ಯಾರದ್ದೋ ಸ್ವತ್ತಿಗೆ ಇನ್ಯಾರೋ ಮಾಲೀಕರು: ನಕಲಿ ಖಾತೆ ಸೃಷ್ಟಿಸಿದ ಬಿಲ್ ಕಲೆಕ್ಟರ್ ಮಹಾಶಯ!
ಚಿಕ್ಕಬಳ್ಳಾಪುರ ನವೆಂಬರ್ 29: ಪಂಚಾಯಿತಿ ಬಿಲ್ ಕಲೆಕ್ಟರ್ನೊಬ್ಬ ಯಾರದ್ದೋ ಸ್ವತ್ತಿಗೆ ಇನ್ಯಾರನ್ನೋ ಮಾಲೀಕರನ್ನಾಗಿ ಮಾಡಿ ನಕಲಿ ಖಾತೆ ಸೃಷ್ಟಿಸಿದ ಘಟನೆ ಚಿಕ್ಕಬಳ್ಳಾಪುರ ಅವಲಗುರ್ಕಿ ಗ್ರಾಮದಲ್ಲಿ ನಡೆದಿದೆ.
ಬಿಲ್ ಕಲೆಕ್ಟರ್ ಪ್ರಕಾಶ್ ಎಂಬಾತ ತನ್ನ ಪತ್ನಿ ಹೆಸರಿಗೆ ದಾಖಲೆ ಸೃಷ್ಟಿಸಿ ಸೈಟ್ ಮಾರಾಟ ಮಾಡಿದ್ದಾರೆ. ಹೀಗಾಗಿ ಗ್ರಾ.ಪಂ ಅಧ್ಯಕ್ಷೆ ನಾಗಮಣಿ ಅನುಮತಿ ಮೇರೆಗೆ ಪಿಡಿಒ ಅರುಣ ಗೋಪಿ ಆದೇಶ ಹೊರಡಿಸಿದ್ದು, ಬಾರ್ಲಹಳ್ಳಿ ಗ್ರಾಮವನ್ನು ನಿವೇಶನಗಳನ್ನಾಗಿ ವಿಂಗಡಿಸಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಅವಲಗುರ್ಕಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಕಾಶ್ ಅಮಾನತು ಮಾಡಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾ.ಪಂ ವ್ಯಾಪ್ತಿಯ ಬಾರ್ಲಹಳ್ಳಿಯಲ್ಲಿ ನಕಲಿ ಖಾತೆ ಸೃಷ್ಟಿಸಿ ನಿವೇಶನಗಳ ಮಾರಾಟ ಮಾಡಲಾಗಿದೆ. ಈ ಕೇಸ್ಗೆ ಸಂಬಂಧಿಸಿ ಮಾರಾಟ ಮಾಡಿದ್ದ 55 ನಿವೇಶನಗಳ ಖಾತೆ ರದ್ದು ಮಾಡಿ ತಾ.ಪಂ ಇಒ ಜಿ.ಆರ್.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.
ನಕಲಿ ಖಾತೆ ರದ್ದು :-
ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿಕೊಂಡು ಜನವಸತಿ ಇಲ್ಲದ ಬಾರ್ಲಹಳ್ಳಿ ಗ್ರಾಮವನ್ನೆ ಮಾರಾಟ ಮಾಡಿದ್ದರು. ಗ್ರಾಮದ ಸ್ವತ್ತಿಗೆ ಅಕ್ರಮವಾಗಿ ಖಾತೆಗಳನ್ನು ಸೃಷ್ಟಿಸಿ ಮಾರಾಟ ಮಾಡಿದ್ದರು. ಸದ್ಯ 55 ನಿವೇಶನಗಳ ಖಾತೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.
ಅವಲಗುರ್ಕಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಕಾಶ್ ಅಮಾನತು
ಇನ್ನು ಬಾರ್ಲಹಳ್ಳಿ ಗ್ರಾಮವನ್ನು ನಿವೇಶನಗಳನ್ನಾಗಿ ವಿಂಗಡಿಸಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಗ್ರಾಮ ಪಂಚಾಯ್ತಿ PDO ಎಂ.ಸಿ. ವೆಂಕಟೇಶ ಅವರನ್ನು ಅಮಾನತು ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ CEO ಪ್ರಕಾಶ ಜೆ. ನಿಟ್ಟಾಲಿ ಆದೇಶ ಹೊರಡಿಸಿದ್ದರು. ಈಗ ಮತ್ತೆ ಅವಲಗುರ್ಕಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಕಾಶ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅವರು ತನ್ನ ಪತ್ನಿ ಹೆಸರಿಗೆ ದಾಖಲೆ ಸೃಷ್ಟಿಸಿ ಸೈಟ್ ಮಾರಾಟ ಮಾಡಿದ್ದರು. ಸದ್ಯ ಗ್ರಾ.ಪಂ ಅಧ್ಯಕ್ಷೆ ನಾಗಮಣಿ ಅನುಮತಿ ಮೇರೆಗೆ ಪಿಡಿಒ ಅರುಣ ಗೋಪಿ ಈ ಆದೇಶವನ್ನು ಹೊರಡಿಸಿದ್ದಾರೆ..
ಗ್ರಾಮ ಪಂಚಾಯ್ತಿಯೊಂದರ ವ್ಯಾಪ್ತಿಗೆ ಬರುವ ಹಳೇ ಗ್ರಾಮವನ್ನೇ ರಕ್ಷಿಸಿ ಭದ್ರಪಡಿಸಬೇಕಾಗಿದ್ದ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು, ಅಧಿಕಾರಿಗಳು, ಆ ಗ್ರಾಮವೊಂದರಲ್ಲಿ ಜನವಸತಿ ಇಲ್ಲವೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿವೇಶನಗಳನ್ನಾಗಿ ವಿಂಗಡಿಸಿ, ನನಗೊಂದು, ನನ್ನ ಹೆಂಡತಿ ಮಕ್ಕಳಿಗೂ ಒಂದೊಂದು ಎನ್ನುವ ರೀತಿಯಲ್ಲಿ ನಿವೇಶನಗಳನ್ನು ಅಕ್ರಮವಾಗಿ ಖಾತೆ ಮಾಡಿಕೊಂಡು ಮಾರಾಟ ಮಾಡಿದ್ದರು.
ಸಾಲದೆಂಬಂತೆ ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳ ರೂಪದಲ್ಲಿ ಮಾರಾಟ ಮಾಡಲಾಗಿತ್ತು. ತಮಿಳುನಾಡು ಮೂಲದ ಈಶಾ ಲೈಪ್ ಪ್ರೈವೆಟ್ ಲಿಮಿಟೆಡ್ ನ ಪ್ರತಿನಿಧಿ ಪ್ರಭಾಕರ್ ಗೋಪಾಲನ್ ಗೆ ಮಾರಟ ಮಾಡಲಾಗಿತ್ತು. 42 ನಿವೇಶನಗಳ ರೂಪದಲ್ಲಿ ಪ್ರಭಾಕರ್ ಗೋಪಾಲನ್ ಗೆ ಮಾರಾಟ ಮಾಡಲಾಗಿತ್ತು. ತಲಾ ನಿವೇಶನಗಳಿಗೆ 6 ಲಕ್ಷ ರೂಪಾಯಿ ಪಡೆದು ಮಾರಾಟ ಮಾಡಲಾಗಿತ್ತು. ತನಿಖಾ ತಂಡದಿಂದ ಅಕ್ರಮ, ಅವ್ಯವಹಾರ, ಕರ್ತವ್ಯಲೋಪ, ವ್ಯವಸ್ಥಿತ ಷಡಂತ್ರ್ಯ ಬಯಲಾಗಿದ್ದು ಪ್ರಕರಣದಲ್ಲಿ ಪಾತ್ರದಾರಿಗಳಾದ ಪಿ.ಡಿ.ಓ ವೆಂಕಟೇಶ, ಬಿಲ್ ಕಲಡಕ್ಟರ್ ಪ್ರಕಾಶ ರವರನ್ನು ಅಮಾನತು ಆಗಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications