ತಿಳಿಸಿದ್ದಾರೆ.
ಪರೀಕ್ಷೆಯ ವೇಳಾಪಟ್ಟಿಯ ಮಾಹಿತಿ
ಎಂಟನೇ ತರಗತಿಗೆ ಮಾರರ್ಚ್ 13ರಂದು ಪ್ರಥಮ ಭಾಷೆ, ಮಾರ್ಚ್ 14ರಂದು ದ್ವಿತೀಯ ಭಾಷೆ, ಮಾರ್ಚ್ 15ರಂದು ತೃತೀಯ ಭಾಷಾ ವಿಷಯಗಳು, ಮಾರ್ಚ್ 16ರಂದು ಗಣಿತ, ಮಾರ್ಚ್ 17ರಂದು ವಿಜ್ಞಾನ ಹಾಗೂ ಮಾರ್ಚ್ 18ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಇನ್ನು ಐದನೇ ತರಗತಿಗೆ ಮಾರ್ಚ್ 15ರಂದು ಪ್ರಥಮ ಭಾಷೆ, ಮಾರ್ಚ್ 16ರಂದು ಗಣಿತ, ಮಾರ್ಚ್ 17ರಂದು ಪರಿಸರ ಅಧ್ಯಯನ, ಮಾರ್ಚ್ 18ರಂದು ದ್ವಿತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.
ಡಿಡಿಪಿಐ ಜಯರಾಮರೆಡ್ಡಿ ಹೇಳಿದ್ದೇನು?
ಮೌಲ್ಯಾಂಕನ ಪರೀಕ್ಷೆಯ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ. ಮಕ್ಕಳ ಕಲಿಕಾ ಸುಧಾರಣೆಗೆ ಪೂರಕವಾಗಿ ಪರೀಕ್ಷೆ ನಡೆಸಲಾಗುತ್ತಿದ್ದು, ಮುಂದಿನ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನವಾಗಲಿದೆ ಎಂದು ಚಿಕ್ಕಬಳ್ಳಾಪುರ ಡಿಡಿಪಿಐ ಜಯರಾಮರೆಡ್ಡಿ ತಿಳಿಸಿದ್ದಾರೆ. ಹಾಗೆಯೇ
ಪಬ್ಲಿಕ್ ಪರೀಕ್ಷೆ ನಡೆಸುತ್ತಿರುವುದರಿಂದ ಮುಂದಿನ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶಗಳಿಸಲು ಸಹಕಾರಿಯಾಗುತ್ತದೆ. ಇದರಿಂದಾಗಿ ನಮ್ಮ ಶೈಕ್ಷಣಿಕ ಸಾಧನೆ ಮಾಡಬಹುದು ಎಂದು 8ನೇ ತರಗತಿ ವಿದ್ಯಾರ್ಥಿನಿ ಮೌನಿಕ ಹೇಳಿದರು.
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಿವರ
ತಾಲೂಕು 5ನೇ ತರಗತಿ 8ನೇ ತರಗತಿ
ಬಾಗೇಪಲ್ಲಿ 2,466 2,478
ಗುಡಿಬಂಡೆ 620 729
ಚಿಕ್ಕಬಳ್ಳಾಪುರ 2,763 3,017
ಗೌರಿಬಿದನೂರು 3,361 3,813
ಶಿಡ್ಲಘಟ್ಟ 2,960 2,899
ಚಿAತಾಮಣಿ 3,908 3,910
ಒಟ್ಟು 16,078 16,846
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications