ಚಿಕ್ಕಬಳ್ಳಾಪುರ: ಸುಧಾಕರ್ ಪರ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ
ಚಿಕ್ಕಬಳ್ಳಾಪುರ, ನವೆಂಬರ್ 30: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ 'ಅನರ್ಹ' ಸುಧಾಕರ್ ಪರವಾಗಿ ಉಪಚುನಾವಣೆ ಪ್ರಚಾರಕ್ಕೆಂದು ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಆಗಮಿಸಿದ್ದಾರೆ.
ಸುಧಾಕರ್ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿರುವ ಬ್ರಹ್ಮಾನಂದಂ ಅವರನ್ನು ನೋಡಲು ಜನರು ಮುಗಿಬಿದ್ದರು. ಬ್ರಹ್ಮಾನಂದಂ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಜನರು ಸಂತಸಪಟ್ಟರು. ಈ ವೇಳೆ ನೂಕುನುಗ್ಗಲು ಉಂಟಾಗಿ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಕೆಲವು ದಿನಗಳ ಹಿಂದಷ್ಟೆ ಕನ್ನಡದ ಖ್ಯಾತ ನಟಿ, ಚಿಕ್ಕಬಳ್ಳಾಪುರದವರೇ ಆದ ಹರಿಪ್ರಿಯಾ ಅವರು ಸುಧಾಕರ್ ಪರವಾಗಿ ಪ್ರಚಾರ ಮಾಡಿದ್ದರು. ಈಗ ತೆಲುಗು ನಟ ಬ್ರಹ್ಮಾನಂದಂ ಅವರನ್ನು ಪ್ರಚಾರಕ್ಕೆ ಕರೆತಂದಿದ್ದಾರೆ ಸುಧಾಕರ್.

ತೆಲುಗು ಭಾಷಿಕರು ಹೆಚ್ಚಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ತೆಲುಗು ನಟರಿಗೆ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬ್ರಹ್ಮಾನಂದಂ ಅವರಿಗಂತೂ ಎಲ್ಲ ವರ್ಗದ, ವಯೋಮಾನದ ಅಭಿಮಾನಿಗಳು ಇದ್ದಾರೆ. ಹಾಗಾಗಿ ಅವರನ್ನು ಪ್ರಚಾರಕ್ಕೆ ಕರೆತರಲಾಗಿದೆ.
ಪ್ರಚಾರದ ವೇಳೆ ಮಾತನಾಡಿದ ಬ್ರಹ್ಮಾನಂದಂ, 'ಕ್ಷೇತ್ರದ ಅಭಿವೃದ್ಧಿಗೆ ಸುಧಾಕರ್ ಅವರಿಗೆ ಮತ ನೀಡಿ. ಸುಧಾಕರ್ ಒಳ್ಳೆಯ ತನದ ಬಗ್ಗೆ ಹೇಳಲು ಹೈದರಾಬಾದ್ ನಿಂದ ಇಲ್ಲಿಗೆ ಬಂದಿರುವೆ, ಸುಧಾಕರ್ ಅವರನ್ನು ಗೆಲ್ಲಿಸಿದರೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಮತ್ತೆ ಇಲ್ಲಿಗೆ ಬರುವೆ' ಎಂದು ಹೇಳಿದರು.

ವಿಧಾನಸಭೆ ಚುನಾವಣೆ ವೇಳೆಗೆ ಚಿಕ್ಕಬಳ್ಳಾಪುರದಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ನವೀನ್ ಕಿರಣ್ ತಮ್ಮ ಪರವಾಗಿ ಪ್ರಚಾರ ಮಾಡಿಸಲು ಪವನ್ ಕಲ್ಯಾಣ್ ಅವರನ್ನೇ ಕರೆತಂದಿದ್ದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications