ಚಿಕ್ಕಬಳ್ಳಾಪುರ: ಸುಧಾಕರ್ ಪರ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ
ಚಿಕ್ಕಬಳ್ಳಾಪುರ, ನವೆಂಬರ್ 30: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ 'ಅನರ್ಹ' ಸುಧಾಕರ್ ಪರವಾಗಿ ಉಪಚುನಾವಣೆ ಪ್ರಚಾರಕ್ಕೆಂದು ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಆಗಮಿಸಿದ್ದಾರೆ.
ಸುಧಾಕರ್ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿರುವ ಬ್ರಹ್ಮಾನಂದಂ ಅವರನ್ನು ನೋಡಲು ಜನರು ಮುಗಿಬಿದ್ದರು. ಬ್ರಹ್ಮಾನಂದಂ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಜನರು ಸಂತಸಪಟ್ಟರು. ಈ ವೇಳೆ ನೂಕುನುಗ್ಗಲು ಉಂಟಾಗಿ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಕೆಲವು ದಿನಗಳ ಹಿಂದಷ್ಟೆ ಕನ್ನಡದ ಖ್ಯಾತ ನಟಿ, ಚಿಕ್ಕಬಳ್ಳಾಪುರದವರೇ ಆದ ಹರಿಪ್ರಿಯಾ ಅವರು ಸುಧಾಕರ್ ಪರವಾಗಿ ಪ್ರಚಾರ ಮಾಡಿದ್ದರು. ಈಗ ತೆಲುಗು ನಟ ಬ್ರಹ್ಮಾನಂದಂ ಅವರನ್ನು ಪ್ರಚಾರಕ್ಕೆ ಕರೆತಂದಿದ್ದಾರೆ ಸುಧಾಕರ್.

ತೆಲುಗು ಭಾಷಿಕರು ಹೆಚ್ಚಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ತೆಲುಗು ನಟರಿಗೆ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬ್ರಹ್ಮಾನಂದಂ ಅವರಿಗಂತೂ ಎಲ್ಲ ವರ್ಗದ, ವಯೋಮಾನದ ಅಭಿಮಾನಿಗಳು ಇದ್ದಾರೆ. ಹಾಗಾಗಿ ಅವರನ್ನು ಪ್ರಚಾರಕ್ಕೆ ಕರೆತರಲಾಗಿದೆ.
ಪ್ರಚಾರದ ವೇಳೆ ಮಾತನಾಡಿದ ಬ್ರಹ್ಮಾನಂದಂ, 'ಕ್ಷೇತ್ರದ ಅಭಿವೃದ್ಧಿಗೆ ಸುಧಾಕರ್ ಅವರಿಗೆ ಮತ ನೀಡಿ. ಸುಧಾಕರ್ ಒಳ್ಳೆಯ ತನದ ಬಗ್ಗೆ ಹೇಳಲು ಹೈದರಾಬಾದ್ ನಿಂದ ಇಲ್ಲಿಗೆ ಬಂದಿರುವೆ, ಸುಧಾಕರ್ ಅವರನ್ನು ಗೆಲ್ಲಿಸಿದರೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಮತ್ತೆ ಇಲ್ಲಿಗೆ ಬರುವೆ' ಎಂದು ಹೇಳಿದರು.

ವಿಧಾನಸಭೆ ಚುನಾವಣೆ ವೇಳೆಗೆ ಚಿಕ್ಕಬಳ್ಳಾಪುರದಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ನವೀನ್ ಕಿರಣ್ ತಮ್ಮ ಪರವಾಗಿ ಪ್ರಚಾರ ಮಾಡಿಸಲು ಪವನ್ ಕಲ್ಯಾಣ್ ಅವರನ್ನೇ ಕರೆತಂದಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications