ಕಸ ವಿಲೇವಾರಿ ಸಮಸ್ಯೆ: ಅಂಬೇಡ್ಕರ್ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ
ಚಿಕ್ಕಬಳ್ಳಾಪುರ ನಗರದ 30ನೇ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಕ್ರಮ ಕೈಗೊಳ್ಳುವಲ್ಲಿ ನಗರ ಸಭೆ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ನಿರ್ಲಕ್ಷ್ಯ ತೋರುತ್ತಿದ್ದು, ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದೆ.
ಚಿಕ್ಕಬಳ್ಳಾಪುರ, ಫೆಬ್ರವರಿ 3: ಚಿಕ್ಕಬಳ್ಳಾಪುರ ನಗರದ 30ನೇ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಕಸ ವಿಲೇವಾರಿ ವ್ಯವಸ್ಥೆ ಹಳಿ ತಪ್ಪಿದ್ದು ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಅಂಬೇಡ್ಕರ್ ನಗರದಲ್ಲಿ ಆರ್ಥಿಕವಾಗಿ ಹಿಂದುಳಿದ ಕೆಲವು ಕುಟುಂಬಳು ವಾಸವಿದ್ದು, ಅಧಿಕಾರಿಗಳು ಸಕಾಲದಲ್ಲಿ ಕಸ ವಿಲೇವಾರಿ ಮಾಡುತ್ತಿಲ್ಲ. ಹೀಗಾಗಿ ನಿವಾಸಿಗಳು ಕಸವನ್ನು ಎಲ್ಲಂದರಲ್ಲಿ ರಾಶಿ ಹಾಕುತ್ತಿದ್ದಾರೆ. ಇನ್ನು ಅಂಗಡಿ, ಹೋಟೆಲ್ ಮಾಲೀಕರು ವೈದ್ಯನಿಕವಾಗಿ ಕಸ ವಿಲೇವಾರಿ ಮಾಡುತ್ತಿಲ್ಲ. ತಂದು ಚರಂಡಿ ಸುರಿಯುತ್ತಿದ್ದಾರೆ ಎಂದು ಬಡಾವಣೆಯ ಸ್ಥಳೀಯ ವೆಂಕಟೇಶ್ ಆರೋಪಿಸಿದ್ದಾರೆ.
ಇನ್ನು ನಗರಸಭೆಯ ಪೌರ ಕಾರರ್ಮಿಕರು ಪ್ರತಿನಿತ್ಯ ಮನೆ ಮನೆಗೆ ಭೇಟಿ ನೀಡಿ ಕಸ ಸಂಗ್ರಹ ಮಾಡುವ ಪದ್ದತಿ ಇಲ್ಲಿ ಮರೀಚಿಕೆಯಾಗಿದೆ. ಇದರಿಂದಾಗಿ ನಿವಾಸಿಗಳು ಚರಂಡಿ, ರಸ್ತೆ ಬದಿ, ಖಾಲಿ ನಿವೇಶನಗಳಿಗೆ ಎಸೆಯುತ್ತಿದ್ದಾರೆ. ಕಸವನ್ನು ಚರಂಡಿಗೆ ಹಾಕುವುದರಿಂದ ಕೊಳಚೆ ನೀರು ಸರಾಗವಾಗಿ ಹರಿಯದೆ ಚರಂಡಿಯಲ್ಲಿ ಶೇಖರಣೆಯಾಗುತ್ತಿದೆ. ಇದರಿಂದಾಗಿ ದುರ್ವಾಸನೆ ಬರುತ್ತಿದ್ದು, ಸೊಳ್ಳೆ, ನೋಣಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳ ಭೀತಿ ಮನೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಡಾವಣೆಯು ಅತ್ಯಂತ ಹಿಂದುಳಿದಿದೆ. ಕುಡಿಯುವ ನೀರು, ಸ್ವಚ್ಚತೆ, ಚರಂಡಿ ವ್ಯವಸ್ಥೆಯಿಲ್ಲ. ನಿವಾಸಿಗಳು ನಿಗದಿತ ಸ್ಥಳದಲ್ಲಿ ಕಸ ಹಾಕಬೇಕು. ಇಲ್ಲದಿದ್ದರೆ ಪೌರಕಾರ್ಮಿಕರಿಗೆ ನೀಡಬೇಕು ಎಂದು ನಗರಸಭೆಯು ಸೂಚನೆ ನೀಡಿದೆ. ಆದರೆ ಪೌರಕಾರ್ಮಿಕರು ಮನೆ ಮನೆಗೆ ಸಕಾಲದಲ್ಲಿ ಬಾರದೆ ಇರುವುದರಿಂದ ಸ್ವಚ್ಛತೆ ಮರೀಚಿಕೆಯಾಗಿದೆ ಎಂದು ಬಡಾವಣೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಕಸದ ಸಮಸ್ಯೆ ಬಗ್ಗೆ ಸ್ಥಳೀಯ ನಗರಸಭೆ ಸದಸ್ಯರಿಗೆ, ನಗರಸಭೆ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ರೀತಿ ಕ್ರಮಕೈಗೊಂಡಿಲ್ಲ. ನಾಯಿ, ಹಂದಿ, ಹಸುಗಳ ಹಾವಳಿ ಹೆಚ್ಚಾಗಿದ್ದು ಮಕ್ಕಳು, ವೃದ್ಧರು ರಸ್ತೆಯಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ ನಗರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆಯನ್ನು ಬಗೆಹರಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications