ಕೈ ಕತ್ತರಿಸುತ್ತೇನೆ ಎಂದಿದ್ದ ಶಾಸಕನ ಮೇಲೆ ಎಫ್ಐಆರ್
ಚಿಕ್ಕಬಳ್ಳಾಪುರ, ನವೆಂಬರ್ 10: ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ ವಿರುದ್ಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಾಗಾಗಿ ಶಾಸಕ ಎಚ್ಎನ್ ಎಸ್ ವಿರುದ್ಧ ಐಪಿಸಿ ಸೆಕ್ಷನ್ 120b, 124, 121, 141, 506, 506b, 159 ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ: ಶಿವಶಂಕರ್ ರೆಡ್ಡಿ ಖರ್ಚಾಗದ ಅನುದಾನ ಹೆಚ್ಚು
ಮಂಚೇನಳ್ಳಿ ತಾಲೂಕು ರಚನೆ ಹಾಗೂ ತೊಂಡೇಬಾವಿಯನ್ನು ಮಂಚೇನಳ್ಳಿಗೆ ಸೇರಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಶಾಸಕ ಶಿವಶಂಕರ ರೆಡ್ಡಿ, ನನ್ನ ಕ್ಷೇತ್ರದ ತಂಟೆಗೆ ಬಂದರೆ ಕೈ ಕತ್ತರಿಸುವುದಾಗಿ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಅನರ್ಹ ಶಾಸಕ ಸುಧಾಕರ್ಗೆ ಎಚ್ಚರಿಕೆ ನೀಡಿದ್ದರು.
ಶಿವಶಂಕರ ರೆಡ್ಡಿ ಅವರು ಮಂಚೇನಹಳ್ಳಿ ತಾಲೂಕು ರಚನೆ ವಿಚಾರವಾಗಿ ಮಾತನಾಡುತ್ತಾ ನನ್ನ ಕ್ಷೇತ್ರದಲ್ಲಿ ಕೈ ಹಾಕಿದವರ ಕೈ ಕತ್ತರಿಸುತ್ತೇನೆ ಎಂದು ಪರೋಕ್ಷವಾಗಿ ಅನರ್ಹ ಶಾಸಕ ಡಾ. ಕೆ. ಸುಧಾಕರ್ ಅವರ ವಿರುದ್ಧ ಗುಡುಗಿದ್ದರು.
ನಗರ ಸಭೆ ವ್ಯಾಪ್ತಿಯ ನದಿಗಡ್ಡೆ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಸಂತೆ ಮೈದಾನದಲ್ಲಿ ಹಾಗೂ ನಗರಸಭೆ ವ್ಯಾಪ್ತಿಯ ಬಡವರ ಮನೆಗಳ ಮೇಲೆ ಕೈ ಹಾಕಿದರೆ ಶಾಸಕರ ಕೈ ಕತ್ತರಿವುದು ನಾನೇ ಎಂದು ಹೇಳಿರುವುದು ಇದೀಗ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು.